ದೆಹಲಿ ಜನರಿಗೆ ಈಗ 'ಬೆಂಕಿ' ಎಂದರೆ ಬಲು ಇಷ್ಟ!
ದೆಹಲಿ, ಡಿಸೆಂಬರ್.18: ಬೆಂಕಿ ಎಂದರೆ ಸಾಕು ಎಂಥವರೂ ಬೆಚ್ಚಿ ಬೀಳುತ್ತಾರೆ, ಭಯ ಪಡುತ್ತಾರೆ. ಆದರೆ, ರಾಷ್ಟ್ರ ರಾಜಧಾನಿ ಜನರಿಗೆ ಮಾತ್ರ ಈಗಿನ ಮಟ್ಟಿಗೆ ಬೆಂಕಿ ಎಂದರೆ ಬಲು ಇಷ್ಟವಾಗುತ್ತಿದೆ. ಅದಕ್ಕೂ ಬಹುಮುಖ್ಯವಾದ ಕಾರಣವೂ ಇದೆ.
ಹೌದು, ದೆಹಲಿಯಲ್ಲಿ ಜನರು ಬೆಂಕಿಯನ್ನು ಬಿಟ್ಟು ಇರಲಾರದಂತಾ ಪರಿಸ್ಥಿತಿ ನಿರ್ಮಾಣವಾಗಿ ಬಿಟ್ಟಿದೆ. ಏಕೆಂದರೆ 22 ವರ್ಷಗಳಲ್ಲೇ ಕಂಡು ಕೇಳರಿಯದಂತಾ ಚಳಿ ರಾಷ್ಟ್ರ ರಾಜಧಾನಿಯನ್ನು ಆವರಿಸಿದೆ. ಮೈಕೊರೆಯುವ ಚಳಿಯಿಂದ ಬಚಾವ್ ಆಗಲು ಜನರು ಬೆಳ್ಳಂಬೆಳಗ್ಗೆ ಬೆಂಕಿ ಕಾಸಿಕೊಳ್ಳುತ್ತಾ ಕೂರುವಂತೆ ಆಗಿದೆ.
ಡಿಸೆಂಬರ್.18 ಬುಧವಾರ ಬೆಳಗಿನ ಚಳಿ ಹೊಸ ದಾಖಲೆಯನ್ನೇ ಬರೆದಿದೆ. ವಾತಾವರಣದಲ್ಲಿನ ಉಷ್ಣಾಂಶ ಕನಿಷ್ಠ 7.2 ಡಿಗ್ರಿ ಸೆಲ್ಸಿಯಸ್ ಆಗಿದ್ದು, ಗರಿಷ್ಠ 14 ಡಿಗ್ರಿ ಸೆಲ್ಸಿಯಸ್ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.
ದೆಹಲಿ ಹಾಗೂ ಎನ್ ಸಿಆರ್ ಪ್ರದೇಶದಲ್ಲಿ ತೀವ್ರ ಚಳಿ ಆವರಿಸಿದ್ದು, ಕಳೆದ ಸೋಮವಾರ ಹಾಗೂ ಮಂಗಳವಾರ ಗರಿಷ್ಠ ಉಷ್ಣಾಂಶ 12.2 ಡಿಗ್ರಿ ಸೆಲ್ಸಿಯಸ್ ಆಗಿದೆ. ಇದು ಕಳೆದ 22 ವರ್ಷಗಳಲ್ಲೇ ಅತ್ಯಂತ ಕನಿಷ್ಠ ಉಷ್ಣಾಂಶ ಎನ್ನಲಾಗಿದೆ.
ದೆಹಲಿಯಲ್ಲಿ ಆವರಿಸಿರುವ ಚಳಿಗೆ ಜನರು ಮನೆಯಿಂದ ಹೊರ ಬರುವುದಕ್ಕೆ ಭಯ ಪಡುವಂತಾ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂಬರುವ ದಿನಗಳಲ್ಲಿ ಚಳಿಯ ಪ್ರಮಾಣ ಮತ್ತಷ್ಟು ಏರಿಕೆ ಆಗುವ ಸಾಧ್ಯತೆಗಳಿವೆ ಎಂದು ರಾಷ್ಟ್ರೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ದೆಹಲಿಯಷ್ಟೇ ಅಲ್ಲದೇ ಪಂಜಾಬ್, ಹರಿಯಾಣ, ಚಂಡೀಗಢ, ರಾಜಸ್ಥಾನ್ ನಲ್ಲೂ ವಾತಾವರಣ ತೀರಾ ಹದಗೆಟ್ಟಿದೆ. ಮುಂದಿನ ದಿನಗಳಲ್ಲಿ ಚಳಿಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಮುನ್ಸೂಚನೆ ಇದೆ ಎಂದು ವಾಯು ಗುಣಮಟ್ಟ ವಾತಾವರಣ ಪ್ರಸಾರ ಹಾಗೂ ಸಂಶೋಧನಾ ಘಟಕ ತಿಳಿಸಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications