ಬಿಜೆಪಿಗೆ ಮತಹಾಕುವುದು ಸರಿಯೇ ಎಂದು ಒಮ್ಮೆ ಯೋಚಿಸಿ ವೋಟ್ ಮಾಡಿ: ಕೇಜ್ರಿವಾಲ್

Recommended Video

      ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಏನಾಗುತ್ತೆ ಗೊತ್ತಾ..?

      ನವದೆಹಲಿ, ಮೇ 10: ಆರನೇ ಹಂತದ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ತೆರೆಬೀಳಲಿದೆ. ಭಾನುವಾರ (ಮೇ 12) ನಡೆಯಲಿರುವ ಚುನಾವಣೆಯಲ್ಲಿ ದೆಹಲಿಯ ಎಲ್ಲಾ ಏಳು ಲೋಕಸಭಾ ಕ್ಷೇತ್ರಗಳೂ ಸೇರಿವೆ.

      ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

      ದೆಹಲಿಯಲ್ಲಿ ಬಿಜೆಪಿ - ಆಪ್ - ಕಾಂಗ್ರೆಸ್ ನಡುವೆ ತ್ರಿಕೋಣ ಸ್ಪರ್ಧೆ ಏರ್ಪಟ್ಟಿದ್ದು, ದೆಹಲಿಯ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ದೆಹಲಿಯ ಮತದಾರರಲ್ಲಿ ಮನವಿಯೊಂದನ್ನು ಮಾಡಿದ್ದಾರೆ.

      ಒಂದು ವೇಳೆ ನರೇಂದ್ರ ಮೋದಿ ಸರಕಾರ ಮತ್ತೆ ಅಧಿಕಾರಕ್ಕೆ ಬಂದರೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೇಂದ್ರ ಗೃಹ ಸಚಿವರಾಗಲಿದ್ದಾರೆ. ಹಾಗಾಗಿ, ಎಲ್ಲಾ ಮತದಾರರು ಯೋಚಿಸಿ ಮತಹಾಕಬೇಕಿದೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

      Delhi CM Arvind Kejriwal appeal to voters, think you before vote

      ದೇಶದ ಗೃಹ ಸಚಿವ ಅಮಿತ್ ಶಾ ಏನಾದರೂ ಆದರೆ, ಈ ರಾಷ್ಟ್ರದ ಪರಿಸ್ಥಿತಿ ಏನಾಗಬಹುದು ಎನ್ನುವುದನ್ನು ಎಲ್ಲರೂ ಅರಿಯಬೇಕು ಎಂದು ಮನವಿ ಮಾಡಿರುವ ಕೇಜ್ರಿವಾಲ್, ಪ್ರಧಾನಿ ಮೋದಿ ಒಬ್ಬ ನಕಲಿ ರಾಷ್ಟ್ರೀಯವಾದಿ ಎಂದು ಜರಿದಿದ್ದಾರೆ.

      ಕೇಜ್ರಿವಾಲ್ ಈ ಹಿಂದೆ ಹಲವು ಬಾರಿ ಅಮಿತ್ ಶಾ, ಗೃಹಸಚಿವರಾಗಬಹುದು ಎನ್ನುವ ಹೇಳಿಕೆಯನ್ನು ನೀಡಿದ್ದರು. ಪಾಕ್ ಪ್ರಧಾನಿಯೊಬ್ಬರು ಇಂತವರಿಗೆ ಮತನೀಡಿ ಎಂದು ಹೇಳಿದ ಉದಾಹರಣೆ ನಮ್ಮ ಮುಂದಿಲ್ಲ, ಆದರೆ ಇಮ್ರಾನ್ ಖಾನ್, ಮೋದಿ ಪರವಾಗಿ ಬ್ಯಾಟ್ ಮಾಡಿದ್ದಾರೆಂದು ಕೇಜ್ರಿವಾಲ್ ಟೀಕಿಸಿದ್ದಾರೆ.

      ರಾಹುಲ್ ಮತ್ತು ಪ್ರಿಯಾಂಕಾ ಇಬ್ಬರೂ ಎಲ್ಲಿ ಬಿಜೆಪಿ ವಿರುದ್ದ ಕಾಂಗ್ರೆಸ್ಸಿಗೆ ನೇರ ಸ್ಪರ್ಧೆಯಿದೆಯೋ ಅಲ್ಲಿ ಪ್ರಚಾರಕ್ಕೆ ಹೋಗುತ್ತಿಲ್ಲ, ಪ್ರಿಯಾಂಕಾ ಸುಮ್ಮನೆ ಟೈಮ್ ವೇಸ್ಟ್ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ದವೂ ಕೇಜ್ರಿವಾಲ್ ಕಿಡಿಕಾರಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+