ಗೌರ್ನರ್ ಆದೇಶವನ್ನು ಸಾರ್ವಜನಿಕವಾಗಿ ಹರಿದು ಹಾಕಿದ ಅರವಿಂದ್ ಕೇಜ್ರಿವಾಲ್

ನವದೆಹಲಿ, ಜುಲೈ 30: ದೆಹಲಿ ಸರ್ಕಾರ ಮತ್ತು ಅಲ್ಲಿನ ಗೌರ್ನರ್ ನಡುವಿನ ಕಿತ್ತಾಟ ಮುಗಿಯುವ ಯಾವ ಲಕ್ಷಣವೂ ಕಾಣುತ್ತಿಲ್ಲ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗೌರ್ನರ್ ಆದೇಶವನ್ನು ತುಂಬಿದ ಸಾರ್ವಜನಿಕ ಸಭೆಯಲ್ಲಿಯೇ ಹರಿದು ಬಿಸಾಡಿ ಗೌರ್ನರ್ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ.

ಸಾರ್ವಜನಿಕ ಸಂವಾದದಲ್ಲಿ ಭಾಗವಹಿಸಿದ್ದ ಅರವಿಂದ ಕೇಜ್ರಿವಾಲ್ ಅವರು, ಗೌರ್ನರ್ ಅವರು ಸಿಸಿಟಿವಿ ಅಳವಡಿಕೆ ಸಂಬಂಧ ನೀಡಿದ್ದ ಆದೇಶದ ಪ್ರತಿಯನ್ನು ಜನರ ಎದುರು ಹರಿದು ಬಿಸಾಡಿದರು.

Delhi CM Arvind Kejriwal tears off Governors order in public program

ಸಿಸಿಟಿವಿ ಹಾಕಿಕೊಳ್ಳಲು ಪರವಾನಗಿ ಪಡೆಯಬೇಕು ಎಂದು ಗೌರ್ನರ್ ಆದೇಶ ಹೊರಡಿಸಿದ್ದರು. ಆದರೆ ಈ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿದ ಅರವಿಂದ ಕೇಜ್ರಿವಾಲ್ ಇದೊಂದು ಜನರಿಂದ ವಸೂಲಿ ಮಾಡುವ ಆದೇಶ ಇಂತಹಾ ಆದೇಶಕ್ಕೆ ಈ ರೀತಿಯ ಮರ್ಯಾದೆ ಮಾಡಬೇಕು ಎಂದು ಆದೇಶದ ಪ್ರತಿಯನ್ನು ಹರಿದು ಹಾಕಿದರು.

ಕೆಲವು ದಿನಗಳ ಹಿಂದೆಯಷ್ಟೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೇರಿ ಕೆಲವು ಸಚಿವರು ಗೌರ್ನರ್ ಅವರ ನಿವಾಸದಲ್ಲಿ ಉಪವಾಸ ಸತ್ಯಾಗ್ರಹ ಕೂತು ಪ್ರತಿಭಟನೆ ಮಾಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+