ಮಾನನಷ್ಟ ಮೊಕದ್ದಮೆ ಪ್ರಕರಣ: ಅರವಿಂದ್ ಕೇಜ್ರಿವಾಲ್ ಖುಲಾಸೆ
ನವದೆಹಲಿ, ಅಕ್ಟೋಬರ್ 28: ಮಾನನಷ್ಟ ಮೊಕದ್ದಮೆ ಪ್ರಕರಣವೊಂದಕ್ಕೆಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಖುಲಾಸೆ ಮಾಡಲಾಗಿದೆ.
ಬಿಜೆಪಿ ಸಂಸದ ರಮೇಶ್ ಬಿಧುರಿ ಹೂಡಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ನ್ಯಾಯಲಯವು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಖುಲಾಸೆಗೊಳಿಸಿದೆ.
ದಕ್ಷಿಣ ದೆಹಲಿ ಲೋಕಸಭಾ ಕ್ಷೇತ್ರ ಸಂಸದರಾಗಿರುವ ಬಿಧುರಿ ಐಪಿಸಿ ಸೆಕ್ಷನ್ 500ರಲ್ಲಿ ದೂರು ದಾಖಲಿಸಿದ್ದರು.

2017ರ ಜುಲೈನಲ್ಲಿ ಖಾಸಗಿ ಸುದ್ದಿವಾಹಿನಿಯಲ್ಲಿ ನೀಡಿದ ಸಂದರ್ಶನದಲ್ಲಿ ತಮ್ಮನ್ನು ಅಪರಾಧಿ ಎಂದು ಕರೆಯುವ ಮೂಲಕ ಕೇಜ್ರಿವಾಲ್ ಮಾನನಷ್ಟ ಹೇಳಿಕೆ ನೀಡಿದ್ದಾರೆ ಎಂದು ಬಿಧುರಿ ದೂರಿದ್ದರು.












Click it and Unblock the Notifications