ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾಗೆ ತುತ್ತಾದ ಕುಟುಂಬಕ್ಕೆ 10 ಸಾವಿರ ನೀಡಿ: ದೆಹಲಿ ಕಾಂಗ್ರೆಸ್ ಒತ್ತಾಯ

|
Google Oneindia Kannada News

ದೆಹಲಿ, ಜೂನ್ 15: ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ದೆಹಲಿಯ ಸರ್ವಪಕ್ಷೆ ಸಭೆ ಕರೆದಿದ್ದರು.

ಈ ಸಭೆಯಲ್ಲಿ ''ಕೊರೊನಾ ವೈರಸ್ ಸೋಂಕಿಗೆ ಒಳಗಾಗಿರುವ ಎಲ್ಲ ಕುಟುಂಬಗಳಿಗೂ 10 ಸಾವಿರ ರೂಪಾಯಿ ಪರಿಹಾರ ಘೋಷಿಸಬೇಕು'' ಎಂದು ದೆಹಲಿ ಕಾಂಗ್ರೆಸ್ ಒತ್ತಾಯಿಸಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ ಕೊರೊನಾ ಹೆಚ್ಚಳ: ನಾಳೆ ಅಮಿತ್ ಷಾ ಮತ್ತು ಅರವಿಂದ್ ಕೇಜ್ರಿವಾಲ್ ಮಹತ್ವದ ಸಭೆದೆಹಲಿಯಲ್ಲಿ ಕೊರೊನಾ ಹೆಚ್ಚಳ: ನಾಳೆ ಅಮಿತ್ ಷಾ ಮತ್ತು ಅರವಿಂದ್ ಕೇಜ್ರಿವಾಲ್ ಮಹತ್ವದ ಸಭೆ

''ದೆಹಲಿಯಲ್ಲಿ ಎಲ್ಲರಿಗೂ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ಮಾಡಬೇಕು. ಜೊತೆಗೆ ಕೊರೊನಾ ಸೋಂಕಿಗೆ ಒಳಗಾದ ಕುಟುಂಬಕ್ಕೆ ಮತ್ತು ಕಂಟೈನ್‌ಮೆಂಟ್‌ ಜೋನ್‌ಗಳಲ್ಲಿ ಸಿಲುಕಿಕೊಂಡಿರುವ ಕುಟುಂಬಗಳಿಗೆ ತಲಾ 10 ಸಾವಿರ ರೂಪಾಯಿ ನೀಡಬೇಕು'' ಎಂದು ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ.

Delhi Congress demanded that Rs 10000 be paid to every family whose member is infected of COVID 19

''ದೆಹಲಿಯಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆ ಇರುವುದರಿಂದ ಬ್ಯಾಚುಲರ್ ಆಫ್ ಫಾರ್ಮಸಿ ಅಥವಾ ನಾಲ್ಕನೇ ವರ್ಷದ ನರ್ಸಿಂಗ್‌ನ ವಿದ್ಯಾರ್ಥಿಗಳನ್ನು ಪರ್ಯಾಯವಾಗಿ ಕೊವಿಡ್ ವಿರುದ್ಧದ ಹೋರಾಟದಲ್ಲಿ ಬಳಸಿಕೊಳ್ಳಬೇಕು'' ಎಂದು ದೆಹಲಿ ಕಾಂಗ್ರೆಸ್ ಆಗ್ರಹಿಸಿದೆ.

ಕೇಂದ್ರ ಸಚಿವ ಅಮಿತ್ ಶಾ, ಎಎಪಿ ಸಂಸದ ಸಂಜಯ್ ಸಿಂಗ್, ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಕುಮಾರ್ ಚೌಧರಿ, ದೆಹಲಿ ಆರೋಗ್ಯ ಇಲಾಖೆ ಕಾರ್ಯದರ್ಶಿ ಸೇರಿದಂತೆ ಹಲವರು ಈ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ದೆಹಲಿಯಲ್ಲಿ ಪ್ರಸ್ತುತ 41,182 ಮಂದಿಗೆ ಕೊರೊನಾ ವೈರಸ್‌ ತಗುಲಿದೆ. ಇದರಲ್ಲಿ 15,823 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. 24,032 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. 1327 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

English summary
Delhi Congress has demanded that Rs 10000 be paid to every family whose member is infected or in containment zone at all party meeting with amit sha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X