ಸೋನಿಯಾ ಅಳಿಯ ರಾಬರ್ಟ್ ವಾದ್ರಾಗೆ ವಿದೇಶಕ್ಕೆ ತೆರಳಲು ಕೋರ್ಟ್ ಅನುಮತಿ
Recommended Video
ನವದೆಹಲಿ, ಸೆಪ್ಟೆಂಬರ್ 13: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿ ಆಗಿರುವ ಉದ್ಯಮಿ ರಾಬರ್ಟ್ ವಾದ್ರಾ ವಿದೇಶಕ್ಕೆ ತೆರಳಲು ದೆಹಲಿ ಕೋರ್ಟ್ ಅನುಮತಿ ನೀಡಿದೆ. ಕಾಂಗ್ರೆಸ್ ನ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಸೆಪ್ಟೆಂಬರ್ ಇಪ್ಪತ್ತೊಂದರಿಂದ ಅಕ್ಟೋಬರ್ ಎಂಟರ ತನಕ ವ್ಯಾಪಾರದ ವಿಚಾರವಾಗಿ ಸ್ಪೇನ್ ನ ಬಾರ್ಸಿಲೋನಾಗೆ ತೆರಳಲು ಅನುಮತಿ ಕೇಳಿದ್ದರು.
ಸ್ಪೇನ್ ಹಾಗೂ ಇತರ ಯುರೋಪ್ ದೇಶಗಳಿಗೆ ತೆರಳಲು ರಾಬರ್ಟ್ ವಾದ್ರಾಗೆ ಅನುಮತಿ ನೀಡಿದರೆ ಅದರಿಂದ ತನಿಖೆಗೆ ತೊಂದರೆ ಆಗುತ್ತದೆ ಎಂದು ಗುರುವಾರ ಜಾರಿ ನಿರ್ದೇಶನಾಲಯವು ಕೋರ್ಟ್ ಗೆ ತಿಳಿಸಿತ್ತು. ಆರೋಪಿಯು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಹಾಗೂ ಸಾಕ್ಷ್ಯ ನಾಶ ಮಾಡಬಹುದು ಎಂದು ಇ. ಡಿ. ತಿಳಿಸಿತ್ತು.
ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಐವತ್ತು ವರ್ಷದ ರಾಬರ್ಟ್ ವಾದ್ರಾ ವಿಚಾರಣೆ ನಡೆಯುತ್ತಿದೆ. ಲಂಡನ್ ಮೂಲದ ಆಸ್ತಿ ಖರೀದಿ ಮಾಡಿದ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಈ ವರೆಗೆ ಹನ್ನೆರಡಕ್ಕೂ ಹೆಚ್ಚು ಬಾರಿ ವಾದ್ರಾ ಅವರನ್ನು ಇ. ಡಿ. ಪ್ರಶ್ನೆ ಮಾಡಿದೆ.

ರಾಬರ್ಟ್ ವಾದ್ರಾ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಲಂಡನ್ ನಲ್ಲಿ ಹನ್ನೆರಡು ಮಿಲಿಯನ್ ಪೌಂಡ್ಸ್ ಮೌಲ್ಯದ ಒಂಬತ್ತು ಆಸ್ತಿಯನ್ನು ಹೊಂದಿದ್ದಾರೆ ಎಂಬುದು ತನಿಖಾಧಿಕಾರಿಗಳ ವಾದ. ಆ ಆಸ್ತಿಯಲ್ಲಿ ಮೂರು ವಿಲ್ಲಾ ಕೂಡ ಒಳಗೊಂಡಿದೆ. ಉಳಿದದ್ದು ವಿಲಾಸಿ ಫ್ಲ್ಯಾಟ್ ಗಳು. ಈ ಎಲ್ಲವನ್ನೂ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರದ ಆಡಳಿತಾವಧಿಯಲ್ಲೇ ಖರೀದಿ ಮಾಡಿದ್ದಾರೆ.
ಆದರೆ, ಅಕ್ರಮ ಹಣ ವರ್ಗಾವಣೆ ಆರೋಪವನ್ನು ನಿರಾಕರಿಸಿರುವ ರಾಬರ್ಟ್ ವಾದ್ರಾ, ಇದು ರಾಜಕೀಯ ಪ್ರೇರಿತ ಆರೋಪ ಎಂದು ದೂರಿದ್ದಾರೆ. ಕಳೆದ ಏಪ್ರಿಲ್ ಒಂದನೇ ತಾರೀಕು ಷರತ್ತುಬದ್ಧ ಜಾಮೀನು ನೀಡಿತ್ತು ಕೋರ್ಟ್. ದೇಶ ಬಿಟ್ಟು ಹೊರಗೆ ಹೋಗುವ ಮುನ್ನ ದೆಹಲಿ ಕೋರ್ಟ್ ನ ಅನುಮತಿ ಪಡೆಯಬೇಕು ಎಂಬ ಷರತ್ತು ಹಾಕಿತ್ತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications