ಅಕ್ರಮ ಸಂಬಂಧ ಆರೋಪ, ಕುಮಾರ್ ವಿಶ್ವಾಸ್ ವಿರುದ್ಧ ಎಫ್ಐಆರ್?
ನವದೆಹಲಿ, ಮಾರ್ಚ್ 16: ಆಮ್ ಆದ್ಮಿ ಪಕ್ಷದ ಕಾರ್ಯಕರ್ತೆ ಜೊತೆ ಅಕ್ರಮ ಸಂಬಂಧ ಹೊಂದಿರುವ ಆರೋಪ ಹೊತ್ತುಕೊಂಡಿರುವ ಎಎಪಿ ಮುಖಂಡ ಕುಮಾರ್ ವಿಶ್ವಾಸ್ ಅವರಿಗೆ ಮತ್ತೆ ಸಮಸ್ಯೆ ಶುರುವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರ್ ವಿಶ್ವಾಸ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪಟಿಯಾಲ ಹೈಕೋರ್ಟ್ ಬುಧವಾರ (ಮಾರ್ಚ್ 16) ಪೊಲೀಸರಿಗೆ ನಿರ್ದೇಶಿಸಿದೆ.
ಕವಿ ಹಾಗೂ ರಾಜಕಾರಣಿಯಾಗಿರುವ ಕುಮಾರ್ ವಿಶ್ವಾಸ್ (46) ಅವರಿಗೆ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ದೆಹಲಿ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿತ್ತು. ದೆಹಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಬರ್ಖಾ ಶುಕ್ಲಾ ಸಿಂಗ್ ಅವರಿಗೆ ಈ ಬಗ್ಗೆ ಸ್ಪಷ್ಟನೆ ನೀಡಿ ಮೈಕ್ರೋಬ್ಲಾಗಿಂಗ್ ತಾಣ ಟ್ವಿಟ್ಟರ್ ಬಳಸಿ ಕುಮಾರ್ ಉತ್ತರಿಸಿದ್ದರು.
2014ರ ಲೋಕಸಭೆ ಚುನಾವಣೆ ವೇಳೆಯಲ್ಲಿ ಕುಮಾರ್ ವಿಶ್ವಾಸ್ ಪಕ್ಷದ ಕಾರ್ಯಕರ್ತೆ ಜೊತೆ ಅಕ್ರಮ ಸಂಬಂಧ ಹೊಂದಿದ್ದರು ಎಂಬುದು ಆರೋಪವಾಗಿದೆ. ಲೋಕಸಭೆ ಚುನಾವಣೆಗೆ ಕುಮಾರ್ ವಿಶ್ವಾಸ್ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಅಮೇಥಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು.[ಕೇಜ್ರಿ ಟೀಕಿಸಿ, ಮೋದಿ ಹೊಗಳಿದ 'ಎಎಪಿ' ಕುಮಾರ]

ಅಜಯ್ ವೋಹರಾ ಎನ್ನುವವರು ಅಮೇಥಿಯಲ್ಲಿನ ಆಪ್ ಕಾರ್ಯಕರ್ತೆ ಜೊತೆ ಕುಮಾರ್ ವಿಶ್ವಾಸ್ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರಿಗೆ ದೂರು ನೀಡಿದ್ದರು. ಈ ಕುರಿತು ಸರಣಿ ಇ ಮೇಲ್ಗಳನ್ನು ಕಳಿಸಿದ್ದರು.
U hv received ur justice in delhi,now it will b delivered in Punjab😊 https://t.co/eP35tODqr1
— Dr Kumar Vishvas (@DrKumarVishwas) March 16, 2016
ಆದರೆ, ಕುಮಾರ್ ವಿಶ್ವಾಸ್ ಈ ಆರೋಪವನ್ನು ತಳ್ಳಿ ಹಾಕಿದ್ದರು. ಇದು ನನ್ನ ವಿರುದ್ಧ ಮಾಡುತ್ತಿರುವ ಷಡ್ಯಂತ್ರ. ಅಜಯ್ ವೋಹರಾ ಅವರಿಂದ ನನ್ನ ವಿರೋಧಿಗಳು ಈ ದೂರು ಕೊಡಿಸಿದ್ದಾರೆ ಎಂದು ಹೇಳಿದ್ದರು. ಅಲ್ಲದೆ, ಕುಮಾರ್ ವಿಶ್ವಾಸ್ ವಿರುದ್ಧ ಯಾವುದೇ ಗುರುತರ ಸಾಕ್ಷಿಗಳಿಲ್ಲ ಎಂದು ಪೊಲೀಸರು ಹೇಳಿದ್ದರು. ಆದರೆ, ಈಗ ಪಟಿಯಾಲ ಹೈಕೋರ್ಟಿನಿಂದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರೆಸುವಂತೆ ದೆಹಲಿ ಪೊಲೀಸರಿಗೆ ಆದೇಶಿಸಲಾಗಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications