ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದರ್ಯಾಗಂಜ್ ಹಿಂಸಾಚಾರ ಪ್ರಕರಣ 15 ಆರೋಪಿಗಳಿಗೆ ಜಾಮೀನು

|
Google Oneindia Kannada News

ದೆಹಲಿ, ಜನವರಿ.09: ದೆಹಲಿಯ ದರ್ಯಾಗಂಜ್ ಹಿಂಸಾಚಾರ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಆರೋಪಿಗಳಿಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಗುರುವಾರ ವಿಚಾರಣೆ ನಡೆಸಿದ ಕೋರ್ಟ್ ಎಲ್ಲ 15 ಆರೋಪಿಗಳಿಗೆ ಜಾಮೀನು ಮಂಜೂರುಗೊಳಿಸಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೊಂದಣಿ ವಿರುದ್ಧ ದೆಹಲಿಯಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಯುತಿತ್ತು. ಕಳೆದ ಡಿಸೆಂಬರ್.20ರಂದು ಪ್ರತಿಭಟನೆ ಸಂದರ್ಭದಲ್ಲಿ ದೆಹಲಿ ದರ್ಯಾಗಂಜ್ ನಲ್ಲಿ ಪರಿಸ್ಥಿತಿ ಹಿಂಸಾಸ್ವರೂಪ ಪಡೆದುಕೊಂಡಿತ್ತು.

ಬಿಜೆಪಿಯಲ್ಲ ಮಿತ್ರಪಕ್ಷಗಳ ವಿರುದ್ಧವೂ ಸಿಡಿದೆದ್ದ ಮಮತಾ ಬ್ಯಾನರ್ಜಿಬಿಜೆಪಿಯಲ್ಲ ಮಿತ್ರಪಕ್ಷಗಳ ವಿರುದ್ಧವೂ ಸಿಡಿದೆದ್ದ ಮಮತಾ ಬ್ಯಾನರ್ಜಿ

ದರ್ಯಾಗಂಜ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 15 ಮಂದಿಯನ್ನು ಬಂಧಿಸಿದ್ದು, 40ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದುಕೊಂಡಿದ್ದರು. 15 ಮಂದಿ ಆರೋಪಿಗಳನ್ನು ಈ ಹಿಂದೆ ವಿಚಾರಣೆ ನಡೆಸಿದ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

Delhi Court Granted Bail To 15 Accused In Daryaganj Violence Case

ಅಪರಾಧ ವಿಭಾಗಕ್ಕೆ ಜಾಮೀನು ಅರ್ಜಿ ವರ್ಗಾವಣೆ:

ಜನವರಿ.08ರ ಬುಧವಾರ 15 ಮಂದಿ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಸಿದ ದೆಹಲಿ ಕೋರ್ಟ್ ನ ನ್ಯಾಯಾಧೀಶ ಸತೀಶ್ ಕುಮಾರ್, ಕೇಂದ್ರ ನ್ಯಾಯಾಲಯಕ್ಕೆ ಅರ್ಜಿಯನ್ನು ವರ್ಗಾವಣೆ ಮಾಡಿದ್ದರು. ಇನ್ನು, ಹಿಂಸಾಚಾರದ ಪ್ರಕರಣವನ್ನು ದೆಹಲಿ ಅಪರಾಧ ವಿಭಾಗಕ್ಕೆ ವರ್ಗಾವಣೆಗೊಳಿಸಲಾಗಿತ್ತು. ಇಂದು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, 15 ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.

English summary
Citizenship Amendment Act Against Protest. Delhi Court Granted Bail To 15 Accused In Daryaganj Violence Case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X