ಎಎಪಿ ಮುಖಂಡ ಸೋಮನಾಥ್ ಭಾರ್ತಿಗೆ ಜಾಮೀನು
ನವದೆಹಲಿ, ಅ.7: ಕೌಟುಂಬಿಕ ಕಲಹ, ಪತ್ನಿ ಮೇಲೆ ಹಲ್ಲೆ ಆರೋಪ ಹೊತ್ತಿರುವ ದೆಹಲಿಯ ಮಾಜಿ ಕಾನೂನು ಸಚಿವ ಸೋಮನಾಥ್ ಭಾರ್ತಿ ಅವರಿಗೆ ದೆಹಲಿಯ ದ್ವಾರಕ ಕೋರ್ಟಿನಿಂದ ಬುಧವಾರ ಜಾಮೀನು ಮಂಜೂರಾಗಿದೆ. ಇತ್ತೀಚೆಗೆ ಸುಪ್ರೀಂಕೋರ್ಟ್ ಈ ಪ್ರಕರಣವನ್ನು ಮುಂದೂಡಿ ಭಾರ್ತಿಗೆ ಅಕ್ಟೋಬರ್ 19ರ ತನಕ ನ್ಯಾಯಾಂಗ ಬಂಧನ ವಿಧಿಸಿತ್ತು.
ನನ್ನ ಮೇಲೆ ಪ್ರಕರಣ ದಾಖಲಾಗಿರುವುದಕ್ಕೆ ಬಿಜೆಪಿಯೇ ಕಾರಣ, ನನಗೆ ಪ್ರಾಣ ಬೆದರಿಕೆ ಇದೆ ಎಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ನ್ಯಾ ಅನಿಲ್ ಕುಮಾರ್ ಅವರ ಮುಂದೆ ಹೇಳಿಕೊಂಡಿದ್ದರು. ಕೌಟುಂಬಿಕ ಕಲಹ ಕೇಸಿಗೆ ರಾಜಕೀಯ ಬಣ್ಣ ಬಳಿಯಲಾಗುತ್ತಿದೆ ಎಂದು ಸೋಮನಾಥ್ ಪರ ವಕೀಲ ವಿಜಯ್ ಅಗರ್ ವಾಲ್ ಅವರು ವಾದಿಸಿದ್ದರು. [ಆಮ್ ಆದ್ಮಿ ಪಕ್ಷದ ಗ್ರಹಗತಿ ಯಾಕೋ ಸರಿಯಿದ್ದಂತಿಲ್ಲ]

ಎಎಪಿ ಶಾಸಕರಾದ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮಾರ್, ಮನೋಜ್ ಕುಮಾರ್, ಸುರೀಂದರ್ ಸಿಂಗ್ ಅವರು ದೆಹಲಿ ಪೊಲೀಸರಿಂದ ಬಂಧನಕ್ಕೊಳಪಟ್ಟಿದ್ದರು. ನಾಲ್ಕು ತಿಂಗಳಲ್ಲಿ ಆಮ್ ಆದ್ಮಿ ಪಕ್ಷದ ನಾಲ್ಕನೇ ಶಾಸಕರ ಬಂಧನವಾಗಿತ್ತು.
ಸೋಮನಾಥ್ ಭಾರ್ತಿ ಅವರು ಆಪ್ನ ಮೊದಲ 49 ದಿನಗಳ ಸರಕಾರದಲ್ಲಿ ಭಾರ್ತಿ ಕಾನೂನು ಸಚಿವರಾಗಿದ್ದು, ಆ ಸಂದರ್ಭದಲ್ಲಿ ತನ್ನ ಮತಕ್ಷೇತ್ರದಲ್ಲಿಯ ವೇಶ್ಯಾವಾಟಿಕೆ ಜಾಲದ ಮೇಲೆ ದಾಳಿ ನಡೆಸುವ ಮೂಲಕ ವಿವಾದಕ್ಕೆ ಗುರಿಯಾಗಿದ್ದರು.
ತನ್ನ ಪತಿ ಸೋಮನಾಥ ಭಾರ್ತಿ 2010ರಿಂದಲೂ ತನಗೆ ಮತ್ತು ಮಕ್ಕಳಿಗೆ ದೈಹಿಕ ಮತ್ತು ಮಾನಸಿಕ ಹಿಂಸೆಯನ್ನು ನೀಡುತ್ತಿದ್ದಾರೆ. ಅವರಿಂದ ಮತ್ತು ಅವರ ಬೆಂಬಲಿಗರಿಂದ ನಿರಂತರ ಬೆದರಿಕೆಗಳಿವೆ. ತನಗೆ ಪತಿಯಿಂದ ವಿಚ್ಛೇದನ ಬೇಕು. ತಾನು ತನ್ನ ಮಕ್ಕಳೊಂದಿಗೆ ಘನತೆಯೊಂದಿಗೆ ಬದುಕಲು ಬಯಸಿದ್ದೇನೆ ಎಂದು ಲಿಪಿಕಾ ಅವರು ದೂರು ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications