ಶಶಿ ತರೂರ್ ಜಾಮೀನು ಅರ್ಜಿ ತೀರ್ಪು ಗುರುವಾರ ಪ್ರಕಟ
ನವದೆಹಲಿ, ಜುಲೈ 4: ಸುನಂದಾ ಪುಷ್ಕರ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ, ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಗುರುವಾರಕ್ಕೆ ಕಾಯ್ದಿರಿಸಿದೆ.
ಇದರ ಬೆನ್ನಲ್ಲೇ, ಶಶಿ ತರೂರ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಿಶೇಷ ತನಿಖಾ ತಂಡ (ಎಸ್ಐಸಿ) ಪಟಿಯಾಲ ಹೌಸ್ ಕೋರ್ಟ್ನಲ್ಲಿ ವಿರೋಧಿಸಿದೆ.
'ನಾವು ತೀರ್ಪು ಹೊರಬೀಳುವುದನ್ನು ಕಾಯಲಿದ್ದೇವೆ. ಅದನ್ನು ನಾಳೆಗೆ ಕಾಯ್ದಿರಿಸಲಾಗಿದೆ. ನಾವು ಕೋರ್ಟ್ನಲ್ಲಿ ವಾದ ಮಂಡಿಸಿದ್ದೇವೆ. ಫಲಿತಾಂಶ ಏನು ಸಿಗುತ್ತದೆ ಎಂಬುದನ್ನು ನೋಡೋಣ. ಒಂದು ತಿಂಗಳ ಹಿಂದೆ ಸಲ್ಲಿಸಿದ್ದ ತಮ್ಮದೇ ದೋಷಾರೋಪಪಟ್ಟಿಗೆ ವಿರುದ್ಧವಾಗಿರುವ ವರದಿಯನ್ನು ಎಸ್ಐಸಿ ನ್ಯಾಯಾಲಯಕ್ಕೆ ಇಂದು ಸಲ್ಲಿಕೆ ಮಾಡಿದೆ' ಎಂದು ತರೂರ್ ಪರ ವಕೀಲ ವಿಕಾಸ್ ಪಾಹ್ವಾ ತಿಳಿಸಿದರು.

ಸುನಂದಾ ಪುಷ್ಕರ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 5ರಂದು ದೆಹಲಿ ಕೋರ್ಟ್ ಶಶಿ ತರೂರ್ ಅವರಿಗೆ ಸಮನ್ಸ್ ಜಾರಿ ಮಾಡಿತ್ತು.
ಈ ಪ್ರಕರಣದಲ್ಲಿ ತರೂರ್ ಅವರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಹಾಗೂ ಕ್ರೌರ್ಯದ ಆರೋಪಗಳನ್ನು ಹೊರಿಸಲಾಗಿದೆ. ಜುಲೈ 7ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಅವರಿಗೆ ಸೂಚಿಸಲಾಗಿತ್ತು. ಪ್ರಕರಣದಲ್ಲಿ ಸಲ್ಲಿಸಲಾದ ದೋಷಾರೋಪವನ್ನು ಸಹ ಕೋರ್ಟ್ ಪರಿಗಣನೆಗೆ ತೆಗೆದುಕೊಂಡಿದೆ.
ಪ್ರಕರಣದ ವಿಚಾರಣೆ ನಡೆಸುತ್ತಿದ್ದ ದೆಹಲಿ ಕೋರ್ಟ್, ಮೇ 24ರಂದು ಪ್ರಕರಣವನ್ನು ಹೆಚ್ಚುವರಿ ಮುಖ್ಯ ಮೆಟ್ರೊಪೊಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ನ್ಯಾಯಾಧೀಶ ಸಮರ್ ವಿಶಾಲ್ ಅವರಿಗೆ ವರ್ಗಾಯಿಸಿತ್ತು.
ತರೂರ್ ಅವರು ಹಾಲಿ ಸಂಸದರಾಗಿರುವುದರಿಂದ ರಾಜಕಾರಣಿಗಳಿಗಾಗಿ ವಿಶೇಷವಾಗಿ ರೂಪಿಸಿರುವ ಎಸಿಎಂಎಂನಲ್ಲಿ ವಿಚಾರಣೆ ನಡೆಯುವುದು ಸೂಕ್ತ ಎಂದು ಅದು ಹೇಳಿತ್ತು.
ತರೂರ್ ಅವರನ್ನು ಆರೋಪಿಯನ್ನಾಗಿ ಹೆಸರಿಸಿ ದೆಹಲಿ ಪೊಲೀಸರು ಮೇ 14ರಂದು ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications