ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾರಿಗೆ ಕೊವಿಡ್-19 ಪಾಸಿಟಿವ್
ನವದೆಹಲಿ, ಸಪ್ಟೆಂಬರ್.14: ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾವೈರಸ್ ಎರಡನೇ ಅಲೆ ಸೃಷ್ಟಿಯ ಆತಂಕ ಎದುರಾಗಿದೆ. ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ತಮಗೆ ಕೊವಿಡ್-19 ಸೋಂಕು ಖಾತ್ರಿಯಾಗಿರುವ ಬಗ್ಗೆ ಸ್ವತಃ ಡಿಸಿಎಂ ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ. "ಅಲ್ಪ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆ ಕೊರೊನಾವೈರಸ್ ಸೋಂಕಿತ ತಪಾಸಣೆಯನ್ನು ಮಾಡಿಸಿಕೊಂಡಿದ್ದೆನು. ಈ ವೇಳೆ ಸೋಂಕು ತಗುಲಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ. ಹೀಗಾಗಿ ನಾನು ಸೆಲ್ಫ್ ಐಸೋಲೇಷನ್ ನಲ್ಲಿದ್ದೇನೆ" ಎಂದು ಮನೀಶ್ ಸಿಸೋಡಿಯಾ ಬರೆದುಕೊಂಡಿದ್ದಾರೆ.
ಅನಂತಕುಮಾರ್ ಹೆಗಡೆ ಸೇರಿ 17 ಸಂಸದರಿಗೆ ಕೊರೊನಾ ವೈರಸ್ ಪಾಸಿಟಿವ್
ಹಿಂದಿಯಲ್ಲಿ ಟ್ವೀಟ್ ಮಾಡಿರುವ ಡಿಸಿಎಂ ಮನೀಶ್ ಸಿಸೋಡಿಯಾ, ವೈದ್ಯಕೀಯ ತಪಾಸಣೆ ವೇಳೆಯಲ್ಲಿ ಜ್ವರದ ಹೊರತಾಗಿ ಯಾವುದೇ ಸೋಂಕಿನ ಲಕ್ಷಣಗಳು ಇರಲಿಲ್ಲ. ಬೇರೆ ಯಾವುದೇ ರೀತಿ ಆರೋಗ್ಯ ಸಮಸ್ಯೆಗಳಿಲ್ಲ. ಸಾಧ್ಯವಾದಷ್ಟು ಬೇಗ ನಿಮ್ಮೆಲ್ಲರ ಆಶೀರ್ವಾದದಿಂದ ಗುಣಮುಖನಾಗಿ ಕರ್ತವ್ಯಕ್ಕೆ ಹಾಜರಾಗುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ.
हल्का बुख़ार होने के बाद आज कोरोना टेस्ट क़राया था जिसकी रिपोर्ट पोज़िटिव आई है. मैंने स्वयं को एकांतवास में रख लिया है.
— Manish Sisodia (@msisodia) September 14, 2020
फ़िलहाल बुख़ार या अन्य कोई परेशानी नहीं है मैं पूरी तरह ठीक हूँ. आप सब की दुआओं से जल्द ही पूर्ण स्वस्थ होकर काम पर लौटूँगा.
ನವದೆಹಲಿಯಲ್ಲಿ 3329 ಮಂದಿಗೆ ಕೊವಿಡ್-19:
ಕಳೆದ 24 ಗಂಟೆಗಳಲ್ಲಿ 44884 ಜನರಿಗೆ ಕೊರೊನಾವೈರಸ್ ಸೋಂಕು ಪರೀಕ್ಷೆಯನ್ನು ನಡೆಸಲಾಗಿದ್ದು, 3329 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 221533ಕ್ಕೆ ಏರಿಕೆಯಾಗಿದ್ದು, 188122 ಸೋಂಕಿತರು ಗುಣಮುಖರಾಗಿದ್ದಾರೆ. 4770 ಜನರು ಮಹಾಮಾರಿಗೆ ಬಲಿಯಾಗಿದ್ದು, 28641 ಸಕ್ರಿಯ ಪ್ರಕರಣಗಳಿವೆ.