ದೆಹಲಿ: ಫಿಟ್ನೆಸ್ ಪ್ರಮಾಣಪತ್ರವಿಲ್ಲದ ವಾಹನ ಓಡಿಸಿದರೆ 10,000 ರೂ.ವರೆಗೆ ದಂಡ, ಜೈಲು
ಫಿಟ್ನೆಸ್ ಪ್ರಮಾಣಪತ್ರವಿಲ್ಲದೆ ಸಾರಿಗೆ ವಾಹನಗಳನ್ನು ಓಡಿಸುವವರ ವಿರುದ್ಧ ದೆಹಲಿ ಸಾರಿಗೆ ಇಲಾಖೆ ಇದೀಗ ಕಠಿಣ ಕ್ರಮಕ್ಕೆ ಮುಂದಾಗಿದೆ. ಫಿಟ್ನೆಸ್ ಪ್ರಮಾಣಪತ್ರವಿಲ್ಲದ ಸಾರಿಗೆ ವಾಹನಗಳ ಮಾಲೀಕರು ಮತ್ತು ಚಾಲಕರು 10,000 ರೂ.ವರೆಗೆ ದಂಡ ಮತ್ತು ಜೈಲು ಶಿಕ್ಷೆಗೆ ಅರ್ಹರಾಗುತ್ತಾರೆ ಎಂದು ದೆಹಲಿ ಸಾರಿಗೆ ಇಲಾಖೆಯು ಎಚ್ಚರಿಕೆ ನೀಡಿದೆ.
ಮೋಟಾರು ವಾಹನಗಳ (ಎಂವಿ) ಕಾಯ್ದೆಯನ್ನು ಉಲ್ಲಂಘಿಸಿ ಮಾನ್ಯ ಫಿಟ್ನೆಸ್ ಪ್ರಮಾಣ ಪತ್ರವಿಲ್ಲದೆ ಇಂತಹ ಹಲವು ವಾಹನಗಳು ರಸ್ತೆಯಲ್ಲಿ ಸಂಚರಿಸುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಇಲಾಖೆ ಈ ಕ್ರಮ ಕೈಗೊಂಡಿದೆ. ದೆಹಲಿ ಸರ್ಕಾರದ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು, ರಸ್ತೆಗಳಲ್ಲಿ ಅಂತಹ ವಾಹನಗಳ ಹುಡುಕಾಟವನ್ನು ಮುಂದುವರಿಸಲು ನಮ್ಮ ತಂಡಗಳಿಗೆ ತಿಳಿಸಲಾಗಿದೆ. ಹೀಗಾಗಿ ಶೀಘ್ರದಲ್ಲೇ ನಿಮಯ ಉಲ್ಲಂಘಿಸುವವರನ್ನು ಹಿಡಿಯುವ ಕೆಲಸವನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದರು.

ಸಾರಿಗೆ ಇಲಾಖೆಯು ಇತ್ತೀಚೆಗೆ ಹೊರಡಿಸಿದ ಸಾರ್ವಜನಿಕ ಪ್ರಕಟಣೆಯಲ್ಲಿ "ಸರಕಾರಿ ಇಲಾಖೆಗಳು, ಸ್ಥಳೀಯ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಿಗೆ ಸೇರಿದ ಸಾರಿಗೆ ವಾಹನಗಳು ಸೇರಿದಂತೆ ಅನೇಕ ಮಾಲೀಕರು ಅಥವಾ ಚಾಲಕರು ಫಿಟ್ನೆಸ್ ಪ್ರಮಾಣ ಪತ್ರವಿಲ್ಲದೆ ವಾಹನ ಚಲಾಯಿಸುತ್ತಿರುವುದು ಸಾರಿಗೆ ಇಲಾಖೆಯಿಂದ ಗಮನಿಸಲ್ಪಟ್ಟಿದೆ," ಎಂದು ಹೇಳುತ್ತದೆ. ಇದು ಮೋಟಾರು ವಾಹನಗಳ ಕಾಯಿದೆ, 1988 ರ ಸಂಪೂರ್ಣ ಉಲ್ಲಂಘನೆಯಾಗಿದೆ.

ಹೀಗಾಗಿ ಸಾರ್ವಜನಿಕ ಸೇವಾ ವಾಹನಗಳು, ಸರಕು ವಾಹನಗಳು, ಬಸ್ಗಳು ಮತ್ತು ಶಾಲಾ ಕಾಲೇಜುಗಳ ಕ್ಯಾಬ್ಗಳನ್ನು ಬಳಸುವ ಎಲ್ಲಾ ವಾಹನ ಮಾಲೀಕರು ಮತ್ತು ಚಾಲಕರು ಮಾನ್ಯವಾದ ವಾಹನ ಫಿಟ್ನೆಸ್ ಪ್ರಮಾಣಪತ್ರವನ್ನು ಹೊಂದಿರಬೇಕು. MV ಕಾಯಿದೆಯ ಸೆಕ್ಷನ್ 56 ರ ಪ್ರಕಾರ, ಸಾರಿಗೆ ವಾಹನವು ದೆಹಲಿ ಸರ್ಕಾರದ ಸಾರಿಗೆ ಇಲಾಖೆಯಿಂದ ನೀಡಲಾದ ಮಾನ್ಯವಾದ ಫಿಟ್ನೆಸ್ ಪ್ರಮಾಣಪತ್ರವನ್ನು ಹೊಂದಿಲ್ಲದಿದ್ದರೆ ಅಂತವರ ವಿರುದ್ಧ ಕ್ರಮ ಹಾಗೂ ದಂಡ ವಿಧಿಸಲಾಗುತ್ತದೆ ಎಂದು ನೋಟಿಸ್ ಹೇಳುತ್ತದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications