ದೆಹಲಿಯಲ್ಲಿ ಪಟಾಕಿ ನಿಷೇಧ; ತುರ್ತು ವಿಚಾರಣೆಗೆ ಒಪ್ಪದ ಸುಪ್ರೀಂ ಕೋರ್ಟ್
ನವದೆಹಲಿ, ಅ. 13: ಜನವರಿ 1, 2023 ರವರೆಗೆ ರಾಷ್ಟ್ರ ರಾಜಧಾನಿಯಲ್ಲಿ ಎಲ್ಲಾ ರೀತಿಯ ಪಟಾಕಿಗಳ ಸಂಗ್ರಹಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸುವ ಆದೇಶದ ವಿರುದ್ಧದ ಅರ್ಜಿಯನ್ನು ತುರ್ತು ವಿಚಾರಣೆಗೆ ಒಪ್ಪಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.
ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಮತ್ತು ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಅವರ ಪೀಠವು ತುರ್ತು ವಿಚಾರಣೆಯನ್ನು ಕೋರಿ ವಿಷಯವನ್ನು ಪ್ರಸ್ತಾಪಿಸಿದ ವಕೀಲರಿಗೆ ದೆಹಲಿ ಹೈಕೋರ್ಟ್ ಅನ್ನು ಸಂಪರ್ಕಿಸುವಂತೆ ತಿಳಿಸಿದೆ.
ದೆಹಲಿ ಹೈಕೋರ್ಟ್ ಈ ಬಗ್ಗೆ ತೀರ್ಮಾನಿಸಲಿ, ನಾವು ಈ ವಿಷಯಕ್ಕೆ ಬರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಪೀಠ ಹೇಳಿದೆ.
ತುರ್ತು ವಿಚಾರಣೆಯನ್ನು ಕೋರಿದ ವಕೀಲರು, ಈ ವಿಷಯವು ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ ಮತ್ತು ಅಕ್ಟೋಬರ್ 18 ರಂದು ವಿಚಾರಣೆಗೆ ಪಟ್ಟಿ ಮಾಡಿದೆ ಎಂದು ಸುಪ್ರೀಂ ಕೋರ್ಟ್ ಪೀಠದ ಮುಂದೆ ವರದಿ ಸಲ್ಲಿಸಿದರು.
ದೆಹಲಿಯಲ್ಲಿ ಎಲ್ಲಾ ರೀತಿಯ ಪಟಾಕಿಗಳ ಸಂಗ್ರಹಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸುವ ಆದೇಶದ ವಿರುದ್ಧ ಹಸಿರು ಪಟಾಕಿ ವ್ಯಾಪಾರಿಗಳು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಜನವರಿ 1 ರವರೆಗೆ ಮುಂದೂಡಿದೆ.

ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿಯ ಪಟಾಕಿಗಳ ಸಂಪೂರ್ಣ ನಿಷೇಧ ಆದೇಶವು, ಸುಪ್ರೀಂ ಕೋರ್ಟ್ ಮತ್ತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಆದೇಶಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ. ಇಂತಹ ಸಂಪೂರ್ಣ ನಿಷೇಧ ಎಂದಿಗೂ ಹಾಕಿರಲಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ರಾಷ್ಟ್ರ ರಾಜಧಾನಿಯಲ್ಲಿ ಮಾಲಿನ್ಯ ಮಟ್ಟವನ್ನು ಪರಿಶೀಲಿಸಲು ಜನವರಿ 1 ರವರೆಗೆ ಎಲ್ಲಾ ರೀತಿಯ ಪಟಾಕಿಗಳ ಸಂಗ್ರಹಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸುವ ದೆಹಲಿ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿತ್ತು. ಈ ವೇಳೆ ವಾಯುಮಾಲಿನ್ಯವನ್ನು ಹೆಚ್ಚಿಸಲು ಬಯಸುವುದಿಲ್ಲ ಎಂದು ಹೇಳಿತ್ತು.
ಪಟಾಕಿ ಬಳಕೆಗೆ ಯಾವುದೇ ಸಂಪೂರ್ಣ ನಿಷೇಧವಿಲ್ಲ ಮತ್ತು ಬೇರಿಯಂ ಲವಣಗಳನ್ನು ಹೊಂದಿರುವ ಪಟಾಕಿಗಳನ್ನು ಮಾತ್ರ ನಿಷೇಧಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಕಳೆದ ವರ್ಷ ಸ್ಪಷ್ಟಪಡಿಸಿತ್ತು.
ಇನ್ನು, ಪಟಾಕಿ ಸಂಪೂರ್ಣ ನಿಷೇಧ ಮಾಡಿರುವುದಕ್ಕೆ ತಮಿಳುನಾಡು ಸಿಎಂ ಸ್ಟಾಲಿನ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಪತ್ರ ಬರೆದಿದ್ದಾರೆ. ತಮಿಳುನಾಡು ರಾಜ್ಯದಲ್ಲಿ ಪಟಾಕಿ ತಯಾರಿಕಾ ಉದ್ಯಮದಲ್ಲಿರುವ ಲಕ್ಷಾಂತರ ಕಾರ್ಮಿಕರ ಜೀವನೋಪಾಯಕ್ಕಾಗಿ ಮಿತಿಯಲ್ಲಿಯೇ ಪಟಾಕಿ ಮಾರಾಟಕ್ಕೆ ಅವಕಾಶ ನೀಡುವಂತೆ ಒತ್ತಾಯಿಸಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications