ನಿರ್ಭಯಾ ಮೇಲೆ ಎರಗಿದ್ದವನ ಮೇಲೆ ಕೈದಿಗಳಿಂದ ಹಲ್ಲೆ?
ನವದೆಹಲಿ, ಆಗಸ್ಟ್,21 : ದೆಹಲಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಾಲ್ವರಲ್ಲಿ ಒಬ್ಬನಾದ ವಿನಯ್ ಶರ್ಮ ನನ್ನ ಮೇಲೆ ಸಹ ಕೈದಿಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾನೆ.
2012ರಲ್ಲಿ ನಡೆದ ದೆಹಲಿ ಗ್ಯಾಂಗ್ ರೇಪ್ ಹಾಗೂ ದರೋಡೆ ಪ್ರಕರಣದಲ್ಲಿ ಮುಖ್ಯ ಆರೋಪಿಯಾದ ವಿನಯ್ ಶರ್ಮನನ್ನು ನ್ಯಾಯಾಧೀಶರು ವಿಚಾರಣೆ ನಡೆಸುತ್ತಿದ್ದರು. ಆ ಸಂದರ್ಭದಲ್ಲಿ ಈತ ನ್ಯಾಯಾಧೀಶರಿಗೆ ಹಲ್ಲೆ ನಡೆದಿರುವುದರ ಬಗ್ಗೆ ತಿಳಿಸಿದ್ದಾನೆ.[ಭಾರತದ ಮಗಳು ವಿಡಿಯೋ ಯೂಟ್ಯೂಬಿನಲ್ಲಿ 'ಹಿಟ್']

ದರೋಡೆ ಪ್ರಕರಣದಲ್ಲಿ ಆರೋಪಿಯಾಗಿರುವ ವಿನಯ್ ಶರ್ಮ ವಿಚಾರಣೆಗೆ ಒಳಪಡಿಸಿದಾಗ ಆತ 'ನನ್ನ ಮೇಲೆ ಸಹ ಕೈದಿಗಳಿಂದ ಹಲ್ಲೆ ನಡೆದಿದೆ. ಇದರಿಂದ ಎಡಗೈ ಹಾಗೂ ಎಡಗಾಲುಗಳಿಗೆ ತೀವ್ರ ಗಾಯಗಳಾಗಿವೆ ಎಂದು ನ್ಯಾಯಾದೀಶರ ಮುಂದೆ ಸಹ ಕೈದಿಗಳನ್ನು ದೂರಿದ್ದಾನೆ.
2012, ಡಿಸೆಂಬರ್ 16ರಂದು ಇಡೀ ದೇಶವನ್ನು ಬೆಚ್ಚಿ ಬೀಳಿಸುವಂತೆ ಮಾಡಿದ ದೆಹಲಿ ಗ್ಯಾಂಗ್ ರೇಪ್ ಹಿನ್ನೆಲೆಯಲ್ಲಿ 6 ಜನರನ್ನು ಬಂಧಿಸಲಾಗಿತ್ತು. ಬಳಿಕ ಅಕ್ಷಯ್ ಟಾಕೂರ್, ವಿನಯ್ ಶರ್ಮ, ಪವನ್ ಗುಪ್ತಾ, ಮುಖೇಶ್ ಎನ್ನುವ ನಾಲ್ವರಿಗೆ ದೆಹಲಿ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು.
ಗ್ಯಾಂಗ್ ರೇಪ್ ವೇಳೆ ದರೋಡೆ ನಡೆಸಿದ್ದ ವಿನಯ್ ಶರ್ಮನನ್ನು ರಾಮ್ ಆಧಾರ್ ಗುರುತಿಸಿದ್ದು, ದರೋಡೆ ಮಾಡಿರುವುದು ಸಾಬೀತಾಗಿದೆ. ಇದರ ಹಿನ್ನೆಲೆಯಲ್ಲಿ ವಿನಯ್ ಗೆ ಐಪಿಸಿ ಸೆಕ್ಷನ್ 395 ಮತ್ತು 365 ಅನ್ವಯ ಶಿಕ್ಷೆ ನೀಡಲಾಗಿದೆ.
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications