ವೇತನ ನೀಡಲು ದುಡ್ಡಿಲ್ಲ, 5000 ಕೋಟಿ ಅನುದಾನಕ್ಕೆ ದೆಹಲಿ ಮನವಿ
ದೆಹಲಿ, ಮೇ 31: ಕೊರೊನಾ ವೈರಸ್ ಲಾಕ್ಡೌನ್ನಿಂದ ದೇಶದ ಆರ್ಥಿಕತೆ ಸಂಕಷ್ಟಕ್ಕೆ ಸಿಲುಕಿದೆ. ಎರಡ್ಮೂರು ತಿಂಗಳ ಸುದೀರ್ಘ ಲಾಕ್ಡೌನ್ನಿಂದ ಬಹುತೇಕ ಎಲ್ಲ ರಾಜ್ಯಗಳು ತೊಂದರೆಗೆ ಸಿಲುಕಿದೆ.
Recommended Video
ಇದೀಗ, ದೆಹಲಿ ಸರ್ಕಾರದ ಬಳಿಕ ವೇತನ ನೀಡಲು ದುಡ್ಡಿಲ್ಲ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಭಾನುವಾರ ಹೇಳಿಕೊಂಡಿದ್ದಾರೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, 5000 ಕೋಟಿ ಅನುದಾನಕ್ಕೆ ಬೇಡಿಕೆ ಇಟ್ಟಿದ್ದೇವೆ ಎಂದು ತಿಳಿಸಿದ್ದಾರೆ.
ದೆಹಲಿಯ ಆರ್ಥಿಕ ಸಚಿವರು ಆಗಿರುವ ಮನೀಶ್ ಸಿಸೋಡಿಯಾ ಕೇಂದ್ರ ವಿತ್ತೆ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಪತ್ರ ಬರೆದಿದ್ದು, ''ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ರಾಜ್ಯಗಳಿಗೆ ಮಂಜೂರು ಮಾಡಿದ ಹಣವನ್ನು ದೆಹಲಿ ಸ್ವೀಕರಿಸಿಲ್ಲ'' ಎಂದು ಹೇಳಿದ್ದಾರೆ. ಮುಂದೆ ಓದಿ...

ಸರ್ಕಾರದ ಬಳಿ 1735 ಕೋಟಿ ಇದೆ
''ಸರ್ಕಾರದ ಆದಾಯ ಮತ್ತು ವೆಚ್ಚಗಳ ಬಗ್ಗೆ ದೆಹಲಿ ಸರ್ಕಾರ ಪರಿಶೀಲನೆ ಮಾಡಿದೆ. ಸಿಬ್ಬಂದಿಗಳಿಗೆ ಪ್ರತಿ ತಿಂಗಳು ವೇತನ ನೀಡಲು 3500 ಕೋಟಿ ಅಗತ್ಯವಿದೆ. ಕಳೆದ ಎರಡು ತಿಂಗಳಿನಿಂದ ಜಿಎಸ್ಟಿ ಸಂಗ್ರಹ 500 ಕೋಟಿ ಸೇರಿದಂತೆ ಇನ್ನಿತರ ಆದಾಯ ಒಟ್ಟುಗೂಡಿ 1735 ಕೋಟಿ ಹೊಂದಿದೆ'' ಎಂದು ಕೇಂದ್ರಕ್ಕೆ ತಿಳಿಸಿದ್ದಾರೆ.

ದೆಹಲಿಗೆ 7000 ಕೋಟಿ ಬೇಕಾಗಿದೆ
''ಎರಡು ತಿಂಗಳಿಗೆ ನಮಗೆ 7000 ಕೋಟಿ ಬೇಕಾಗಿದೆ. ಇದರಲ್ಲಿ ದೆಹಲಿ ಸರ್ಕಾರದ ಸಿಬ್ಬಂದಿಗಳಿಗೆ ವೇತನ ನೀಡಬೇಕಾಗಿದೆ'' ಎಂದು ಮನೀಶ್ ಸಿಸೋಡಿಯಾ ಹೇಳಿದ್ದಾರೆ. ದೆಹಲಿ ಸರ್ಕಾರದ ಉದ್ಯೋಗಿಗಳಿಗೆ ಹಾಗೂ ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ವಾರಿಯರ್ಸ್ಗೆ ವೇತನ ನೀಡಲು ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಆಮ್ ಅದ್ಮಿ ಪಕ್ಷ ಕೋರಿದೆ ಎಂದು ತಿಳಿಸಿದೆ.

ರಾಜ್ಯದಲ್ಲಿ ತೆರಿಗೆ ಸಂಗ್ರಹ ಕುಸಿದಿದೆ
''ಕೊರೊನಾ ವೈರಸ್ ಹಾಗೂ ಲಾಕ್ಡೌನ್ ಕಾರಣದಿಂದಾಗಿ ದೆಹಲಿ ಸರ್ಕಾರದ ತೆರಿಗೆ ಸಂಗ್ರಹವೂ ಶೇಕಡಾ 85ರಷ್ಟು ಕಡಿಮೆಯಾಗಿದೆ. ಕೇಂದ್ರವು ಉಳಿದ ರಾಜ್ಯಗಳಿಗೆ ಬಿಡುಗಡೆ ಮಾಡಿದ ವಿಪತ್ತು ಪರಿಹಾರ ನಿಧಿಯಿಂದ ದೆಹಲಿಗೆ ಯಾವುದೇ ಹಣ ಬಂದಿಲ್ಲ'' ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ.

ದೆಹಲಿಯಲ್ಲಿ ಹೆಚ್ಚು ಸೋಂಕು ವರದಿ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿನ್ನೆ 1163 ಜನರಿಗೆ ಹೊಸದಾಗಿ ಕೊವಿಡ್ ಸೋಂಕು ತಗುಲಿದೆ. ದೆಹಲಿಯಲ್ಲು ಒಟ್ಟು ಸೋಂಕಿತರ ಸಂಖ್ಯೆ ಈಗ 18549ಕ್ಕೆ ಏರಿಕೆಯಾಗಿದೆ. ಇದುವರೆಗೂ 416 ಜನರು ಮೃತಪಟ್ಟಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications