ಕೊವಿಡ್-19 ಪರೀಕ್ಷೆಗೆ 800 ರೂಪಾಯಿ ನಿಗದಿಗೊಳಿಸಿದ ಸರ್ಕಾರ
ನವದೆಹಲಿ, ನವೆಂಬರ್,30: ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೊವಿಡ್-19 ಮೂರನೇ ಅಲೆಯ ಭೀತಿಯಲ್ಲಿ ಜನರು ಬದುಕುತ್ತಿರುವ ಹಿನ್ನೆಲೆ ಸೋಂಕು ತಪಾಸಣೆಗೆ ಸರ್ಕಾರವು ಒತ್ತು ನೀಡಿದೆ.
ಕೊರೊನಾವೈರಸ್ ಸೋಂಕು ಪತ್ತೆಗೆ ನಡೆಸುವ ಆರ್ ಟಿ- ಪಿಸಿಆರ್ ಪರೀಕ್ಷೆಗೆ ಒಂದು ನಿರ್ದಿಷ್ಟ ದರವನ್ನು ಸರ್ಕಾರವೇ ನಿಗದಿಗೊಳಿಸಿದೆ. ನವದೆಹಲಿಯಾದ್ಯಂತ ಖಾಸಗಿ ಪ್ರಯೋಗಾಲಯಗಳಲ್ಲಿಯೂ ಕೂಡಾ ಕೊವಿಡ್-19 ಸೋಂಕು ತಪಾಸಣೆಗೆ ಕೇವಲ 800 ರೂಪಾಯಿ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ.
ಸರ್ಕಾರದ ವತಿಯಿಂದ ನಡೆಸುವ ಕೊರೊನಾವೈರಸ್ ಸೋಂಕಿನ ಪರೀಕ್ಷೆಗೆ ಯಾವುದೇ ರೀತಿ ಹಣ ಪಾವತಿಸಬೇಕಾಗಿಲ್ಲ. ಆದರೆ ಸೋಂಕು ತಪಾಸಣೆ ವೇಗವನ್ನು ಹೆಚ್ಚಿಸುವ ಉದ್ದೇಶದಿಂದ ಖಾಸಗಿ ಲ್ಯಾಬ್ ಗಳಲ್ಲೂ ಕೊವಿಡ್-19 ಸೋಂಕು ತಪಾಸಣೆಗೆ ಅನುಮತಿ ನೀಡಲಾಗಿದೆ. ಇದರ ಜೊತೆಗೆ ಸೋಂಕು ತಪಾಸಣೆಗೆ ನಿರ್ದಿಷ್ಟ ದರವನ್ನು ನಿಗದಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾಹಿತಿ ನೀಡಿದ್ದಾರೆ.

ನವದೆಹಲಿ ಕೊವಿಡ್-19 ಪರಿಸ್ಥಿತಿ:
ಭಾರತದಲ್ಲಿ ಅತಿಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳಿರುವ ಅಗ್ರರಾಜ್ಯಗಳ ಪಟ್ಟಿಯಲ್ಲಿ ನವದೆಹಲಿ ಆರನೇ ಸ್ಥಾನದಲ್ಲಿದೆ. ನವದೆಹಲಿಯಲ್ಲಿ ಈವರೆಗೂ 5,66,648 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ 9066 ಮಂದಿ ಪ್ರಾಣ ಬಿಟ್ಟಿದ್ದಾರೆ. 5,22,491 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, 35091 ಸಕ್ರಿಯ ಪ್ರಕರಣಗಳಿರುವುದು ವರದಿಯಾಗಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications