Breaking: ಆನ್ಲೈನ್ನಲ್ಲಿ ಬುಕ್ ಮಾಡಿದರೆ ಮನೆ ಬಾಗಿಲಿಗೆ 'ಮದ್ಯ'!
ನವದೆಹಲಿ, ಜೂನ್ 01: ಭಾರತದ ಬಹುತೇಕ ರಾಜ್ಯಗಳಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಮದ್ಯದ ಅಂಗಡಿಗಳಿಗೆ ಬೀಗ ಹಾಕಿಸಲಾಗುತ್ತಿದೆ. ಇದರ ಮಧ್ಯೆ ನವದೆಹಲಿ ಸರ್ಕಾರ ಮದ್ಯಪ್ರಿಯರಿಗೆ ಖುಷಿ ಕೊಡವಂತಾ ಆದೇಶವೊಂದನ್ನು ಹೊರಡಿಸಿದೆ.
ಮೊಬೈಲ್ ಅಪ್ಲಿಕೇಷನ್ ಮತ್ತು ಆನ್ ಲೈನ್ ಮೂಲಕ ಬುಕ್ ಮಾಡಿದರೆ ನಿಮ್ಮ ಮನೆ ಬಾಗಿಲಿಗೆ ನೀವು ಬಯಸಿದ ದೇಶೀಯ ಅಥವಾ ವಿದೇಶಿ ಮದ್ಯವನ್ನು ಪೂರೈಸುವುದಕ್ಕೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ಅನುಮತಿ ನೀಡಿದೆ.
ನವದೆಹಲಿಯಲ್ಲಿ ಆನ್ ಲೈನ್ ಮೂಲಕ ಮದ್ಯ ಮಾರಾಟಕ್ಕೆ ಸರ್ಕಾರ ಅನುಮತಿ ನೀಡಿರುವ ಬಗ್ಗೆ ಮಂಗಳವಾರ ಎಎನ್ಐ ಸುದ್ದಿ ಸಂಸ್ಥೆಯು ವರದಿ ಮಾಡಿದೆ. ರಾಜ್ಯ ಮತ್ತು ರಾಷ್ಟ್ರದ ತೆರಿಗೆ ಸಂಗ್ರಹದಲ್ಲಿ ಮದ್ಯ ಮಾರಾಟದ್ದೇ ಸಿಂಹಪಾಲಿದೆ. ಮದ್ಯದ ಆನ್ ಲೈನ್ ಬುಕ್ಕಿಂಗ್ ನಿಂದಾಗಿ ಕೊವಿಡ್-19 ಸೋಂಕು ಹರಡುವಿಕೆ ಅಪಾಯಕ್ಕೆ ನಿಯಂತ್ರಣ ಹೇರುವುದರ ಜೊತೆಗೆ ಆದಾಯ ಹೆಚ್ಚಿಸಿಕೊಳ್ಳುವುದಕ್ಕೆ ಈ ರೀತಿ ಯೋಜನೆ ಹಾಕಿಕೊಳ್ಳಲಾಗಿದೆ.

ಲಕ್ನೋದಲ್ಲಿ ಮದ್ಯಕ್ಕೆ ಕೊವಿಡ್-19 ಲಸಿಕೆ ಪ್ರಮಾಣಪತ್ರ:
ಕೊವಿಡ್-19 ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ನಮ್ಮ ಅಂಗಡಿಯಲ್ಲಿ ಎಣ್ಣೆ ಮಾರಾಟ ಮಾಡುತ್ತೇವೆ. ಎಣ್ಣೆ ಖರೀದಿಸುವುದಕ್ಕೂ ಮೊದಲು ಗ್ರಾಹಕರು ತಾವು ಲಸಿಕೆ ಹಾಕಿಸಿಕೊಂಡಿರುವ ಪ್ರಮಾಣಪತ್ರವನ್ನು ತೋರಿಸುವುದು ಕಡ್ಡಾಯ ಎಂದು ಉತ್ತರ ಪ್ರದೇಶದ ಏತವಃ ಜಿಲ್ಲೆಯಲ್ಲಿರುವ ಮದ್ಯದ ಅಂಗಡಿ ಮಾಲೀಕ ಸೈಫೈ ಹೇಳಿದ್ದಾರೆ. ಎಣ್ಣೆ ಖರೀದಿಗೆ ಕೊರೊನಾವೈರಸ್ ಲಸಿಕೆ ಹಾಕಿಸಿಕೊಳ್ಳುವುದು ಕಡ್ಡಾಯ ಎಂಬ ಬಗ್ಗೆ ಅಂಗಡಿ ಎದುರು ಪೋಸ್ಟರ್ ಅನ್ನು ಕೂಡ ಹಾಕಲಾಗಿದೆ. ಈ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲೂ ಸಖತ್ ವೈರಲ್ ಆಗುತ್ತಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications