ನಿರ್ಭಯಾ ಅತ್ಯಾಚಾರಿಗೆ ಕ್ಷಮಾಧಾನ ಬೇಡ: ದೆಹಲಿ ಸರ್ಕಾರ
ನವದೆಹಲಿ, ಡಿಸೆಂಬರ್ 02: ನಿರ್ಭಯಾ ಅತ್ಯಾಚಾರಿಗಳಿಗೆ ಕ್ಷಮಾಧಾನ ನೀಡಬಾರದು ಎಂದು ದೆಹಲಿ ಸರ್ಕಾರವು ಲೆಫ್ಟಿನೆಂಟ್ ಗೌರ್ನರ್ಗೆ ಮನವಿ ಮಾಡಿದೆ.
ನಿರ್ಭಯಾ ಅತ್ಯಾಚಾರ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ವಿನಯ್ ಶರ್ಮಾ ತನಗೆ ಮರಣದಂಡನೆಯಿಂದ ಕ್ಷಮಾಧಾನ ನೀಡಬೇಕು ಎಂದು ಕೋರಿ ರಾಷ್ಟ್ರಪತಿ ರಮಾನಾಥ ಕೋವಿಂದ್ ಗೆ ಮನವಿ ಮಾಡಿದ್ದ. ಕ್ಷಮಾದಾನ ಕೋರಿದ್ದ ವಿನಯ್ ಶರ್ಮಾ 23 ವರ್ಷ ವಯಸ್ಸಾಗಿದ್ದು, ಆತ ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆಗಿದ್ದ.
ಇದರ ವಿರುದ್ಧ ದೆಹಲಿ ಸರ್ಕಾರವು ರಾಜ್ಯಪಾಲರಿಗೆ ಪತ್ರ ಬರೆದಿದ್ದು, ಯಾವುದೇ ಕಾರಣಕ್ಕೂ ಅತ್ಯಚಾರ ಆರೋಪಿಗೆ ಕ್ಷಮಾಧಾನ ನೀಡಬಾರದು ಎಂದು ಮನವಿ ಮಾಡಿದೆ.

'ಇದೊಂದು (ನಿರ್ಭಯಾ ಪ್ರಕರಣ) ಘೋರ ಪ್ರಕರಣವಾಗಿದ್ದು, ಅತ್ಯಂತ ಬರ್ಬರ ಕೃತ್ಯವನ್ನು ಆರೋಪಿಗಳು ಎಸಗಿದ್ದಾರೆ. ಮುಂದೆ ಇಂತಹಾ ಅಪರಾಧವನ್ನು ಮಾಡಬಾರದಂತೆ ಸಮಾಜಕ್ಕೆ ಅನುಕರಣಿಯ ಆಗುವಂತಹಾ ಶಿಕ್ಷೆ ನೀಡಬೇಕು ಎಂದು ದೆಹಲಿ ಸರ್ಕಾರ ಹೇಳಿದೆ.
ದೆಹಲಿ ಗೃಹ ಸಚಿವಾಲಯದಿಂದ ಈ ಮನವಿ ಮಾಡಲಾಗಿದ್ದು, ಗೃಹ ಮಂತ್ರಿಗಳು ಮಾತನಾಡಿ, ಕ್ಷಮಾಧಾನ ಅರ್ಜಿಯನ್ನು ಖಡ್ಡಾಯವಾಗಿ ತಿರಸ್ಕರಿಸುವಂತೆ ಮನವಿ ಮಾಡಲಾಗಿದೆ' ಎಂದರು.
ಮನವಿಯನ್ನು ಪ್ರಸ್ತುತ ದೆಹಲಿ ಲೆಫ್ಟಿನಂಟ್ ಗೌರ್ನರ್ ಗೆ ಕಳುಹಿಸಿದ್ದು, ಮುಂದೆ ರಾಷ್ಟ್ರಪತಿ, ಕೇಂದ್ರ ಗೃಹ ಸಚಿವಾಲಯಕ್ಕೂ ಕಳುಹಿಸಲಾಗುತ್ತದೆ.
ಕ್ಷಮಾಧಾನ ಕೇಳಿರುವ ವಿನಯ್ ಶರ್ಮಾ ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾನೆ. ಮತ್ತೊಬ್ಬ ಆರೋಪಿ ಮುಖೇಶ್ ತನಗೆ ಕ್ಷಮಾಧಾನ ಬೇಡವೆಂದು ನಿರಾಕರಿಸಿದ್ದಾನೆ. ಒಟ್ಟು ಆರು ಮಂದಿಯನ್ನು ಇದೇ ಪ್ರಕರಣದಲ್ಲಿ ಬಂಧಿಸಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications