ನಿರ್ಭಯಾ ಅತ್ಯಾಚಾರಿಗೆ ಕ್ಷಮಾಧಾನ ಬೇಡ: ದೆಹಲಿ ಸರ್ಕಾರ
ನವದೆಹಲಿ, ಡಿಸೆಂಬರ್ 02: ನಿರ್ಭಯಾ ಅತ್ಯಾಚಾರಿಗಳಿಗೆ ಕ್ಷಮಾಧಾನ ನೀಡಬಾರದು ಎಂದು ದೆಹಲಿ ಸರ್ಕಾರವು ಲೆಫ್ಟಿನೆಂಟ್ ಗೌರ್ನರ್ಗೆ ಮನವಿ ಮಾಡಿದೆ.
ನಿರ್ಭಯಾ ಅತ್ಯಾಚಾರ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ವಿನಯ್ ಶರ್ಮಾ ತನಗೆ ಮರಣದಂಡನೆಯಿಂದ ಕ್ಷಮಾಧಾನ ನೀಡಬೇಕು ಎಂದು ಕೋರಿ ರಾಷ್ಟ್ರಪತಿ ರಮಾನಾಥ ಕೋವಿಂದ್ ಗೆ ಮನವಿ ಮಾಡಿದ್ದ. ಕ್ಷಮಾದಾನ ಕೋರಿದ್ದ ವಿನಯ್ ಶರ್ಮಾ 23 ವರ್ಷ ವಯಸ್ಸಾಗಿದ್ದು, ಆತ ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆಗಿದ್ದ.
ಇದರ ವಿರುದ್ಧ ದೆಹಲಿ ಸರ್ಕಾರವು ರಾಜ್ಯಪಾಲರಿಗೆ ಪತ್ರ ಬರೆದಿದ್ದು, ಯಾವುದೇ ಕಾರಣಕ್ಕೂ ಅತ್ಯಚಾರ ಆರೋಪಿಗೆ ಕ್ಷಮಾಧಾನ ನೀಡಬಾರದು ಎಂದು ಮನವಿ ಮಾಡಿದೆ.

'ಇದೊಂದು (ನಿರ್ಭಯಾ ಪ್ರಕರಣ) ಘೋರ ಪ್ರಕರಣವಾಗಿದ್ದು, ಅತ್ಯಂತ ಬರ್ಬರ ಕೃತ್ಯವನ್ನು ಆರೋಪಿಗಳು ಎಸಗಿದ್ದಾರೆ. ಮುಂದೆ ಇಂತಹಾ ಅಪರಾಧವನ್ನು ಮಾಡಬಾರದಂತೆ ಸಮಾಜಕ್ಕೆ ಅನುಕರಣಿಯ ಆಗುವಂತಹಾ ಶಿಕ್ಷೆ ನೀಡಬೇಕು ಎಂದು ದೆಹಲಿ ಸರ್ಕಾರ ಹೇಳಿದೆ.
ದೆಹಲಿ ಗೃಹ ಸಚಿವಾಲಯದಿಂದ ಈ ಮನವಿ ಮಾಡಲಾಗಿದ್ದು, ಗೃಹ ಮಂತ್ರಿಗಳು ಮಾತನಾಡಿ, ಕ್ಷಮಾಧಾನ ಅರ್ಜಿಯನ್ನು ಖಡ್ಡಾಯವಾಗಿ ತಿರಸ್ಕರಿಸುವಂತೆ ಮನವಿ ಮಾಡಲಾಗಿದೆ' ಎಂದರು.
ಮನವಿಯನ್ನು ಪ್ರಸ್ತುತ ದೆಹಲಿ ಲೆಫ್ಟಿನಂಟ್ ಗೌರ್ನರ್ ಗೆ ಕಳುಹಿಸಿದ್ದು, ಮುಂದೆ ರಾಷ್ಟ್ರಪತಿ, ಕೇಂದ್ರ ಗೃಹ ಸಚಿವಾಲಯಕ್ಕೂ ಕಳುಹಿಸಲಾಗುತ್ತದೆ.
ಕ್ಷಮಾಧಾನ ಕೇಳಿರುವ ವಿನಯ್ ಶರ್ಮಾ ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾನೆ. ಮತ್ತೊಬ್ಬ ಆರೋಪಿ ಮುಖೇಶ್ ತನಗೆ ಕ್ಷಮಾಧಾನ ಬೇಡವೆಂದು ನಿರಾಕರಿಸಿದ್ದಾನೆ. ಒಟ್ಟು ಆರು ಮಂದಿಯನ್ನು ಇದೇ ಪ್ರಕರಣದಲ್ಲಿ ಬಂಧಿಸಲಾಗಿದೆ.
-
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications