ರಾಜಧಾನಿಯಲ್ಲಿ 11,000 ಕಡೆ ಉಚಿತ ವೈಫೈ ಸೌಲಭ್ಯ: ಕೇಜ್ರಿವಾಲ್
ನವದೆಹಲಿ, ಡಿಸೆಂಬರ್ 4: ವೈಫೈ ಹಾಟ್ಸ್ಪಾಟ್ಗಳ ಮೂಲಕ ನಿತ್ಯವೂ 1.5 ಜಿಬಿವರೆಗೂ ಡೇಟಾದ ಉಚಿತ ಅಂತರ್ಜಾಲ ಸೌಲಭ್ಯ ಒದಗಿಸುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಪ್ರಕಟಿಸಿದರು.
ಈ ಸವಲತ್ತಿನ ಮೂಲಕ ನಮ್ಮ ಪ್ರಣಾಳಿಕೆಯ ಕೊನೆಯ ಭರವಸೆಯನ್ನು ಪೂರ್ಣಗೊಳಿಸುತ್ತಿದ್ದೇವೆ. ಈ ಯೋಜನೆಯು ವಿದ್ಯಾರ್ಥಿಗಳಿಗೆ ಹೆಚ್ಚು ಪ್ರಯೋಜನಕಾರಿಯಾಗಲಿದೆ ಎಂದು ತಿಳಿಸಿದರು.
ರಾಷ್ಟ್ರದ ರಾಜಧಾನಿಯಾದ್ಯಂತ ಸುಮಾರು 11,000 ಹಾಟ್ಸ್ಪಾಟ್ಗಳನ್ನು ಅಳವಡಿಸಲು ಸರ್ಕಾರ ಉದ್ದೇಶಿಸಿದೆ. ಡಿ.16ರ ವೇಳೆಗೆ 100 ಹಾಟ್ಸ್ಪಾಟ್ಗಳನ್ನು ಅಳವಡಿಸಲಾಗುವುದು. ನಂತರ ಪ್ರತಿ ವಾರ 500 ಹಾಟ್ಸ್ಪಾಟ್ಗಳನ್ನು ಅಳವಡಿಸಲಾಗುವುದು. ಎಲ್ಲ ಹಾಟ್ಸ್ಪಾಟ್ಗಳನ್ನೂ ಆರು ವಾರದ ಒಳಗೆ ಅಳವಡಿಸಲಾಗುತ್ತದೆ ಎಂದು ತಿಳಿಸಿದರು.

ಈ ಉದ್ದೇಶಕ್ಕಾಗಿ ಆಪ್ ಒಂದನ್ನು ಸಿದ್ಧಪಡಿಸಲಾಗುತ್ತಿದೆ. ಪ್ರೆಸ್ಟೋ ಎಂಬ ಕಂಪೆನಿ ಈ ಯೋಜನೆಯನ್ನು ನಿರ್ವಹಿಸುತ್ತಿದೆ. ದೆಹಲಿಯಾದ್ಯಂತ ಉಚಿತ ಇಂಟರ್ನೆಟ್ ಒದಗಿಸುವ ಈ ಯೋಜನೆಗೆ 100 ಕೋಟಿ ರೂ ವೆಚ್ಚ ತಗಲುತ್ತದೆ ಎಂದು ವಿವರಿಸಿದರು.
ಇದರಿಂದ ದೆಹಲಿಯ ನಿವಾಸಿಗಳು ತಿಂಗಳಿಗೆ 15 ಜಿಬಿ ಡೇಟಾ ಪಡೆದುಕೊಳ್ಳಲಿದ್ದಾರೆ. 4,000 ಹಾಟ್ಸ್ಪಾಟ್ಗಳು ಬಸ್ ನಿಲ್ದಾಣಗಳಲ್ಲಿ ಲಭ್ಯವಾಗಲಿವೆ. ಇನ್ನು 7,000 ಮಾರುಕಟ್ಟೆ, ನಿವಾಸಿ ಅಭಿವೃದ್ಧಿ ಸಂಸ್ಥೆಗಳು ಮತ್ತು ನಗರದ ಇತರೆ ಸ್ಥಳಗಳಲ್ಲಿ ಸಿಗಲಿವೆ ಎಂದರು.
ಕನಿಷ್ಠ ಡೇಟಾ ಬಳಕೆಯು ಜನರ ಮೂಲ ಅಗತ್ಯಗಳಲ್ಲಿ ಒಂದಾಗಿದೆ. ಈ ಸೌಲಭ್ಯದಿಂದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಅನುಕೂಲವಾಗಲಿದೆ. ಪ್ರತಿ ಹಾಟ್ಸ್ಪಾಟ್ನಲ್ಲಿ ಒಮ್ಮೆಗೆ 150-200 ಮಂದಿ ಬಳಕೆ ಮಾಡಬಹುದಾಗಿದೆ. ಇಡೀ ನೆಟ್ವರ್ಕ್ ಏಕಕಾಲದಲ್ಲಿ ಸುಮಾರು 22 ಲಕ್ಷ ಬಳಕೆದಾರರನ್ನು ನಿಭಾಯಿಸಲಿದೆ. ಒಂದು ಹಾಟ್ಸ್ಪಾಟ್ನಿಂದ ಇನ್ನೊಂದಕ್ಕೆ ಸ್ವಯಂಚಾಲಿತವಾಗಿಯೇ ಬದಲಾಗುತ್ತದೆ. 2015ರಲ್ಲಿ ಎಎಪಿ ಅಧಿಕಾರಕ್ಕೆ ಬಂದಾಗಲೇ ಈ ಯೋಜನೆಯನ್ನು ಘೋಷಿಸಲಾಗಿತ್ತು. ಆದರೆ ವಿವಿಧ ಕಾರಣಗಳಿಂದ ವಿಳಂಬವಾಗಿತ್ತು ಎಂದು ತಿಳಿಸಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications