66 ಖಾಸಗಿ ಮದ್ಯದಂಗಡಿ ತೆರೆಯಲು ದೆಹಲಿ ಸರ್ಕಾರ ಅನುಮತಿ
ದೆಹಲಿ, ಮೇ 23: ಲಾಕ್ಡೌನ್ ವೇಳೆ ಮದ್ಯದಂಗಡಿ ತೆರೆಯಲು ಅನುಮತಿ ಕೊಟ್ಟಿದ್ದಕ್ಕೆ ಅನೇಕ ಕಡೆ ವಿರೋಧ ವ್ಯಕ್ತವಾಗಿತ್ತು. ಆದರೆ, ರಾಜ್ಯ ಸರ್ಕಾರಗಳ ಆರ್ಥಿಕ ಸ್ಥಿತಿ ಸುಧಾರಿಸಲು ಮದ್ಯದಂಗಡಿ ತೆರೆಯುವುದು ಅನಿವಾರ್ಯವಾಗಿತ್ತು. ಹಾಗಾಗಿ, ಮೂರನೇ ಲಾಕ್ಡೌನ್ ಸಂದರ್ಭದಲ್ಲಿಯೇ ಮದ್ಯ ಮಾರಾಟಕ್ಕೆ ಅವಕಾಶ ಸಿಕ್ಕಿತ್ತು.
Recommended Video
ಇದೀಗ, ದೆಹಲಿ ಸರ್ಕಾರ ಖಾಸಗಿ ಮದ್ಯದಂಗಡಿಗಳನ್ನು ಓಪನ್ ಮಾಡಲು ಅವಕಾಶ ಕೊಟ್ಟಿದೆ. ಶುಕ್ರವಾರದಿಂದ 66 ಖಾಸಗಿ ಮದ್ಯದಂಗಡಿ ತೆರೆಯಲು ದೆಹಲಿ ಅಬಕಾರಿ ಇಲಾಖೆ ಅನುಮತಿ ನೀಡಿದೆ.
ಬೆಳಿಗ್ಗೆ 9 ರಿಂದ ಸಂಜೆ 6:30 ರವರೆಗೆ ತೆರೆಯಲು ಅವಕಾಶ ಕೊಟ್ಟಿದ್ದು, ಸರ್ಕಾರದ ಆದೇಶದ ಅನುಸಾರ ಹಾಗೂ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ತಿಳಿಸಿದೆ. ಜೊತೆ ಸಮ ಮತ್ತು ಬೆಸ ನಿಯಮವನ್ನು ಅನುಸರಿಸಲು ಸೂಚಿಸಲಾಗಿದೆ. ಇನ್ನುಳಿದಂತೆ ಮಾಲ್ಗಳಲ್ಲಿನ ಮದ್ಯದಂಗಡಿಗಳು ತೆರೆಯಲು ಅವಕಾಶ ಇಲ್ಲ.

ದೆಹಲಿಯಲ್ಲಿ ಒಟ್ಟು 863 ಮದ್ಯದಂಗಡಿಗಳಿವೆ. ಇದರಲ್ಲಿ 475 ಅಂಗಡಿಗಳು, ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ, ಪ್ರವಾಸೋದ್ಯಮ ಮತ್ತು ಸಾರಿಗೆ ಅಭಿವೃದ್ಧಿ ನಿಗಮ, ನಾಗರಿಕ ಸರಬರಾಜು ನಿಗಮ ಮತ್ತು ಗ್ರಾಹಕರ ಸಹಕಾರಿ ಸಗಟು ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಉಳಿದಂತೆ 389 ಅಂಗಡಿಗಳು ಖಾಸಗಿ ವ್ಯಕ್ತಿಗಳ ಒಡೆತನದಲ್ಲಿದೆ. ಈ 389 ರಲ್ಲಿ, ಸುಮಾರು 150 ಶಾಪಿಂಗ್ ಮಾಲ್ಗಳಲ್ಲಿವೆ. ಹಾಗಾಗಿ, ಅವುಗಳು ಮೇ 31ರವರೆಗೂ ತೆರೆಯಲು ಅನುಮತಿ ಇಲ್ಲ.
ದೆಹಲಿ ಸರ್ಕಾರ ಸೋಮವಾರ ಲಾಕ್ಡೌನ್ 4ರ ಮಾರ್ಗಸೂಚಿ ಹೊರಡಿಸಿತ್ತು. ಎಲ್ಲಾ ಮಾರುಕಟ್ಟೆಗಳು ಮತ್ತು ಮಾರುಕಟ್ಟೆ ಸಂಕೀರ್ಣಗಳನ್ನು ಬೆಸ-ಸಮ-ಆಧಾರದ ಮೇಲೆ ತೆರೆಯಲು ಅವಕಾಶ ಮಾಡಿಕೊಟ್ಟಿತು. ಇದರರ್ಥ ಕೇವಲ 50ರಷ್ಟು ಅಂಗಡಿಗಳನ್ನು ಮಾತ್ರ ತೆರೆಯಬೇಕು.
''ಅಗತ್ಯವಸ್ತುಗಳು ಸೇರಿದಂತೆ ಪುಸ್ತಕಗಳು, ಲೇಖನ ಸಾಮಗ್ರಿಗಳು, ಫ್ಯಾನ್ ಅಂಗಡಿಗಳನ್ನು ಎಲ್ಲಾ ದಿನಗಳಲ್ಲಿ ತೆರೆಯಲು ಅನುಮತಿ ಇದೆ" ಎಂದು ದೆಹಲಿ ಸರ್ಕಾರದ ಆದೇಶದಲ್ಲಿ ತಿಳಿಸಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications