ದೆಹಲಿಯಲ್ಲಿ ಮುಂದಿನ 3 ತಿಂಗಳ ಕಾಲ ಪಟಾಕಿ ಸಿಡಿಸುವಂತಿಲ್ಲ
ನವದೆಹಲಿ, ಸೆಪ್ಟೆಂಬರ್ 29: ದೆಹಲಿಯಲ್ಲಿ ಮುಂದಿನ 3 ತಿಂಗಳು ಪಟಾಕಿ ಸಿಡಿಸುವಂತಿಲ್ಲ ಎಂದು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ಆದೇಶಿಸಿದೆ.
ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು 2022ರ ಜನವರಿ 1ರವರೆಗೆ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಪಟಾಕಿಗಳನ್ನು ಸಿಡಿಸುವುದರಿಂದ ವಿಪರೀತ ವಾಯುಮಾಲಿನ್ಯವಾಗುತ್ತದೆ. ಶ್ವಾಸಕೋಶ ಸಂಬಂಧಿತ ಖಾಯಿಲೆಗಳಿಗೆ ಕಾರಣವಾಗುತ್ತದೆ ಎಂದು ಈಗಾಗಲೇ ಹಲವು ಪರಿಣಿತರು ಸರ್ಕಾರಕ್ಕೆ ಸಲಹೆ ನೀಡಿದ್ದರು.
ಈ ಸಲಹೆ ಆಧರಿಸಿ ಪಟಾಕಿ ನಿಷೇಧದ ನಿರ್ಣಯ ಕೈಗೊಳ್ಳಲಾಗಿದೆ ಎಂದು ದೆಹಲಿ ಸರ್ಕಾರ ತಿಳಿಸಿದೆ. ಅಲ್ಲದೇ ವಾಯುಮಾಲಿನ್ಯ ಕೋವಿಡ್ ಪಿಡುಗಿನ ಈ ಸಂದರ್ಭದಲ್ಲಿ ವೃದ್ಧರು ಮತ್ತು ಚಿಕ್ಕಮಕ್ಕಳ ಶ್ವಾಸಕೋಶಕ್ಕೆ ಹಾನಿಯುಂಟು ಮಾಡುವ ಸಂಭಾವ್ಯತೆಯೂ ಹೆಚ್ಚಿದೆ. ಹೀಗಾಗಿ ಪಟಾಕಿಯ ಬಳಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ ಎಂದು ದೆಹಲಿ ಸರ್ಕಾರ ತಿಳಿಸಿದೆ.

ಎಲ್ಲಾ ರೀತಿಯ ಪಟಾಕಿಗಳನ್ನು ಈ ಅವಧಿಯಲ್ಲಿ ನಿಷೇಧಿಸಲಾಗಿದ್ದು, ವಾಯುಮಾಲಿನ್ಯ ತಡೆಗಟ್ಟುವ ಉದ್ದೇಶದಿಂದ ಈ ನಿರ್ಣಯ ಕೈಗೊಳ್ಳಲಾಗಿದೆ. ಕೆಲವೇ ದಿನಗಳಲ್ಲಿ ಸಾಲುಸಾಲು ಹಬ್ಬಗಳು ಬರಲಿದ್ದು ಹಬ್ಬಗಳ ಆಚರಣೆಯಲ್ಲಿ ಪಟಾಕಿ ಸಿಡಿಸುವುದು ವಾಯುಮಾಲಿನ್ಯಕ್ಕೆ ಕಾರಣವಾಗಲಿದೆ. ಹೀಗಾಗಿ ಪಟಾಕಿ ಬಳಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ ಎಂದು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ತಿಳಿಸಿದೆ.
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯವಂತೂ ಮಿತಿಮೀರಿದೆ. ಅಲ್ಲಿನ ಜನರು ಸ್ವಚ್ಛಗಾಳಿ ಉಸಿರಾಡಲು ಸಾಧ್ಯವಾಗದೆ ಶ್ವಾಸಕೋಶಿ ಸಂಬಂಧಿತ ಕಾಯಿಲೆಗಳಿಂದ ಬಳಲುವವರ ಸಂಖ್ಯೆ ಹೆಚ್ಚಾಗಿದೆ.
ಹೀಗಿರುವಾದ ದೆಹಲಿ ಸರ್ಕಾರ ಜನರಿಗೊಂದು ಶುಭಸುದ್ದಿ ನೀಡಿದೆ. ದೆಹಲಿಯ ಕೊನಾಟ್ ಪ್ರದೇಶದಲ್ಲಿ ನಿರ್ಮಾಣವಾದ ಹೊಗೆ ಗೋಪುರದ ಪ್ರಯೋಗ ಮುಗಿದಿದೆ. ಅಕ್ಟೋಬರ್ 1ರಿಂದ ಈ ಗೋಪುರ ಕಾರ್ಯ ನಿರ್ವಹಿಸಲಿದೆ ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರಾಯ್ ತಿಳಿಸಿದ್ದಾರೆ.
ಟ್ವೀಟ್ ಮಾಡಿರುವ ಅವರು, ಹೊಗೆ ಗೋಪುರದ ಪ್ರಾಯೋಗಿಕ ಕಾರ್ಯ ಮುಕ್ತಾಯವಾಗಿದೆ. ಅಕ್ಟೋಬರ್ 1ರಿಂದ ಪೂರ್ಣ ಪ್ರಮಾಣದಲ್ಲಿ ಇದು ಕೆಲಸ ನಿರ್ವಹಿಸಲಿದೆ.
ಉಸ್ತುವಾರಿ, ಮೇಲ್ವಿಚಾರಣೆ ನೋಡಿಕೊಳ್ಳಲು ಐಐಟಿ-ಬಾಂಬೆ, ಐಐಟಿ-ದೆಹಲಿ ಮತ್ತು ಡಿಪಿಸಿಸಿಯ ವಿಜ್ಞಾನಿಗಳ ತಂಡ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ.
ಪಟಾಕಿಗಳನ್ನು ಸಿಡಿಸುವುದರಿಂದ ವಿಪರೀತ ವಾಯುಮಾಲಿನ್ಯವಾಗುತ್ತದೆ. ಮತ್ತದು ಶ್ವಾಸಕೋಶ ಸಂಬಂಧಿತ ಖಾಯಿಲೆಗಳಿಗೆ ಕಾರಣವಾಗುತ್ತದೆ ಎಂದು ಈಗಾಗಲೇ ಹಲವು ಪರಿಣಿತರು ಸರ್ಕಾರಕ್ಕೆ ಸಲಹೆ ನೀಡಿದ್ದರು.
ಈ ಸಲಹೆ ಆಧರಿಸಿ ಪಟಾಕಿ ನಿಷೇಧದ ನಿರ್ಣಯ ಕೈಗೊಳ್ಳಲಾಗಿದೆ ಎಂದು ದೆಹಲಿ ಸರ್ಕಾರ ತಿಳಿಸಿದೆ. ಅಲ್ಲದೇ ವಾಯುಮಾಲಿನ್ಯ ಕೊವಿಡ್ ಪಿಡುಗಿನ ಈ ಸಂದರ್ಭದಲ್ಲಿ ವೃದ್ಧರು ಮತ್ತು ಚಿಕ್ಕಮಕ್ಕಳ ಶ್ವಾಸಕೋಶಕ್ಕೆ ಹಾನಿಯುಂಟು ಮಾಡುವ ಸಂಭಾವ್ಯತೆಯೂ ಹೆಚ್ಚಿದೆ. ಹೀಗಾಗಿ ಪಟಾಕಿಯ ಬಳಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ ಎಂದು ದೆಹಲಿ ಸರ್ಕಾರ ತಿಳಿಸಿದೆ.
-
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ












Click it and Unblock the Notifications