ದಿನಕ್ಕೆ 5 ಟ್ರಕ್ ಲೋಡ್ ಈರುಳ್ಳಿ ಕಳಿಸಿ: ಕೇಂದ್ರಕ್ಕೆ ದೆಹಲಿ ಸರ್ಕಾರ ಬೇಡಿಕೆ
ನವದೆಹಲಿ, ಸೆಪ್ಟೆಂಬರ್ 24: ದಿನೇ ದಿನೇ ಏರುತ್ತಿರುವ ಈರುಳ್ಳಿ ದರ ಜನಸಾಮಾನ್ಯರಲ್ಲಿ ಕಳವಳ ಮೂಡಿಸಿದೆ. ರಾಜಧಾನಿ ದೆಹಲಿಯಲ್ಲಿ ಈರುಳ್ಳಿ ಬೆಲೆಯನ್ನು ನಿಯಂತ್ರಣಕ್ಕೆ ತರುವ ಸಂಬಂಧ ಮತ್ತು ಬೆಲೆ ಏರಿಕೆಯನ್ನು ಪರಾಮರ್ಶಿಸುವ ಸಲುವಾಗಿ ಹಿರಿಯ ಅಧಿಕಾರಿಗಳು ಉನ್ನತಮಟ್ಟದ ಸಭೆ ನಡೆಸಿದರು.
ರಾಜಧಾನಿಯಲ್ಲಿ ಅಧಿಕವಾಗಿರುವ ಈರುಳ್ಳಿ ಬೆಲೆಯನ್ನು ಕಡಿಮೆ ಮಾಡಿ ಜನಸಾಮಾನ್ಯರಿಗೆ ದೊರಕುವಂತೆ ಮಾಡಲು ದೆಹಲಿಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಇಮ್ರಾನ್ ಹುಸೇನ್ ಅವರು ದೆಹಲಿಯ ಸಂಬಂಧಿಸಿದ ಅಧಿಕಾರಿಗಳನ್ನು ಭೇಟಿ ಮಾಡಿ ಪ್ರತಿ ದಿನ ಐದು ಟ್ರಕ್ ಈರುಳ್ಳಿಯನ್ನು ಸರಬರಾಜು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಭಾರತೀಯ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಸಮಿತಿ (ಎನ್ಎಎಫ್ಇಡಿ) ಮೂಲಕ ಪ್ರತಿದಿನ ಐದು ಟ್ರಕ್ ತುಂಬಾ ಈರುಳ್ಳಿ ಕಳುಹಿಸುವಂತೆ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಮನವಿ ಕಳುಹಿಸಲಾಗಿದೆ ಎಂದು ಆಹಾರ ಆಯುಕ್ತರು ತಿಳಿಸಿದ್ದಾರೆ.

ದೆಹಲಿಯಲ್ಲಿನ ಈರುಳ್ಳಿಯ ಅಗತ್ಯದ ಆಧಾರದಲ್ಲಿಯೂ ಪೂರೈಕೆಯನ್ನು ಹೆಚ್ಚಿಸಬಹುದು ಎಂದು ದೆಹಲಿ ಸರ್ಕಾರ ಹೇಳಿದೆ. ದೆಹಲಿಯಲ್ಲಿ ಈರುಳ್ಳಿ ಬೆಲೆ ಕಳೆದ ವರ್ಷಕ್ಕೆ ಹೋಲಿಸಿದರೆ 200 ಪಟ್ಟು ಹೆಚ್ಚಳವಾಗಿದೆ.
ಜತೆಗೆ ಕಾಳಸಂತೆಯಲ್ಲಿ ಈರುಳ್ಳಿ ಮಾರುವವರು, ಗೋದಾಮುಗಳಲ್ಲಿ ಅಕ್ರಮವಾಗಿ ಸಂಗ್ರಹ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚಿಸಲಾಗಿದೆ. ದೆಹಲಿ ಸರ್ಕಾರವು ತನ್ನ 390 ಮಾರಾಟ ಕೇಂದ್ರಗಳು ಮತ್ತು 80 ಮೊಬೈಲ್ ವ್ಯಾನ್ಗಳ ಮೂಲಕ ಸಬ್ಸಿಡಿ ದರದಲ್ಲಿ ಕೆಜಿಗೆ 23.90ರೂದಂತೆ ಈರುಳ್ಳಿ ಮಾರಾಟಕ್ಕೆ ಸಿದ್ಧತೆ ನಡೆಸಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications