ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪದ್ಮ ಪ್ರಶಸ್ತಿಗೆ ವೈದ್ಯರ ಹೆಸರು ಶಿಫಾರಸು ಮಾಡಲಿದೆ ದೆಹಲಿ ಸರ್ಕಾರ

|
Google Oneindia Kannada News

ನವದೆಹಲಿ, ಜುಲೈ 27: ಭಾರತ ಸರ್ಕಾರದ ವತಿಯಿಂದ ನೀಡಲಾಗುವ ಪದ್ಮ ಪ್ರಶಸ್ತಿಗಳಿಗಾಗಿ ಈ ಬಾರಿ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ಹೆಸರನ್ನು ಶಿಫಾರಸು ಮಾಡಲು ನಿರ್ಧರಿಸಿರುವುದಾಗಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅರವಿಂದ ಕೇಜ್ರಿವಾಲ್, "ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಜನರ ಸೇವೆಯಲ್ಲಿ ತೊಡಗಿ ಕೊರೊನಾ ಸೋಂಕಿನ ವಿರುದ್ಧ ಹೋರಾಟ ನಡೆಸಿದ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ಹೆಸರನ್ನು ಈ ಬಾರಿ ದೆಹಲಿ ಸರ್ಕಾರ ಪದ್ಮ ಪ್ರಶಸ್ತಿಗಾಗಿ ಸೂಚಿಸಲು ನಿರ್ಧರಿಸಿದೆ. ಅವರಿಗೆ ಈ ಮೂಲಕ ಧನ್ಯವಾದ ಹೇಳಲು ಬಯಸುತ್ತೇವೆ. ಅವರಿಗೆ ಈ ರೀತಿಯಲ್ಲಿ ಗೌರವ ಸಮರ್ಪಿಸುತ್ತೇವೆ" ಎಂದು ಹೇಳಿದ್ದಾರೆ.

ಭಾರತದಲ್ಲಿ ಜೀವ ರಕ್ಷಿಸುವ ವೈದ್ಯರ ಮೇಲೆಯೇ ಹೆಚ್ಚುತ್ತಿರುವ ಹಲ್ಲೆ!ಭಾರತದಲ್ಲಿ ಜೀವ ರಕ್ಷಿಸುವ ವೈದ್ಯರ ಮೇಲೆಯೇ ಹೆಚ್ಚುತ್ತಿರುವ ಹಲ್ಲೆ!

"ಜನರೇ ಅವರ ಹೆಸರುಗಳನ್ನು ಸೂಚಿಸಬಹುದು. ಕೊರೊನಾ ಸಂದರ್ಭದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವೈದ್ಯರ ಅಥವಾ ಆರೋಗ್ಯ ಕಾರ್ಯಕರ್ತರ ಹೆಸರುಗಳನ್ನು ಮಿಂಚಂಚೆ ಮೂಲಕ ಆಗಸ್ಟ್‌ 15ರ ಒಳಗೆ ಕಳುಹಿಸಿಕೊಡಬಹುದು" ಎಂದು ತಿಳಿಸಿದ್ದಾರೆ. ಈ ಹೆಸರುಗಳು ಪರಿಶೀಲನೆಗೆ ಸಮಿತಿ ರಚಿಸಿರುವುದಾಗಿ ತಿಳಿಸಿದ್ದಾರೆ.

 Delhi Govt To Send Names Of Doctors Healthcare Workers For Padma Awards

ಪದ್ಮವಿಭೂಷಣ, ಪದ್ಮ ಭೂಷಣ, ಪದ್ಮಶ್ರೀ ಪ್ರಶಸ್ತಿಗಳಿಗೆ ಹೆಸರು ನೋಂದಣಿ ಹಾಗೂ ಶೀಫಾರಸನ್ನು ಸೆಪ್ಟೆಂಬರ್ 15ರವರೆಗೂ ಮಾಡಲು ಅವಕಾಶವಿದೆ ಎಂದರು.

ಕೊರೊನಾ ಬಿಕ್ಕಟ್ಟಿನ ಸಂದರ್ಭ ವೈದ್ಯಕೀಯ ಸಿಬ್ಬಂದಿ ಸೇವೆ ಮರೆಯಲಾರದಂಥದ್ದು. ಹೀಗಾಗಿ ಈ ಬಾರಿ ವೈದ್ಯರ ಹೆಸರನ್ನು ಸೂಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದರು.

ಈಚೆಗೆ ಪ್ರಧಾನಿ ಮೋದಿ, ಪದ್ಮ ಪ್ರಶಸ್ತಿಗಳಿಗೆ ಹೆಸರುಗಳನ್ನು ನಾಮನಿರ್ದೇಶನ ಮಾಡುವಂತೆ ತಿಳಿಸಿದ್ದರು. ಈ ಬೆನ್ನಲ್ಲೇ ದೆಹಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

English summary
CM Arvind Kejriwal on tuesday said that the delhi government has decided to send the names of doctors and healthcare workers for padma awards of this year
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X