ದೆಹಲಿ-ಗುರುಗ್ರಾಮ ಗಡಿ ಬಂದ್: ವಾಹನ ಸವಾರರ ಪ್ರತಿಭಟನೆ
ನವದೆಹಲಿ, ಮೇ 29: ಹರ್ಯಾಣದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಹಾಗೂ ಹರ್ಯಾಣಾ ಸಂಪರ್ಕಿಸುವ ದಾರಿಯನ್ನು ಬಂದ್ ಮಾಡಿದ್ದಾರೆ.
ಹೀಗಾಗಿ ಹರ್ಯಾಣಾದಿಂದ ದೆಹಲಿಗೆ ಹೊರಟಿದ್ದ ವಾಹನಗಳಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ದೆಹಲಿಯಿಂದ ಗುರುಗ್ರಾಮಕ್ಕೆ ಹೊರಟಿದ್ದ ಹಾಗೂ ಗುರುಗ್ರಾಮದಿಂದ ದೆಹಲಿ ಕಡೆಗೆ ತೆರಳುತ್ತಿದ್ದ ಎಲ್ಲಾ ವಾಹನಗಳ ಸಂಚಾರಕ್ಕೆ ತಡೆ ನೀಡಲಾಯಿತು.
ಪಾಸ್ ಇದ್ದವರಿಗೆ ಮಾತ್ರ ತೆರಳಲು ಅವಕಾಶ ನೀಡಿದರು.ಅವರಿಗೆ ಬಿಡುತ್ತಿದ್ದೀರಿ ನಮಗ್ಯಾಕೆ ಬಿಡುತ್ತಿಲ್ಲ ಎಂದು ಸೈಕಲ್ ಹಾಗೂ ಬೈಕ್ನಲ್ಲಿ ತೆರಳುತ್ತಿದ್ದ ಕೆಲ ಕಾರ್ಮಿಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ದೆಹಲಿಯಲ್ಲಿ ಕೂಡ ಕೊರೊನಾ ವೈರಸ್ ಪ್ರಕರಣ ಹೆಚ್ಚಿದೆ, ಹರ್ಯಾಣಾದಲ್ಲಿ ಹಚ್ಚಾಗುತ್ತಿರುವ ಕಾರಣ ಅನಿವಾರ್ಯ ಕಾರಣಗಳಿಂದ ದೆಹಲಿ -ಗುರುಗ್ರಾಮ ಹೆದ್ದಾರಿಯನ್ನು ಬಂದ್ ಮಾಡಲಾಗಿತ್ತು.
ಹರ್ಯಾಣಾದಲ್ಲಿ 1447 ಕೊರೊನಾ ಸಂಕಿತರಿದ್ದಾರೆ 19 ಮಂದಿ ಮೃತಪಟ್ಟಿದ್ದಾರೆ. ಒಂದು ವಾರದಲ್ಲಿ ಫರೀದಾಬಾದ್ನಲ್ಲಿ 98, ಜಜ್ಜಾರ್ನಲ್ಲಿ ಆರು, ಸೋನಿಪತ್ನಲ್ಲಿ 27, ಗುರುಗ್ರಾಮದಲ್ಲಿ 111 ಪ್ರಕರಣಗಳು ಪತ್ತೆಯಾಗಿತ್ತು.
ದೆಹಲಿಯಿಂದ ಹರ್ಯಾಣಕ್ಕೆ ತೆರಳುವವರಿಗೆ ಅನುಕೂಲಮಾಡಿಕೊಡಬೇಕು, ಕೆಲವು ನಿಯಮಗಳನ್ನು ಸಡಿಲಗೊಳಿಸಬೇಕು ಎಂದು ದೆಹಲಿ ಹೈಕೋರ್ಟ್ ಆದೇಶಿಸಿತ್ತು. ಅದಾದ ಬಳಿಕ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ.
-
ಅಕ್ಷಯ ತೃತೀಯದ ದಿನ ಈ ಸಮಯದಲ್ಲಿ ವಾಹನ ಖರೀದಿಸಿದರೆ ಅದೃಷ್ಟ: ರಾಶಿಗೆ ಅನುಗುಣವಾಗಿ ಈ ಬಣ್ಣಕ್ಕಿರಲಿ ಆದ್ಯತೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications