2 ಜಿ ಹಗರಣ: ಖುಲಾಸೆ ತೀರ್ಪಿನ ವಿರುದ್ಧ ಹೈಕೋರ್ಟ್ ನಲ್ಲಿ ಮೇಲ್ಮನವಿ
ನವದೆಹಲಿ, ಮಾರ್ಚ್ 21: ಕಳೆದ ಡಿಸೆಂಬರ್ ನಲ್ಲಿ ಹೊರಬಿದ್ದ 2 ಜಿ ಸ್ಪೆಕ್ಟ್ರಂ ಹಗರಣಕ್ಕೆ ಸಂಬಂಧಿಸಿದ 19 ಆರೋಪಿಗಳನ್ನು ಖುಲಾಸೆಗೊಳಿಸಿದ್ದ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪಿನ ವಿರುದ್ಧ ದೆಹಲಿ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಈ ಮೇಲ್ಮನವಿಯಲ್ಲಿ, ಸುಮಾರು 30 ಕೋಟಿ ರೂ. ಗಳ ಈ ಹಗರಣದ ಕುರಿತು ಮತ್ತೊಮ್ಮೆ ವಿಚಾರಣೆ ನಡೆಸುವಂತೆ ಹೈಕೋರ್ಟ್ ಗೆ ಕೋರಿಕೊಂಡಿದೆ.

ಈ ಕುರಿತು ದೆಹಲಿ ನ್ಯಾಯಾಲಯ ಇಂದು(ಮಾ.21) ವಿಚಾರಣೆ ನಡೆಸಲಿದೆ. 2014ರಲ್ಲಿ ಯುಪಿಎ ಸರ್ಕಾರ ಅಧಿಕಾರವಧಿಯಲ್ಲಿ ನಡೆದಿದ್ದ 30 ಸಾವಿರ ಕೋಟಿ ರೂ. ಹಗರಣದ ಪ್ರಮುಖ ಆರೋಪಿಗಳಾಗಿದ್ದ ಮಾಜಿ ಸಚಿವ ಎ.ರಾಜಾ, ಕರಣಾನಿಧಿ ಅವರ ಪುತ್ರಿ, ಸಂಸದೆ ಕನ್ನಿಮೊಳಿ ಸೇರಿದಂತೆ ಒಟ್ಟು 19 ಆರೋಪಿಗಳನ್ನು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿತ್ತು.












Click it and Unblock the Notifications