Breaking: ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಆಸ್ಪತ್ರೆಗೆ ದಾಖಲು
ನವದೆಹಲಿ, ಜೂನ್ 16: ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಗೆ ದಾಖಲಿಸಲಾಗಿದೆ.
Recommended Video
ದೆಹಲಿಯ ರಾಜೀವ್ಗಾಂಧಿ ಆಸ್ಪತ್ರೆಯಲ್ಲಿ ಅವರನ್ನು ದಾಖಲಿಸಲಾಗಿದೆ. ತೀವ್ರ ಜ್ವರವಿದ್ದು, ಉಸಿರಾಟದ ತೊಂದರೆಯೂ ಕೂಡ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಚಿವರು ಟ್ವೀಟ್ ಮಾಡಿದ್ದು' ಅತಿಯಾದ ಜ್ವರವಿದ್ದ ಕಾರಣ ಉಸಿರಾಡಲು ಸಾಧ್ಯವಾಗುತ್ತಿರಲಿಲ್ಲ.
ಆಕ್ಸಿಜನ್ ಪ್ರಮಾಣ ಏರಿಳಿತವಾಗುತ್ತಿತ್ತು. ಹೀಗಾಗಿ ರಾತ್ರಿಯೇ ಆಸ್ಪತ್ರೆಗೆ ಬಂದು ದಾಖಲಾಗಿದ್ದೇನೆ' ಎಂದು ತಿಳಿಸಿದ್ದಾರೆ. ಸೋಮವಾರ ಅಮಿತ್ ಶಾ ಕರೆದಿದ್ದ ಸಭೆಯಲ್ಲಿ ಸರ್ವ ಪಕ್ಷಗಳ ಸಭೆಯಲ್ಲಿ ಇವರೂ ಕೂಡ ಪಾಲ್ಗೊಂಡಿದ್ದರು.
Due to high grade fever and a sudden drop of my oxygen levels last night I have been admitted to RGSSH. Will keep everyone updated
— Satyendar Jain (@SatyendarJain) June 16, 2020
ಇದಕ್ಕೂ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೂ ಜ್ವರ ಹಾಗೂ ಉಸಿರಾಟ ತೊಂದರೆ ಕಾಣಿಸಿಕೊಂಡಿತ್ತು, ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬಳಿಕ ನಡೆದ ಪರೀಕ್ಷೆಯಲ್ಲಿ ಕೊರನಾ ನೆಗೆಟಿವ್ ಬಂದಿತ್ತು, ಇದೀಗ ಸಂತ್ಯೇಂದರ್ ಅವರ ಆರೋಗ್ಯ ತಪಾಸಣೆಯನ್ನು ನಡೆಸಲಾಗಿದ್ದು, ಇಂದು ಕೊರೊನಾ ಪರೀಕ್ಷೆ ನಡೆಯಲಿದೆ. ವರದಿ ಬಂದ ಬಳಿಕ ನಿಜವಾದ ಕಾರಣ ಏನೆಂದು ತಿಳಿದುಬರಲಿದೆ.