ನ್ಯಾಷನಲ್ ಹೆರಾಲ್ಡ್: ಸೋನಿಯಾ, ರಾಹುಲ್ ವಿಚಾರಣೆಗೆ ಕೋರ್ಟ್ ಒಪ್ಪಿಗೆ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಎಐಸಿಸಿ ಅಧಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷೆ ರಾಹುಲ್ ಗಾಂಧಿ ವಿಚಾರಣೆ ನಡೆಸಲು ಆದಾಯ ತೆರಿಗೆ ಇಲಾಖೆಗೆ ದೆಹಲಿ ಹೈಕೋರ್ಟ್ ಒಪ್ಪಿಗೆ ಸೂಚಿಸಿದೆ
ನವದೆಹಲಿ, ಮೇ 12: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ಒಪ್ಪಿಗೆ ನೀಡಿದೆ. ನ್ಯಾಷನಲ್ ಹೆರಾಲ್ಡ್ ಸೇರಿದಂತೆ ಮೂರು ಪತ್ರಿಕೆಗಳ ಕಂಪೆನಿಗಳಿಗೆ ಸಂಬಂಧಿಸಿದಂತೆ ಸೋನಿಯಾ ಹಾಗೂ ರಾಹುಲ್ ವಿಚಾರಣೆಗೆ ಆದಾಯ ತೆರಿಗೆ ಇಲಾಖೆಗೆ ದಾರಿ ಸುಗಮವಾಗಿದೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ದಿವಂಗತ ಪ್ರಧಾನಿ ಜವಾಹರ್ ಲಾಲ್ ನೆಹರು ಆರಂಭಿಸಿ, ಅದರ ಸಂಪಾದಕರೂ ಆಗಿದ್ದರು. ಹದಿನೈದು ದಶಲಕ್ಷ ಅಮೆರಿಕನ್ ಡಾಲರ್ ನಷ್ಟು ಸಾಲ ಹಿಂತಿರುಗಿಸಲಾಗದೆ 2008ರಲ್ಲಿ ಮುಚ್ಚಿತ್ತು.[ಪ್ರಧಾನಿ ನಿವಾಸಕ್ಕಿಂತ ಸೋನಿಯಾ ಗಾಂಧಿ ಬಂಗಲೆಯೇ ದೊಡ್ಡದು!]

ನೆಹರೂ ಅವರ ಮರಿಮಗ ರಾಹುಲ್ ಹಾಗೂ ಸೋನಿಯಾ ಗಾಂಧಿ ಆ ಸಂಸ್ಥೆಯ ಖರೀದಿಗಾಗಿ ಯಂಗ್ ಇಂಡಿಯನ್ ಕಂಪೆನಿ ಎಂದು ಹುಟ್ಟು ಹಾಕಿ, ಕಾಂಗ್ರೆಸ್ ಪಕ್ಷದ ನಿಧಿಯಿಂದ ನ್ಯಾಷನಲ್ ಹೆರಾಲ್ಡ್ ಸಾಲ ತೀರಿಸಿದ್ದಾರೆ. ಪತ್ರಿಕೆಯ ಸಹವರ್ತಿ ಸಂಸ್ಥೆಗಳ ಆಸ್ತಿ ಮೌಲ್ಯವೇ 335 ಮಿಲಿಯನ್ ಡಾಲರ್ ಅಮೆರಿಕನ್ ಡಾಲರ್ ಇದ್ದು, ಅವು ಸಾಲ ತೀರಿಸಬಹುದಿತ್ತು ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದರು.
ಯಂಗ್ ಇಂಡಿಯನ್ ಕಂಪೆನಿಯು ನ್ಯಾಷನಲ್ ಹೆರಾಲ್ಡ್ ಮತ್ತು ಇತರ ಪತ್ರಿಕೆಯ ಎಲ್ಲ ಷೇರುಗಳನ್ನು ಖರೀದಿಸಿ, ಅದರ ಆಸ್ತಿಗಳನ್ನು ಬಾಡಿಗೆಗೆ ನೀಡಿ, ಅದರ ಲಾಭವನ್ನು ಷೇರುದಾರರಿಗೆ ಹಂಚಲಾಗಿತ್ತು. ಷೇರುದಾರರ ಪೈಕಿ ರಾಹುಲ್ ಹಾಗೂ ಸೋನಿಯಾ ಗಾಂಧಿ ಅವರದೇ ಶೇ 76ರಷ್ಟು ಒಡೆತನವಿತ್ತು.[ನ್ಯಾಷನಲ್ ಹೆರಾಲ್ಡ್ ಆರಂಭಕ್ಕೆ 'ಕೈ' ಮುಂದೆ, ಏನಿದೆ ಹಿಂದೆ?]
ಪಕ್ಷದ ನಿಧಿ ಹದಿನೈದು ದಶಲಕ್ಷ ಅಮೆರಿಕನ್ ಡಾಲರ್ ಅನ್ನು ವೈಯಕ್ತಿಕ ಲಾಭಕ್ಕಾಗಿ ಬಳಸಿಕೊಂಡ ಆರೋಪದ ಮೇಲೆ ವೈಯಕ್ತಿಕವಾಗಿ ಕೋರ್ಟ್ ಗೆ ಹಾಜರಾಗುವುದಕ್ಕೆ ವಿನಾಯಿತಿ ನೀಡಬೇಕೆಂದು 2016ರಲ್ಲಿ ಸೋನಿಯಾ-ರಾಹುಲ್ ಅರ್ಜಿ ಹಾಕಿಕೊಂಡಿದ್ದರು. ಅದಕ್ಕೆ ಕೋರ್ಟ್ ಸಹ ಒಪ್ಪಿಗೆ ಸೂಚಿಸಿತ್ತು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications