ನಿರೀಕ್ಷಣಾ ಜಾಮೀನು ರದ್ದು : ರಾಬರ್ಟ್ ವಾದ್ರಾಗೆ ಹೈಕೋರ್ಟ್ ನೋಟೀಸ್
ನವದೆಹಲಿ, ಮೇ 27 : ಸೋನಿಯಾ ಗಾಂಧಿ ಅವರ ಅಳಿಯ, ಪ್ರಿಯಾಂಕಾ ವಾದ್ರಾ ಅವರ ಗಂಡ, ಉದ್ಯಮಿ ರಾಬರ್ಟ್ ವಾದ್ರಾ ಅವರ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸಬೇಕೆಂದು ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ರಾಬರ್ಟ್ ವಾದ್ರಾ ಅವರಿಗೆ ದೆಹಲಿ ಹೈ ಕೋರ್ಟ್ ನೋಟೀಸ್ ಜಾರಿ ಮಾಡಿದೆ.
ಭಾರತ ಸರಕಾರದ ಕಣ್ಣಿಗೆ ಯುನೈಟೆಡ್ ಕಿಂಗಡಂನಲ್ಲಿ ಅಕ್ರಮವಾಗಿ ಆಸ್ತಿಪಾಸ್ತಿ ಮಾಡಿರುವ ರಾಬರ್ಟ್ ವಾದ್ರಾ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಗುರಿಪಡಿಸಿದೆ. ಆದರೆ, ಸಿಬಿಐ ವಿಶೇಷ ನ್ಯಾಯಾಲಯದಿಂದ ರಾಬರ್ಟ್ ವಾದ್ರಾ ಅವರು ನಿರೀಕ್ಷಣಾ ಜಾಮೀನನ್ನು ಪಡೆದುಕೊಂಡಿದ್ದರು.
ಲಂಡನ್ನಿನಲ್ಲಿ ಅಕ್ರಮವಾಗಿ ವಿಲ್ಲಾ, ನಿವೇಶನಗಳನ್ನು ಕೊಂಡಿದ್ದಾರೆಂದು ಅವರ ಮೇಲೆ ಆರೋಪ ಹೊರಿಸಲಾಗಿದೆ. ಅವರ ಜೊತೆ, ರಾಬರ್ಟ್ ವಾದ್ರಾ ಅವರ ಆಪ್ತ ಸಹಾಯಕ ರಾಬರ್ಟ್ ಆರೋರಾ ಅವರಿಗೂ ಕೋರ್ಟ್ ನೋಟೀಸ್ ನೀಡಿದೆ. ಮುಂದಿನ ವಿಚಾರಣೆ ಜುಲೈ 17ರಂದು ಹೈಕೋರ್ಟಿನಲ್ಲಿ ನಡೆಯಲಿದೆ.

ವಿದೇಶಗಳಲ್ಲಿಯೂ ತಮ್ಮ ವಹಿವಾಟುಗಳು ಇರುವುದರಿಂದ ವಿದೇಶಕ್ಕೆ ಪಯಣಿಸಲು ಅನುಮತಿ ಕೋರಿ ರಾಬರ್ಟ್ ವಾದ್ರಾ ಅವರು ಕೆಲ ದಿನಗಳ ಹಿಂದೆ ಅರ್ಜಿ ಸಲ್ಲಿಸಿದ್ದರು. ಅಲ್ಲದೆ, ಭದ್ರತಾ ದೃಷ್ಟಿಯಿಂದ ತಮ್ಮ ಪ್ರವಾಸದ ಯಾವುದೇ ವಿವರಗಳನ್ನು ಬಹಿರಂಗಪಡಿಸಬಾರದು ಎಂದು ರಾಬರ್ಟ್ ವಾದ್ರಾ ಅವರು ಆಗ್ರಹಿಸಿದ್ದಾರೆ.
ಹರ್ಯಾಣದ ಫತೇಹ್ ಭಾಗ್ ನಲ್ಲಿ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದ ನರೇಂದ್ರ ಮೋದಿಯವರು, 'ಶೆಹೆನ್ ಶಾ' ರಾಬರ್ಟ್ ವಾದ್ರಾ ಅವರನ್ನ ರೈತರನ್ನು ಲೂಟಿ ಮಾಡಿದ್ದಕ್ಕಾಗಿ ಅವರನ್ನು ನ್ಯಾಯಾಲಯಕ್ಕೆ ಎಳೆತಂದಿದ್ದಕ್ಕಾಗಿ ಅವರು ನಡುಗುತ್ತಿದ್ದಾರೆ, ಅವರನ್ನು ಶೀಘ್ರದಲ್ಲಿಯೇ ಜೈಲಿಗೆ ಅಟ್ಟಲಾಗುವುದು ಎಂದು ಅಬ್ಬರಿಸಿದ್ದರು.
ಯುಕೆಯಲ್ಲಿ ರಾಬರ್ಟ್ ವಾದ್ರಾ ಅವರು ಹಲವಾರು ಆಸ್ತಿಯನ್ನು ಅನೈತಿಕವಾಗಿ ಕೊಂಡಿದ್ದಾರೆ ಮತ್ತು ಅವುಗಳನ್ನು ಆದಾಯ ತೆರಿಗೆ ಪತ್ರದಲ್ಲಿ ಘೋಷಣೆ ಮಾಡಿಲ್ಲ ಎಂಬ ಆರೋಪ ಅವರ ಮೇಲಿದೆ. ಅಲ್ಲಿ ಮೂರು ವಿಲ್ಲಾಗಳಾಗಿದ್ದು, ಉಳಿದವು ಐಷಾರಾಮಿ ಫ್ಲಾಟ್ ಗಳಾಗಿವೆ. ಇವುಗಳಲ್ಲಿನ ಎರಡು ಮನೆಗಳ ಬೆಲೆಯೇ 83 ಕೋಟಿ ರುಪಾಯಿನಷ್ಟಾಗುತ್ತದೆ ಎಂದು ಅಂದಾಜಿಸಲಾಗಿದೆ. ಇವೆಲ್ಲವನ್ನು 2005ರಿಂದ 2010ರೊಳಗೆ ಅವರು ಖರೀದಿಸಿದ್ದಾರೆಂದು ಆರೋಪಿಸಲಾಗಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications