ನಿರೀಕ್ಷಣಾ ಜಾಮೀನು ರದ್ದು : ರಾಬರ್ಟ್ ವಾದ್ರಾಗೆ ಹೈಕೋರ್ಟ್ ನೋಟೀಸ್
ನವದೆಹಲಿ, ಮೇ 27 : ಸೋನಿಯಾ ಗಾಂಧಿ ಅವರ ಅಳಿಯ, ಪ್ರಿಯಾಂಕಾ ವಾದ್ರಾ ಅವರ ಗಂಡ, ಉದ್ಯಮಿ ರಾಬರ್ಟ್ ವಾದ್ರಾ ಅವರ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸಬೇಕೆಂದು ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ರಾಬರ್ಟ್ ವಾದ್ರಾ ಅವರಿಗೆ ದೆಹಲಿ ಹೈ ಕೋರ್ಟ್ ನೋಟೀಸ್ ಜಾರಿ ಮಾಡಿದೆ.
ಭಾರತ ಸರಕಾರದ ಕಣ್ಣಿಗೆ ಯುನೈಟೆಡ್ ಕಿಂಗಡಂನಲ್ಲಿ ಅಕ್ರಮವಾಗಿ ಆಸ್ತಿಪಾಸ್ತಿ ಮಾಡಿರುವ ರಾಬರ್ಟ್ ವಾದ್ರಾ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಗುರಿಪಡಿಸಿದೆ. ಆದರೆ, ಸಿಬಿಐ ವಿಶೇಷ ನ್ಯಾಯಾಲಯದಿಂದ ರಾಬರ್ಟ್ ವಾದ್ರಾ ಅವರು ನಿರೀಕ್ಷಣಾ ಜಾಮೀನನ್ನು ಪಡೆದುಕೊಂಡಿದ್ದರು.
ಲಂಡನ್ನಿನಲ್ಲಿ ಅಕ್ರಮವಾಗಿ ವಿಲ್ಲಾ, ನಿವೇಶನಗಳನ್ನು ಕೊಂಡಿದ್ದಾರೆಂದು ಅವರ ಮೇಲೆ ಆರೋಪ ಹೊರಿಸಲಾಗಿದೆ. ಅವರ ಜೊತೆ, ರಾಬರ್ಟ್ ವಾದ್ರಾ ಅವರ ಆಪ್ತ ಸಹಾಯಕ ರಾಬರ್ಟ್ ಆರೋರಾ ಅವರಿಗೂ ಕೋರ್ಟ್ ನೋಟೀಸ್ ನೀಡಿದೆ. ಮುಂದಿನ ವಿಚಾರಣೆ ಜುಲೈ 17ರಂದು ಹೈಕೋರ್ಟಿನಲ್ಲಿ ನಡೆಯಲಿದೆ.

ವಿದೇಶಗಳಲ್ಲಿಯೂ ತಮ್ಮ ವಹಿವಾಟುಗಳು ಇರುವುದರಿಂದ ವಿದೇಶಕ್ಕೆ ಪಯಣಿಸಲು ಅನುಮತಿ ಕೋರಿ ರಾಬರ್ಟ್ ವಾದ್ರಾ ಅವರು ಕೆಲ ದಿನಗಳ ಹಿಂದೆ ಅರ್ಜಿ ಸಲ್ಲಿಸಿದ್ದರು. ಅಲ್ಲದೆ, ಭದ್ರತಾ ದೃಷ್ಟಿಯಿಂದ ತಮ್ಮ ಪ್ರವಾಸದ ಯಾವುದೇ ವಿವರಗಳನ್ನು ಬಹಿರಂಗಪಡಿಸಬಾರದು ಎಂದು ರಾಬರ್ಟ್ ವಾದ್ರಾ ಅವರು ಆಗ್ರಹಿಸಿದ್ದಾರೆ.
ಹರ್ಯಾಣದ ಫತೇಹ್ ಭಾಗ್ ನಲ್ಲಿ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದ ನರೇಂದ್ರ ಮೋದಿಯವರು, 'ಶೆಹೆನ್ ಶಾ' ರಾಬರ್ಟ್ ವಾದ್ರಾ ಅವರನ್ನ ರೈತರನ್ನು ಲೂಟಿ ಮಾಡಿದ್ದಕ್ಕಾಗಿ ಅವರನ್ನು ನ್ಯಾಯಾಲಯಕ್ಕೆ ಎಳೆತಂದಿದ್ದಕ್ಕಾಗಿ ಅವರು ನಡುಗುತ್ತಿದ್ದಾರೆ, ಅವರನ್ನು ಶೀಘ್ರದಲ್ಲಿಯೇ ಜೈಲಿಗೆ ಅಟ್ಟಲಾಗುವುದು ಎಂದು ಅಬ್ಬರಿಸಿದ್ದರು.
ಯುಕೆಯಲ್ಲಿ ರಾಬರ್ಟ್ ವಾದ್ರಾ ಅವರು ಹಲವಾರು ಆಸ್ತಿಯನ್ನು ಅನೈತಿಕವಾಗಿ ಕೊಂಡಿದ್ದಾರೆ ಮತ್ತು ಅವುಗಳನ್ನು ಆದಾಯ ತೆರಿಗೆ ಪತ್ರದಲ್ಲಿ ಘೋಷಣೆ ಮಾಡಿಲ್ಲ ಎಂಬ ಆರೋಪ ಅವರ ಮೇಲಿದೆ. ಅಲ್ಲಿ ಮೂರು ವಿಲ್ಲಾಗಳಾಗಿದ್ದು, ಉಳಿದವು ಐಷಾರಾಮಿ ಫ್ಲಾಟ್ ಗಳಾಗಿವೆ. ಇವುಗಳಲ್ಲಿನ ಎರಡು ಮನೆಗಳ ಬೆಲೆಯೇ 83 ಕೋಟಿ ರುಪಾಯಿನಷ್ಟಾಗುತ್ತದೆ ಎಂದು ಅಂದಾಜಿಸಲಾಗಿದೆ. ಇವೆಲ್ಲವನ್ನು 2005ರಿಂದ 2010ರೊಳಗೆ ಅವರು ಖರೀದಿಸಿದ್ದಾರೆಂದು ಆರೋಪಿಸಲಾಗಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications