ಭಾರತದಲ್ಲೇ ಬೇಕಾದಷ್ಟು ರೂಪಾಂತರಗಳಿವೆ, ಬೇರೆ ದೇಶಗಳ ಮಾತೇಕೆ; ದೆಹಲಿ ಹೈಕೋರ್ಟ್
ನವದೆಹಲಿ, ಮೇ 19: ಸಿಂಗಪುರ ಕೊರೊನಾ ರೂಪಾಂತರ ಸೋಂಕು ಭಾರತದಲ್ಲಿ ಮೂರನೇ ಕೊರೊನಾ ಅಲೆಗೆ ಕಾರಣವಾಗಬಹುದು ಎಂದು ಮಂಗಳವಾರ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿಕೆ ನೀಡಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ದೆಹಲಿ ಹೈಕೋರ್ಟ್, ಭಾರತದಲ್ಲೇ ಬೇಕಾದಷ್ಟು ರೂಪಾಂತರ ಕೊರೊನಾ ಮಾದರಿಗಳಿವೆ. ಸಿಂಗಪುರ ಅಥವಾ ಬೇರೆ ಯಾವುದೇ ದೇಶದ ರೂಪಾಂತರದ ಕುರಿತು ಮಾತನಾಡುವ ಅಗತ್ಯವಿಲ್ಲ ಎಂದು ದೆಹಲಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
"ಸಿಂಗಪುರದಲ್ಲಿ ಯಾವುದೇ ರೂಪಾಂತರ ಸೋಂಕು ಇಲ್ಲ ಎಂಬುದು ಸ್ಪಷ್ಟವಾಗಿದೆ. ಭಾರತದಲ್ಲಿ ಮೂರನೇ ಕೊರೊನಾ ಅಲೆ ಕುರಿತು ಬೇರೆ ದೇಶದ ಕುರಿತು ಮಾತನಾಡುವ ಅಗತ್ಯವಿಲ್ಲ. ನಮ್ಮ ದೇಶದಲ್ಲೇ ಸಾಕಷ್ಟು ರೂಪಾಂತರಗಳಿವೆ" ಎಂದು ವಿಪಿನ್ ಸಾಂಗೈ, ಜಸ್ಮೀತ್ ಸಿಂಗ್ ಅವರನ್ನೊಳಗೊಂಡ ಪೀಠವು ಹೇಳಿದೆ.
ಕರ್ತವ್ಯ ಪಾಲನೆ ಕಾರಣದಿಂದಾಗಿ ಕೊರೊನಾ ಸೋಂಕಿಗೆ ತುತ್ತಾಗುವ ಅಪಾಯದಲ್ಲಿರುವ ಅಧೀನ ನ್ಯಾಯಾಂಗ ಅಧಿಕಾರಿಗಳ ಸ್ಥಿತಿ ಕುರಿತ ಮನವಿಯನ್ನು ಆಲಿಸುವ ಸಂದರ್ಭ ಈ ವಿಷಯ ಪ್ರಸ್ತಾಪವಾಗಿದೆ.

ಮಂಗಳವಾರ ಮಾತನಾಡಿದ್ದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಸಿಂಗಪುರದಲ್ಲಿ ಪತ್ತೆಯಾಗಿರುವ ಕೊರೊನಾ ಸೋಂಕಿನ ರೂಪಾಂತರ ಭಾರತದಲ್ಲಿ ಮೂರನೇ ಅಲೆಗೆ ಕಾರಣವಾಗಬಹುದು. ಇದು ಮಕ್ಕಳಿಗೆ ಅತಿ ಅಪಾಯಕಾರಿಯಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಸಿಂಗಪುರ-ಭಾರತದ ನಡುವಿನ ವಿಮಾನ ಯಾನವನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದ್ದರು.
ಕೇಜ್ರಿವಾಲ್ ಅವರ ಈ ಹೇಳಿಕೆಗೆ ಸಿಂಗಪುರದಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿ ಕ್ಷಮೆ ಕೇಳುವಂತೆಯೂ ಆಗ್ರಹಿಸಿದ್ದರು. ಸಿಂಗಪುರ ವಿದೇಶಾಂಗ ಸಚಿವ ವಿವಿಯನ್ ಬಾಲಕೃಷ್ಣನ್ ಅವರು ಕೂಡ ಟ್ವೀಟ್ ಮಾಡಿದ್ದು, "ಸಿಂಗಪುರ ಕೊರೊನಾ ರೂಪಾಂತರ ಸೋಂಕು ಎಂಬುದೇ ಇಲ್ಲ. ರಾಜಕಾರಣಿಗಳು ಸತ್ಯ ಅರಿತು ಮಾತನಾಡಬೇಕು. ಕೇಜ್ರಿವಾಲ್ ಹೇಳಿಕೆಯಿಂದ ಉಂಟಾದ ಗೊಂದಲ ನಿವಾರಿಸಿದ್ದಕ್ಕೆ ಭಾರತೀಯ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಧನ್ಯವಾದ" ಎಂದು ಟ್ವೀಟ್ ಮಾಡಿದ್ದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications