Get Updates
Get notified of breaking news, exclusive insights, and must-see stories!

ದೆಹಲಿಯಲ್ಲಿ ಮಣಿಪುರಿ ಯುವಕನ ಬರ್ಬರ ಹತ್ಯೆ

ನವದೆಹಲಿ, ಜು.21: ದೆಹಲಿಯಲ್ಲಿ ಮತ್ತೊಮ್ಮೆ ಈಶಾನ್ಯ ರಾಜ್ಯ ಮೂಲದವರಿಗೆ ಆತಂಕ ಮೂಡಿದೆ. ಸೋಮವಾರ ಮುಂಜಾನೆ ಮನೆಗೆ ಹಿಂತಿರುಗುತ್ತಿದ್ದ ಮಣಿಪುರ ಮೂಲದ ಬಿಪಿಒ ಉದ್ಯೋಗಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಮಣಿಪುರಿ ಮೂಲದ 30 ವರ್ಷ ವಯಸ್ಸಿನ ಶಾಲೋನಿ ಎಂಬುವರ ಮೇಲೆ ಐದಾರು ಜನ ದುಷ್ಕರ್ಮಿಗಳು ಹಲ್ಲೆ ನಡೆಸಿ ಕೊಂದು ಹಾಕಿ ಕಾರಿನಲ್ಲಿ ಪರಾರಿಯಾಗಿರುವ ಘಟನೆ ಈಶಾನ್ಯ ರಾಜ್ಯದವರನ್ನು ಬೆಚ್ಚಿ ಬೀಳಿಸಿದೆ.

ಕೋಟ್ಲಾ ಮುಬಾರಾಕ್ ಪುರ್ ನಲ್ಲಿರುವ ಮನೆಗೆ ಹಿಂತಿರುಗುತ್ತಿದ್ದ ಶಲೋನಿ ಮೇಲೆ ಹಲ್ಲೆ ನಡೆಯುತ್ತಿರುವ ಬಗ್ಗೆ ದೆಹಲಿ ಪೊಲೀಸರಿಗೆ ತಡರಾತ್ರಿ 2.30 ರ ಸುಮಾರಿಗೆ ಮಾಹಿತಿ ಸಿಕ್ಕಿದೆ. ಪೊಲೀಸರು ಸ್ಥಳಕ್ಕೆ ಧಾವಿಸುವ ವೇಳೆಗೆ ಹಲ್ಲೆಕೋರರು ಶಲೋನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಮಲಗಿದ್ದ ಶಲೋನಿ ಅವರನ್ನು ಏಮ್ಸ್ ಗೆ ಸೇರಿಸಿ ಚಿಕಿತ್ಸೆ ಕೊಡಿಸುವ ಪ್ರಯತ್ನ ವಿಫಲವಾಗಿದೆ. ಆಸ್ಪತ್ರೆಗೆ ಬರುವ ಮೊದಲೇ ಶಲೋನಿ ಸಾವನ್ನಪ್ಪಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.

Manipuri man beaten to death in Delhi

ಇತ್ತೀಚಿಗೆ ಮಾರುಕಟ್ಟೆಯೊಂದರಲ್ಲಿ ಶಲೋನಿ ಹಾಗೂ ಕೆಲವರು ಸ್ಥಳೀಯರೊಡನೆ ವಾಕ್ಸಮರ ನಡೆದಿತ್ತು ಎಂದು ತಿಳಿದು ಬಂದಿದೆ. ಇದೇ ಕಾರಣಕ್ಕೆ ಹಲ್ಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಹಲ್ಲೆಕೋರರ ಗುರುತು ಪತ್ತೆ ಹಚ್ಚಿದ್ದಾರೆ ಎನ್ನಲಾಗಿದೆ.

ನಿಡೋ ತಾನಿಯಾ ದುರಂತದ ನಂತರ ಶಲೋನಿ ಪ್ರಕರಣ ದೆಹಲಿಯಲ್ಲಿರುವ ಈಶಾನ್ಯ ರಾಜ್ಯದ ವಿದ್ಯಾರ್ಥಿಗಳು, ಉದ್ಯೋಗಿಗಳಿಗೆ ಎಚ್ಚರಿಕೆ ಗಂಟೆಯಾಗಿದೆ. ಈಶಾನ್ಯ ರಾಜ್ಯದ ಮೂಲದವ ಎಂಬ ಕಾರಣಕ್ಕೆ ನಿಡೋ ತಾನಿಯಾ ಹತ್ಯೆ ನಡೆದಿತ್ತು.

ಕಾಂಗ್ರೆಸ್ ಶಾಸಕ ನಿಡೋ ಪಲ್ಲವಿ ಅವರ ಪುತ್ರ ನಿಡೋ ತಾನಿಯಾ ಅವರನ್ನು ದೆಹಲಿಯಲ್ಲಿ ಹತ್ಯೆ ಮಾಡಿದ್ದು ವಿದ್ಯಾರ್ಥಿ ಸಂಘಟನೆಗಳನ್ನು ಕೆರಳಿಸಿತ್ತು. ವಿವಿಧ ಸಂಘಟನೆಗಳು, ಪಕ್ಷಾತೀತವಾಗಿ ರಾಜಕಾರಣಿಗಳು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದರು. ಸಿಬಿಐ ತನಿಖೆಗೂ ಆದೇಶಲಾಯಿತು.ಅದರೆ, ಈಶಾನ್ಯ ರಾಜ್ಯದವರ ಆತಂಕ ಇನ್ನೂ ದೂರಾಗಿಲ್ಲ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+