ದೆಹಲಿಯಲ್ಲಿ ಮಣಿಪುರಿ ಯುವಕನ ಬರ್ಬರ ಹತ್ಯೆ
ನವದೆಹಲಿ, ಜು.21: ದೆಹಲಿಯಲ್ಲಿ ಮತ್ತೊಮ್ಮೆ ಈಶಾನ್ಯ ರಾಜ್ಯ ಮೂಲದವರಿಗೆ ಆತಂಕ ಮೂಡಿದೆ. ಸೋಮವಾರ ಮುಂಜಾನೆ ಮನೆಗೆ ಹಿಂತಿರುಗುತ್ತಿದ್ದ ಮಣಿಪುರ ಮೂಲದ ಬಿಪಿಒ ಉದ್ಯೋಗಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಮಣಿಪುರಿ ಮೂಲದ 30 ವರ್ಷ ವಯಸ್ಸಿನ ಶಾಲೋನಿ ಎಂಬುವರ ಮೇಲೆ ಐದಾರು ಜನ ದುಷ್ಕರ್ಮಿಗಳು ಹಲ್ಲೆ ನಡೆಸಿ ಕೊಂದು ಹಾಕಿ ಕಾರಿನಲ್ಲಿ ಪರಾರಿಯಾಗಿರುವ ಘಟನೆ ಈಶಾನ್ಯ ರಾಜ್ಯದವರನ್ನು ಬೆಚ್ಚಿ ಬೀಳಿಸಿದೆ.
ಕೋಟ್ಲಾ ಮುಬಾರಾಕ್ ಪುರ್ ನಲ್ಲಿರುವ ಮನೆಗೆ ಹಿಂತಿರುಗುತ್ತಿದ್ದ ಶಲೋನಿ ಮೇಲೆ ಹಲ್ಲೆ ನಡೆಯುತ್ತಿರುವ ಬಗ್ಗೆ ದೆಹಲಿ ಪೊಲೀಸರಿಗೆ ತಡರಾತ್ರಿ 2.30 ರ ಸುಮಾರಿಗೆ ಮಾಹಿತಿ ಸಿಕ್ಕಿದೆ. ಪೊಲೀಸರು ಸ್ಥಳಕ್ಕೆ ಧಾವಿಸುವ ವೇಳೆಗೆ ಹಲ್ಲೆಕೋರರು ಶಲೋನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಮಲಗಿದ್ದ ಶಲೋನಿ ಅವರನ್ನು ಏಮ್ಸ್ ಗೆ ಸೇರಿಸಿ ಚಿಕಿತ್ಸೆ ಕೊಡಿಸುವ ಪ್ರಯತ್ನ ವಿಫಲವಾಗಿದೆ. ಆಸ್ಪತ್ರೆಗೆ ಬರುವ ಮೊದಲೇ ಶಲೋನಿ ಸಾವನ್ನಪ್ಪಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.

ಇತ್ತೀಚಿಗೆ ಮಾರುಕಟ್ಟೆಯೊಂದರಲ್ಲಿ ಶಲೋನಿ ಹಾಗೂ ಕೆಲವರು ಸ್ಥಳೀಯರೊಡನೆ ವಾಕ್ಸಮರ ನಡೆದಿತ್ತು ಎಂದು ತಿಳಿದು ಬಂದಿದೆ. ಇದೇ ಕಾರಣಕ್ಕೆ ಹಲ್ಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಹಲ್ಲೆಕೋರರ ಗುರುತು ಪತ್ತೆ ಹಚ್ಚಿದ್ದಾರೆ ಎನ್ನಲಾಗಿದೆ.
ನಿಡೋ ತಾನಿಯಾ ದುರಂತದ ನಂತರ ಶಲೋನಿ ಪ್ರಕರಣ ದೆಹಲಿಯಲ್ಲಿರುವ ಈಶಾನ್ಯ ರಾಜ್ಯದ ವಿದ್ಯಾರ್ಥಿಗಳು, ಉದ್ಯೋಗಿಗಳಿಗೆ ಎಚ್ಚರಿಕೆ ಗಂಟೆಯಾಗಿದೆ. ಈಶಾನ್ಯ ರಾಜ್ಯದ ಮೂಲದವ ಎಂಬ ಕಾರಣಕ್ಕೆ ನಿಡೋ ತಾನಿಯಾ ಹತ್ಯೆ ನಡೆದಿತ್ತು.
Cops are saying 5-6 men near a convenience store got into a quarrel with the Manipuri man. He was taken to AIIMS, where he was declared dead
— Delhi Connect (@DelhiConnect) July 21, 2014 ಕಾಂಗ್ರೆಸ್ ಶಾಸಕ ನಿಡೋ ಪಲ್ಲವಿ ಅವರ ಪುತ್ರ ನಿಡೋ ತಾನಿಯಾ ಅವರನ್ನು ದೆಹಲಿಯಲ್ಲಿ ಹತ್ಯೆ ಮಾಡಿದ್ದು ವಿದ್ಯಾರ್ಥಿ ಸಂಘಟನೆಗಳನ್ನು ಕೆರಳಿಸಿತ್ತು. ವಿವಿಧ ಸಂಘಟನೆಗಳು, ಪಕ್ಷಾತೀತವಾಗಿ ರಾಜಕಾರಣಿಗಳು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದರು. ಸಿಬಿಐ ತನಿಖೆಗೂ ಆದೇಶಲಾಯಿತು.ಅದರೆ, ಈಶಾನ್ಯ ರಾಜ್ಯದವರ ಆತಂಕ ಇನ್ನೂ ದೂರಾಗಿಲ್ಲ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications