ದೆಹಲಿ: ಆಸ್ಪತ್ರೆಯ 5ನೇ ಮಹಡಿಯಿಂದ ಹಾರಿ ಸಿಬ್ಬಂದಿಯೋರ್ವ ಆತ್ಮಹತ್ಯೆ
ನವದೆಹಲಿ, ಫೆಬ್ರವರಿ 06: ದೆಹಲಿಯ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ, ತಾನು ಕೆಲಸ ಮಾಡುತ್ತಿದ್ದ ಆಸ್ಪತ್ರೆಯ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಆಡಿಕೊಂಡ ಘಟನೆ ಫೆ.5 ರಂದು ದೆಹಲಿಯ ಶ್ರೀ ಗಂಗಾ ರಾಮ್ ಆಸ್ಪತ್ರೆಯಲ್ಲಿ ನಡೆದಿದೆ.
ಇಂದರ್ ಸಿಂಗ್(48) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆಸ್ಪತ್ರೆಯಲ್ಲಿ ಮೇಲಧಿಕಾರಿಗಳ ಕಿರುಕುಳವೇ ಕಾರಣವಿದ್ದಿರಬಹುದು ಎಂದು ಶಂಕಿಸಲಾಗಿದೆ. ಇದುವರೆಗೂ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ.

ಈತ ಮಾನಸಿಕವಾಗಿ ತೀರಾ ಒತ್ತಡ ಅನುಭವಿಸುತ್ತಿದ್ದ ಎಂದು ತಿಳಿದುಬಂದಿದ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.












Click it and Unblock the Notifications