ಚಿತೆಯಿಂದೆದ್ದ ಮಗು! ಇದು ಪವಾಡವಲ್ಲ, ವೈದ್ಯರ ಬೇಜವಾಬ್ದಾರಿ!
ನವದೆಹಲಿ, ಡಿಸೆಂಬರ್ 02: ಬದುಕಿದ್ದ ಮಗುವನ್ನು ಸತ್ತಿದೆ ಎಂದು ಘೋಷಿಸಿ, ಅಂತ್ಯಸಂಸ್ಕಾರದ ಸಮಯದಲ್ಲಿ ಇದ್ದಕ್ಕಿದ್ದಂತೆ ಮಗು ಚಲನವಲನ ಆರಂಭಿಸಿದ ವಿಚಿತ್ರ ಘಟನೆ ದೆಹಲಿಯ ಶಾಲಿಮರ್ ಬಾಗ್ ನಲ್ಲಿ ನಡೆದಿದೆ.
ಇದೇನು ಪವಾಡವಾ ಅಂದ್ರೆ ಖಂಡಿತ ಅಲ್ಲ, ಬೇಜವಾಬ್ದಾರಿ ವೈದ್ಯರು ಮಾಡಿದ ಅಚಾತುರ್ಯ ಇದು! ನವೆಂಬರ್ 30 ರಂದು 20 ವರ್ಷದ ವರ್ಷ ಎಂಬ ಮಹಿಳೆ ದೆಹಲಿಯ ಶಾಲಿಮರ್ ಬಾಗ್ ನಲ್ಲಿರುವ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು.

ಹುಟ್ಟಿದ ಕೆಲವೇ ಗಂಟೆಗಳಲ್ಲಿ ಹೆಣ್ಣು ಮತ್ತು ಗಂಡು ಇಬ್ಬರೂ ಮಕ್ಕಳು ಮೃತರಾಗಿದ್ದಾರೆಂದು ಘೋಷಿಸಿ, ಮಕ್ಕಳನ್ನು ಪ್ಲಾಸ್ಟಿಕ್ ನಲ್ಲಿ ಸುತ್ತಿ ಕುಟುಂಬಕ್ಕೆ ಕೈಗೊಪ್ಪಿಸಿದರು. ದುಃಖತಪ್ತರಾದ ಕುಟುಂಬದ ಜನರು ಮಕ್ಕಳ ಅಂತ್ಯಸಂಸ್ಕಾರ ಮಾಡುವುದಕ್ಕೆಂದು ತೆರಳಿದ್ದಾಗ, ಬಂಧುಗಳೊಬ್ಬರ ತೊಡೆ ಮೇಲಿದ್ದ ಗಂಡು ಮಗು ಇದ್ದಕ್ಕಿದ್ದಂತೇ ಕೈಕಾಲು ಆಡಿಸುವುದಕ್ಕೆ ಶುರುಮಾಡಿತ್ತು. ಉಸಿರಾಡುತ್ತಿರುವುದೂ ಗಮನಕ್ಕೆ ಬಂತು. ಇದರಿಂದ ದಿಗ್ಭ್ರಮೆಗೊಂಡ ಕುಟುಂಬಸ್ತರು ಮಗುವಿನ ದೇಹಕ್ಕೆ ಸುತ್ತಿದ್ದ ಪ್ಲಾಸ್ಟಿಕ್ ಅನ್ನು ತೆಗೆದು ಹತ್ತಿರದ ಆಸ್ಪತ್ರೆಗೆ ತೆರಳಿದಾಗ ಮಗು ಬದುಕಿದೆ ಎಂಬುದು ತಿಳಿದಿದೆ. ಸದ್ಯಕ್ಕೆ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೇಜವಾಬ್ದಾರಿ ವರ್ತನೆಗಾಗಿ ಮ್ಯಾಕ್ಸ್ ಆಸ್ಪತ್ರೆಯ ಮೇಲೆ ದೂರು ದಾಖಲಿಸಲಾಗಿದ್ದು, ಆಸ್ಪತ್ರೆಯ ಬೇಜವಾಬ್ದಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಆರೋಗ್ಯ ಮಂತ್ರಿ ಪ್ರಕಾಶ್ ಜಾವ್ಡೇಕರ್, ದೆಹಲಿ ಸರ್ಕಾರಕ್ಕೆ ಸೂಚಿಸಿದ್ದಾರೆ.(ಸಾಂದರ್ಭಿಕ ಚಿತ್ರ)
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications