ದೆಹಲಿಯಲ್ಲಿ ಭೂಮಿ ಕಂಪಿಸಿದ ಅನುಭವಕ್ಕೆ ಕಾರಣವಾದ ಇದೊಂದು ಘಟನೆ!
ನವದೆಹಲಿ, ಮೇ 11: ಮಂಗಳವಾರ ರಾತ್ರಿ ದೆಹಲಿ-ಮೀರತ್ ಕಾರಿಡಾರ್ನ 50 ಟನ್ ಸಿಮೆಂಟೆಡ್ ವಿಭಾಗವು ಕ್ರೇನ್ ತಂತಿ ತುಂಡಾಗಿ ರಸ್ತೆಯ ಮೇಲೆ ಬಿದ್ದಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ. ಈ ಘಟನೆಯಿಂದ ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಪ್ರಾಥಮಿಕ ವರದಿಯ ಪ್ರಕಾರ ದೆಹಲಿ ಅಗ್ನಿಶಾಮಕ ದಳ ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ. ದೆಹಲಿ-ಮೀರತ್ ಕಾರಿಡಾರ್ನ 50 ಟನ್ ಸಿಮೆಂಟೆಡ್ ವಿಭಾಗದ ಹಠಾತ್ ಕುಸಿತದಿಂದ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ.
50 ಟನ್ ತೂಕದ ಭಾರೀ ಸಿಮೆಂಟೆಡ್ ವಿಭಾಗದ ಹಠಾತ್ ಕುಸಿತದಿಂದ ಸ್ಥಳದಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ಸ್ಥಳೀಯರು ಕೂಡ ಭೂಕಂಪನ ಸಂಭವಿಸುತ್ತಿದೆಯೇ? ಎಂದು ಭಾವಿಸಿದ್ದರು. ಆದರೆ ತದನಂತರದಲ್ಲಿ ಈ ಸಿಮೆಂಟೆಡ್ ವಿಭಾಗದ ಕುಸಿತದಿಂದ ಭೂಮಿ ಕಂಪಿಸಿದಂತಾಗಿದೆ ಎಂಬುದು ತಿಳಿದು ಬಂದಿದೆ.

ಅದೃಷ್ಟವಶಾತ್ ಪ್ರಾಣಹಾನಿ ಸಂಭವಿಸಿಲ್ಲ: ದೆಹಲಿ-ಮೀರತ್ ಕಾರಿಡಾರ್ನ 50 ಟನ್ ಸಿಮೆಂಟೆಡ್ ವಿಭಾಗವು ಗೊತ್ತುಪಡಿಸಿದ ಮೀಸಲು ಪ್ರದೇಶದೊಳಗೆ ಬಿದ್ದಿದ್ದರಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಎರಡು ಸೇತುವೆಗಳನ್ನು ಸಂಪರ್ಕಿಸಲು ಈ ವಿಭಾಗವನ್ನು ನಿರ್ಮಿಸಲಾಗಿತ್ತು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications