ಜೀವ ಬೆದರಿಕೆ ಕರೆ: ಸಂಸದ ಗಂಭೀರ್ ಮನೆಗೆ ಬಿಗಿ ಭದ್ರತೆ
ನವದೆಹಲಿ, ನವೆಂಬರ್ 24: ''ತಮಗೆ ಎರಡನೇ ಬಾರಿ ಜೀವ ಬೆದರಿಕೆ ಕರೆ ಬಂದಿದ್ದು, ಸೂಕ್ತ ಭದ್ರತೆ ಒದಗಿಸಿ,'' ಎಂದು ಮಾಜಿ ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ ಪೊಲೀಸರಿಗೆ ಮನವಿ ಮಾಡಿದ್ದಾರೆ. ಇದಾದ ಬಳಿಕ ದೆಹಲಿ ಸಂಸದ ಗಂಭೀರ್ ಮನೆಗೆ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ.
'ನನಗೆ ಹಾಗೂ ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇಮೇಲ್ ಬರುತ್ತಿವೆ. ಈ ವಿಷಯ ಸಂಬಂಧ ಎಫ್ಐಆರ್ ದಾಖಲಿಸಿ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಿ' ಎಂದು ಅವರು ಪೊಲೀಸರಿಗೆ ಮನವಿ ಮಾಡಿದ್ದಾರೆ. 2018ರಲ್ಲೂ ಗಂಭೀರ್ ಅವರಿಗೆ ಜೀವ ಬೆದರಿಕೆ ಕರೆಗಳು ಬಂದಿತ್ತು. ಅಂತಾರಾಷ್ಟ್ರೀಯ ದೂರವಾಣಿ ಸಂಖ್ಯೆಯೊಂದರಿಂದ ಜೀವ ಬೆದರಿಕೆ ಕರೆ ಮಾಡಲಾಗಿತ್ತು.
ಈ ಬಾರಿ ಎರಡು ಬಾರಿ ಐಎಸ್ಐಎಸ್ ಕಾಶ್ಮೀರ್ ಎಂಬ ಹೆಸರಿನಿಂದ ಬೆದರಿಕೆ ಇಮೇಲ್ ಬಂದಿದೆ. ''ನಾವು ನಿನ್ನನ್ನು ಕೊಲ್ಲಲು ಬಯಸಿದ್ದೇವೆ, ನಿನ್ನೆ ಬಚಾವಾಗಿದ್ದೀಯ.'' ಎಂದು ಇಮೇಲ್ ನಲ್ಲಿ ಬರೆಯಲಾಗಿದೆ. ವಿಡಿಯೋ ಫುಟೇಜ್ ಕೂಡಾ ಲಗತ್ತಿಸಲಾಗಿದೆ. ಗಂಭೀರ್ ಮನೆ ಎದುರಿಗೆ ತೆಗೆಯಲಾದ ವಿಡಿಯೋ ಫುಟೇಜ್ ಕೂಡಾ ಅಟ್ಯಾಚ್ ಆಗಿರುವುದು ಪರಿಸ್ಥಿತಿಯ ಗಂಭೀರತೆಯನ್ನು ಇನ್ನಷ್ಟು ಹೆಚ್ಚಿಸಿದೆ.

ಮೊದಲ ಬಾರಿಗೆ ಜೀವ ಬೆದರಿಕೆ ಇಮೇಲ್ ಬರುತ್ತಿದ್ದಂತೆ ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ (ಕೇಂದ್ರ ವಿಭಾಗ) ಅವರಿಗೆ ಗಂಭೀರ್ ದೂರು ನೀಡಿದ್ದರು. ಮಂಗಳವಾರ ರಾರಿ 9.32ರ ವೇಳೆಗೆ ಗಂಭೀರ್ ಅವರ ಅಧಿಕೃತ ಇಮೇಲ್ ಐಡಿಗೆ ಬೆದರಿಕೆ ಪತ್ರ ಬಂದಿದ್ದು, "ISIS Kashmir" ಎಂದು ಸಹಿ ಹಾಕಲಾಗಿದೆ.
ಪತ್ರದಲ್ಲಿ ಏನಿದೆ?: ನಾವು ನಿನ್ನನ್ನು ನಿನ್ನ ಕುಟುಂಬವನ್ನು ಕೊಲ್ಲುತ್ತೇವೆ. ನಿನ್ನ ಮೇಲೆ ನಿರಂತರವಾಗಿ ನಿಗಾ ಇಟ್ಟಿದ್ದೇವೆ ಎಂದು ಬರೆಯಲಾಗಿದೆ. ಪತ್ರ "ISIS Kashmir" ಎಂಬುವವರಿಂದ ಬಂದಿದೆಯಾದರೂ ಪತ್ರ ಕಳಿಸಿದವರು ಯಾರು ಎಂಬುದನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಗುಪ್ತಚರ ಇಲಾಖೆ ವಿಶೇಷ ವಿಭಾಗದ ಸಿಬ್ಬಂದಿಗಳು ಪತ್ರದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಗೂಗಲ್ ಸಂಸ್ಥೆಗೆ ಮನವಿ ಸಲ್ಲಿಸಿದ್ದಾರೆ. ಇಮೇಲ್ ಕಳಿಸಿದವರು ಯಾರು? ಐಪಿ ಲೊಕೇಷನ್ ಎಲ್ಲಿದೆ? ಯಾವ ಸಾಧನದಿಂದ ಕಳಿಸಲಾಗಿದೆ? ಎಂಬುದರ ಬಗ್ಗೆ ಮಾಹಿತಿ ಕೋರಲಾಗಿದೆ ಎಂದು ಹಿರಿಯ ಅಧಿಕಾರಿಗಳು ಹೇಳಿದರು.
ಗಂಭೀರ್ ಅವರ ಖಾಸಗಿ ಕಾರ್ಯದರ್ಶಿ ಗೌರವ್ ಅರೋರಾ ಅವರು ಎರಡನೇ ಬಾರಿ ಇಮೇಲ್ ಬಂದ ತಕ್ಷಣ ಪೊಲೀಸರಿಗೆ ತಿಳಿಸಿದ್ದಾರೆ. ರಾಜೇಂದ್ರ ನಗರ ಠಾಣೆಯಲ್ಲಿ ಬುಧವಾರದಂದು ದೂರು ದಾಖಲಿಸಿದ್ದಾರೆ.
ಅನಾಮಿಕ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿಕೊಂಡಿರುವ ಪೊಲೀಸರು, ರಾಜೇಂದ್ರ ನಗರದಲ್ಲಿರುವ ಗಂಭೀರ್ ಮನೆಗೆ ಭದ್ರತೆ ಒದಗಿಸಿದ್ದಾರೆ. ಇಮೇಲ್ ಕಳಿಸಿದವರ ಪತ್ತೆಗಾಗಿ ಸೈಬರ್ ಸೆಲ್ ನೆರವು ಪಡೆದುಕೊಳ್ಳುತ್ತಿದ್ದಾರೆ. ಸದ್ಯಕ್ಕೆ ಎಫ್ಐಆರ್ ದಾಖಲಿಸಿಲ್ಲ, ತನಿಖೆ ಜಾರಿಯಲ್ಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications