ತಿಹಾರ್ ಜೈಲಲ್ಲಿ 4 ಗೊಂಬೆಗಳಿಗೆ ಗಲ್ಲುಶಿಕ್ಷೆ ವಿಧಿಸಿದ್ಯಾಕೆ ಗೊತ್ತೆ?
ನವದೆಹಲಿ, ಜನವರಿ.31: ನಿರ್ಭಯಾ ಅತ್ಯಾಚಾರ ಕೊಲೆ ಪ್ರಕರಣದ ದೋಷಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಇನ್ನೊಂದು ದಿನವಷ್ಟೇ ಬಾಕಿ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ರಾತ್ರಿ ಕಳೆದು ಬೆಳಕು ಮೂಡಿದರೆ ನಾಲ್ವರು ಅಪರಾಧಿಗಳಿಗೆ ದೆಹಲಿಯ ತಿಹಾರ್ ಜೈಲಿನಲ್ಲಿ ಗಲ್ಲುಶಿಕ್ಷೆ ಜಾರಿಯಾಗಬೇಕು.
ದೋಶಿಗಳಾದ ಮುಕೇಶ್ (32), ಪವನ್ ಗುಪ್ತಾ (25), ವಿನಯ್ ಕುಮಾರ್ ಶರ್ಮಾ (26), ಅಕ್ಷಯ್ ಕುಮಾರ್ ಸಿಂಗ್ (31) ಈ ನಾಲ್ವರು ಅಪರಾಧಿಗಳಿಗೆ ಫೆಬ್ರವರಿ.01ರಂದು ಬೆಳಗ್ಗೆ ಗಲ್ಲುಶಿಕ್ಷೆ ವಿಧಿಸಬೇಕು.
ದೋಷಿಗಳಿಗೆ ಗಲ್ಲುಶಿಕ್ಷೆ ವಿಧಿಸುವ ಮುನ್ನ ದಿನವಾದ ಶುಕ್ರವಾರ ದೆಹಲಿಯ ತಿಹಾರ್ ಜೈಲಿನಲ್ಲಿ ಪ್ರಾಯೋಗಿಕವಾಗಿ ಗಲ್ಲುಶಿಕ್ಷೆಯನ್ನು ಜಾರಿಗೊಳಿಸಲಾಯಿತು. ನಾಲ್ಕು ಗೊಂಬೆಗಳನ್ನು ಬಳಸಿಕೊಂಡು ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲಾಯಿತು.

ತಿಹಾರ್ ಜೈಲಿನಲ್ಲಿ ಗೊಂಬೆಗಳಿಗೆ ಮರಣದಂಡನೆ
ಶುಕ್ರವಾರ ಬೆಳಗ್ಗೆ ಅವಶೇಷಗಳು ಹಾಗೂ ಕಲ್ಲನ್ನು ತುಂಬಿದ ನಾಲ್ಕೂ ಗೊಂಬೆಗಳನ್ನು ನೇಣುಗಂಬಕ್ಕೆ ಏರಿಸಲಾಯಿತು. ಇದಕ್ಕೂ ಮೊದಲು ನಾಲ್ವರು ಅಪರಾಧಿಗಳ ತೂಕವನ್ನು ದಾಖಲಿಸಿಕೊಂಡು, ಅಷ್ಟೇ ತೂಕದ ಕಲ್ಲುಗಳನ್ನು ಗೊಂಬೆಗಳಲ್ಲಿ ತುಂಬಲಾಗಿತ್ತು. ಪ್ರಾಯೋಗಿಕವಾಗಿ ನಡೆದ ಗಲ್ಲುಶಿಕ್ಷೆ ವಿಧಿಸುವ ಸಮಯದಲ್ಲಿ ಜೈಲಿನ ಅಧಿಕಾರಿಗಳು ಉಪಸ್ಥಿತರಿದ್ದರು.

ತಿಹಾರ್ ಜೈಲಿಗೆ ತೆರಳಿರುವ ಹ್ಯಾಂಗ್ ಮ್ಯಾನ್ ಪವನ್
ದೆಹಲಿಯ ತಿಹಾರ್ ಜೈಲು ಅಧಿಕಾರಿಗಳು ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸುವ ಹ್ಯಾಂಗ್ ಮ್ಯಾನ್ ಪವನ್ ಜಲ್ಲಾದ್ ಗೆ ಬುಲಾವ್ ನೀಡಿದ್ದಾರೆ. ಈಗಾಗಲೇ ತಿಹಾರ್ ಜೈಲು ತಲುಪಿರುವ ಹ್ಯಾಂಗ್ ಮ್ಯಾನ್, ಶನಿವಾರವೇ ನಾಲ್ವರು ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸುವ ಸಾಧ್ಯತೆಯಿದೆ.

"ನಿರ್ಭಯಾ ನೀಚರ ಗಲ್ಲುಶಿಕ್ಷೆಯನ್ನು ದೇಶವೇ ಎದುರು ನೋಡುತ್ತಿದೆ"
ಇನ್ನು, ತಿಹಾರ್ ಜೈಲು ತಲುಪಿರುವ ಹ್ಯಾಂಗ್ ಮ್ಯಾನ್ ಪವನ್ ಜಲ್ಲಾದ್, ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸುವುದಕ್ಕೆ ತುಂಬಾ ಸಂತೋಷವಾಗುತ್ತಿದೆ. ನಾಲ್ವರು ದೋಷಿಗಳಿಗೆ ಗಲ್ಲುಶಿಕ್ಷೆ ವಿಧಿಸುವುದನ್ನು ನಿರ್ಭಯಾ ಪೋಷಕರು ಸೇರಿದಂತೆ ಇಡೀ ದೇಶವೇ ಎದುರು ನೋಡುತ್ತಿದೆ ಎಂದು ಪವನ್ ಜಲ್ಲಾದ್ ತಿಳಿಸಿದರು.

ಸಾಲು ಸಾಲು ಅರ್ಜಿ ಸಲ್ಲಿಸುತ್ತಿರುವ ಅಪರಾಧಿಗಳು
ನಾಲ್ವರು ಅಪರಾಧಿಗಳ ಪೈಕಿ ಒಬ್ಬೊಬ್ಬರೇ ಸುಪ್ರೀಂಕೋರ್ಟ್ ಮತ್ತು ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸುತ್ತಿದ್ದಾರೆ. ಫೆಬ್ರವರಿ.01ರಂದು ಗಲ್ಲುಶಿಕ್ಷೆಗೆ ತಡೆ ನೀಡಬೇಕೆಂದು ಗುರುವಾರ ಅಪರಾಧಿ ಅಕ್ಷಯ್ ಸಿಂಗ್ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾನೆ. ಮತ್ತೊಬ್ಬ ಅಪರಾಧಿ ವಿನಯ್ ಶರ್ಮಾ ಗಲ್ಲುಶಿಕ್ಷೆಯಿಂದ ಕ್ಷಮಾದಾನ ನೀಡುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಬುಧವಾರ ಮನವಿ ಮಾಡಿಕೊಂಡಿದ್ದಾನೆ. ಈ ಹಿಂದೆ ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದರು. ರಾಷ್ಟ್ರಪತಿಗಳ ನಿರ್ಧಾರವನ್ನು ಪ್ರಶ್ನಿಸಿ ಮುಕೇಶ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಬುಧವಾರವೇ ಸುಪ್ರೀಂಕೋರ್ಟ್ ಕೂಡಾ ತಿರಸ್ಕರಿಸಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications