ದೆಹಲಿ ಸಿಎಂ ಸೇರಿ 21 ಶಾಸಕರ ವಿರುದ್ಧ ಚಾರ್ಜ್ ಶೀಟ್?
ನವದೆಹಲಿ, ಜೂ.17: ಆಮ್ ಅದ್ಮಿ ಪಕ್ಷಕ್ಕೆ ಯಾಕೋ ಟೈಂ ಚೆನ್ನಾಗಿಲ್ಲ. ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮಾರ್ ನಕಲಿ ಪದವಿ ಪ್ರಮಾಣ ಪತ್ರ ವಿವಾದ, ಸೋಮನಾಥ್ ಭಾರ್ತಿ ಫ್ಯಾಮಿಲಿ ಪ್ರಾಬ್ಲಂ, ಗವರ್ನರ್ ಜೊತೆ ಸಿಎಂ ತಿಕ್ಕಾಟ ಕಣ್ಮುಂದೆ ಇರುವಾಗಲೇ ಮತ್ತೊಂದು ಸಮಸ್ಯೆ ಎದುರಾಗಿದೆ.
ಅರವಿಂದ್ ಕೇಜ್ರಿವಾಲ್ ಸೇರಿದಂತೆ 21 ಆಪ್ ಶಾಸಕರ ವಿರುದ್ಧ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಹಾಕಲು ದೆಹಲಿ ಪೊಲೀಸರು ಸಜ್ಜಾಗಿದ್ದಾರೆ. [ಪತಿ ಸೋಮನಾಥ್ ಕಿರುಕುಳದ ಕಥೆ ಬಿಚ್ಚಿಟ್ಟ ಲಿಪಿಕಾ]

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ರಾಜಕೀಯ ಸಂಬಂಧ 6 ಪ್ರಕರಣಗಳು ಸೇರಿದಂತೆ 25ಕ್ಕೂ ಅಧಿಕ ಕ್ರಿಮಿನಲ್ ಕೇಸುಗಳು ಬಾಕಿ ಉಳಿದಿವೆ. ನಕಲಿ ಪದವಿ, ಕೌಟುಂಬಿಕ ದೌರ್ಜನ್ಯ ಪ್ರಕರಣಗಳ ನಂತರ ನಕಲಿ ಮದ್ಯ ಸಂಗ್ರಹದಲ್ಲೂ ಎಎಪಿ ಮುಖಂಡರ ಹೆಸರು ತಗುಲಿ ಹಾಕಿಕೊಂಡಿದೆ.
ಅಕ್ರಮ ಮದ್ಯ ಸಂಗ್ರಹ ಆರೋಪ ಹೊತ್ತಿರುವ ನರೇಶ್ ಬಲಿಯನ್, ಸಾರ್ವಜನಿಕ ಗಲಭೆಯಲ್ಲಿ ಭಾಗಿಯಾಗಿದ್ದ ಆರೋಪ ದೆಹಲಿ ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಅವರ ಮೇಲಿದೆ.
AAP should stop blaming BJP & answer why 21 AAP MLAs have criminal record for which they are being chargesheeted: Siddharth Nath Singh,BJP
— ANI (@ANI_news) June 17, 2015 ದೆಹಲಿ ಪೊಲೀಸರ ಚಾರ್ಜ್ ಶೀಟ್ ಬಗ್ಗೆ ಆಪ್ ಮುಖಂಡ ಅಶುತೋಷ್ ಪ್ರತಿಕ್ರಿಯಿಸಿ. ಲಲಿತ್ ಮೋದಿಗೆ ಸಹಾಯ ಮಾಡಿ, ವಿವಾದಕ್ಕೀಡಾಗಿರುವ ಸುಷ್ಮಾ ಸ್ವರಾಜ್ ಪ್ರಕರಣದಿಂದ ದೇಶದ ಜನತೆಯ ಗಮನವನ್ನು ಬೇರೆಡೆ ಹರಿಸಲು ಬಿಜೆಪಿ ಈ ಕುತಂತ್ರ ಅನುಸರಿಸುತ್ತಿದೆ ಎಂದಿದ್ದಾರೆ. ದೆಹಲಿ ಪೊಲೀಸರು ಕೂಡಾ ರಾಜಕೀಯ ತಂತ್ರದ ದಾಳವಾಗಿ ಆಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications