ರಾಹುಲ್ ಗಾಂಧಿಗಾಗಿ ಹುಡುಕಾಟ, ಕೈಪಡೆ ಕಂಗಾಲು
ನವದೆಹಲಿ, ಮಾ. 14: ದೆಹಲಿ ಪೊಲೀಸರು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ಗಾಂಧಿ ಅವರ ದೈಹಿಕ ಲಕ್ಷಣಗಳ ಬಗ್ಗೆ ಮಾಹಿತಿ ಕಲೆ ಹಾಕಿದ ಸುದ್ದಿ ಕಾಂಗ್ರೆಸ್ ನಾಯಕರಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ರಾಹುಲ್ ಗಾಂಧಿ ಹೋಲುವ ವ್ಯಕ್ತಿ ಹುಡುಕಾಟ ನಡೆಯುತ್ತಿದೆ ಎಂದು ಹೇಳಲಾಗಿದ್ದರೂ ಕಾಂಗ್ರೆಸ್ ನಾಯಕರು ಕೆಂಡಾಮಂಡಲವಾಗಿದ್ದಾರೆ.
ಈ ಘಟನೆಯಿಂದ ತೀವ್ರ ಆಕ್ರೋಶಗೊಂಡಿರುವ ಕಾಂಗ್ರೆಸ್ ನಾಯಕರು, ದೆಹಲಿ ಪೊಲೀಸರನ್ನು ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗಿದ್ದಾರೆ.ಕಳೆದ ವಾರ ಪೊಲೀಸರು ರಾಹುಲ್ ಕಛೇರಿಗೆ ದಿಢೀರ್ ಭೇಟಿ ನೀಡಿದ್ದರು ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಈ ಸಂದರ್ಭದಲ್ಲಿ ಪೊಲೀಸರು, ರಾಹುಲ್ ಗಾಂಧಿ ಕಣ್ಣುಗಳು ಹಾಗೂ ಕೂದಲಿನ ಬಣ್ಣ ಮುಂತಾದ ದೈಹಿಕ ಲಕ್ಷಣಗಳ ಬಗ್ಗೆ ವಿಚಾರಿಸಿದ್ದಾರೆ. ರಾಹುಲ್ ಗಾಂಧಿ ನೋಡುವುದಕ್ಕೆ ಹೇಗಿದ್ದರು, ದಿನಂಪ್ರತಿ ಅವರು ಯಾವ ಯಾವ ಬಟ್ಟೆಗಳನ್ನು ಧರಿಸುತ್ತಿದ್ದರು, ಹಾಕುವ ಚಪ್ಪಲಿ, ಮುಖಚರ್ಯೆ, ಯಾರ ಜೊತೆ ಹೆಚ್ಚು ಒಡನಾಡಿಯಾಗಿದ್ದರು, ಎಲ್ಲಿ ತಂಗುತ್ತಿದ್ದರು, ಅವರ ದಿನಚರಿಗಳು ಹೇಗಿರುತ್ತವೆ ಎಂಬುದು ಸೇರಿದಂತೆ ಕಚೇರಿ ಸಿಬ್ಬಂದಿಗೆ ಪೊಲೀಸರು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ ಇದರ ಹಿಂದೆ ಒಳಸಂಚು ಏನಾದರೂ ಇದೆಯೇ ಎಂಬ ಬಗ್ಗೆ ದಿಗಿಲುಗೊಂಡಿದ್ದಾರೆ.

ರಾಹುಲ್ಗಾಂಧಿ ಅವರ ಬಗ್ಗೆ ಮಾಹಿತಿ ಏಕೆ?: ರಾಹುಲ್ ಗಾಂಧಿ ಎಂದು ಗೂಗಲ್ ನಲ್ಲಿ ಟೈಪಿಸಿದರೆ ಅವರ ಭಾವಚಿತ್ರ ಅಥವಾ ದೈಹಿಕ ಲಕ್ಷಣಗಳ ಸಾಕಷ್ಟು ಮಾಹಿತಿ ಸಿಗುತ್ತದೆ. ಲೋಕಸಭಾ ಸದಸ್ಯರ ವಿವರ ವೆಬ್ ಸೈಟ್ ನಲ್ಲಿ ಅಪ್ ಲೋಡ್ ಆಗಿದೆ. ಅವರ ಬಗ್ಗೆ ಸಂಸತ್ತಿನಲ್ಲೇ ಎಲ್ಲಾ ದಾಖಲೆಗಳೂ ದೊರಕುತ್ತದೆ. ಹೀಗಿದರೂ ರಾಹುಲ್ ಗಾಂಧಿ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿದ್ದೇಕೆ ಎಂಬ ಪ್ರಶ್ನೆ ಕಾಡುತ್ತಿದೆ.
ರಾಹುಲ್ ಗಾಂಧಿ ಕಚೇರಿಗೆ ಏಕೆ ಭೇಟಿ ನೀಡಿದ್ದಾರೆ ಎಂಬ ಗುಟ್ಟನ್ನು ಪೊಲೀಸರು ಈವರೆಗೂ ರಟ್ಟು ಮಾಡಿಲ್ಲ. ಇದು ಖಾಸಗಿಯಾಗಿದ್ದು, ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.ದೆಹಲಿ ಪೊಲೀಸ್ ಆಯುಕ್ತರ ಕಛೇರಿ ಮುಂದೆ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಾಯಕರು ಚಿಂತನೆ ಮಾಡುತ್ತಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications