ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ ಕಿರಣ್ ಬೇಡಿ

By Mahesh
|
Google Oneindia Kannada News

ನವದೆಹಲಿ, ಜ.15: ಮಾಜಿ ಐಪಿಎಸ್ ಅಧಿಕಾರಿ, ಭ್ರಷ್ಟಾಚಾರ ವಿರೋಧ ಹೋರಾಟಗಾರ್ತಿ, ಸಾಮಾಜಿಕ ಕಾರ್ಯಕರ್ತೆ ಕಿರಣ್ ಬೇಡಿ ಅವರು ಗುರುವಾರ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ದೆಹಲಿ ಚುನಾವಣೆಗೆ ದಿನಗಣನೆ ಆರಂಭವಾಗುವ ಸಂದರ್ಭದಲ್ಲಿ ಕಿರಣ್ ಬೇಡಿ ಅವರ ಸೇರ್ಪಡೆ ಕುತೂಹಲ ಕೆರಳಿಸಿದೆ.

ದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕಿರಣ್ ಬೇಡಿ ಅವರು ಕಮಲ ಪಕ್ಷ ಸೇರಿದರು. ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವ ಅರುಣ್ ಜೇಟ್ಲಿ ಮುಂತಾದ ಗಣ್ಯರು ಉಪಸ್ಥಿತರಿದ್ದರು.ಚುನಾವಣೆಗೂ ಮುನ್ನ ಬೇಡಿ ಅವರ ಸೇರ್ಪಡೆ ಬಿಜೆಪಿ ದೆಹಲಿ ಘಟಕಕ್ಕೆ ಹೆಚ್ಚಿನ ಬಲ ತಂದಿದೆ ಎಂದು ಅಮಿತ್ ಶಾ ಪ್ರತಿಕ್ರಿಯಿಸಿದ್ದಾರೆ.

Kiran Bedi

ದೆಹಲಿ ಸಿಎಂ ಪಟ್ಟಕ್ಕೆ ಬೇಡಿ?: ಕಿರಣ್ ಬೇಡಿ ಅವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ. ಯಾವ ಕ್ಷೇತ್ರ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಮುಖ್ಯಮಂತ್ರಿ ಸ್ಥಾನದ ಅಭ್ಯರ್ಥಿಯನ್ನು ಸದ್ಯಕ್ಕೆ ಘೋಷಿಸುತ್ತಿಲ್ಲ. ಬೇಡಿ ಅವರು ಸಿಎಂ ಸ್ಥಾನ ಅಭ್ಯರ್ಥಿಯೇ ಅಲ್ಲವೇ ಎಂಬುದನ್ನು ಸಂಸದೀಯ ಮಂಡಳಿ ನಿರ್ಧರಿಸಲಿದೆ ಎಂದರು.

ಭ್ರಷ್ಟಾಚಾರ ವಿರೋಧಿ ಆಂದೋಲನ ಹುಟ್ಟು ಹಾಕಿದ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರ ಆಪ್ತ ಬಳಗದಲ್ಲಿ ಕಿರಣ್ ಬೇಡಿ ಅವರು ಒಬ್ಬರಾಗಿದ್ದಾರೆ.


ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಅವರು ಕೈಗೊಂಡ ಹಲವು ಜನಪರ ಯೋಜನೆಯನ್ನು ಕಿರಣ್ ಬೇಡಿ ಅವರು ಹೊಗಳಿದ್ದರು.

ದೆಹಲಿಗೆ ಗುಜರಾತ್ ಮಾದರಿ ಆಡಳಿತದ ಅವಶ್ಯಕತೆಯಿದೆ. ನಾನು ಸಿಎಂ ಆಗಲು ಸಿದ್ಧ ಎಂದು ಕಿರಣ್ ಬೇಡಿ ಅವರು ಟ್ವೀಟ್ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು. ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ನಲ್ಲಿ ಕಿರಣ್ ಬೇಡಿ ಅವರ ಬಿಜೆಪಿ ಸೇರ್ಪಡೆಯನ್ನು ಹಲವಾರು ಗಣ್ಯರು ಸ್ವಾಗತಿಸಿದ್ದಾರೆ.

English summary
Ahead of Delhi assembly elections, anti-graft crusader and social activist Kiran Bedi was on Thursday inducted into the Bhartiya Janata Party at a function held at the BJP headquarters in New Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X