ದೆಹಲಿಗಾಗಿ ''ಕೇಜ್ರಿವಾಲ್ ಕಾ ಗ್ಯಾರಂಟಿ ಕಾರ್ಡ್" ಬಿಡುಗಡೆ
ನವದೆಹಲಿ, ಜನವರಿ 19: ದೆಹಲಿ ಚುನಾವಣೆ 2020ಗಾಗಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿರುವ ಆಮ್ ಆದ್ಮಿ ಪಕ್ಷ ಈಗ ಜನತೆಗೆ ಗ್ಯಾರಂಟಿ ಕಾರ್ಡ್ ಪ್ರಕಟಿಸಿದೆ. ಆಮ್ ಆದ್ಮಿ ಪಕ್ಷವು ಭಾನುವಾರದಂದು ಕೇಜ್ರಿವಾಲ್ ಅವರ ಗ್ಯಾರಂಟಿ ಕಾರ್ಡ್ ಪ್ರಕಟಿಸಿದ್ದು, ಚುನಾವಣಾ ಪ್ರಣಾಳಿಕೆಯ ಆಶ್ವಾಸನೆಯ ಪಟ್ಟಿ ಇದರಲ್ಲಿದೆ.
ಕೇಜ್ರಿವಾಲ್ ಕಾ ಗ್ಯಾರಂಟಿ ಕಾರ್ಡ್ ನಂತೆ ಜನತೆಗೆ ದಿನದ 24ಗಂಟೆಗಳ ಕಾಲ ವಿದ್ಯುಚ್ಛಕ್ತಿ ಪೂರೈಕೆ ಸಿಗಲಿದೆ, ಶುದ್ಧ ಕುಡಿಯುವ ನೀರು ಸೇರಿದಂತೆ 10 ಪ್ರಮುಖ ಭರವಸೆಗಳನ್ನು ನೀಡಲಾಗಿದೆ.

ಆದರೆ, ಕೇಜ್ರಿವಾಲ್ ಕಾ ಗ್ಯಾರಂಟಿ ಕಾರ್ಡ್ ಗೂ ಚುನಾವಣಾ ಪ್ರಣಾಳಿಕೆಗೂ ವ್ಯತ್ಯಾಸವಿದ್ದು, ಎರಡು ಬೇರೆ ಎಂದು ಎಎಪಿ ಪ್ರಕಟಿಸಿದೆ. ದಿನದಲ್ಲಿ 24 ಗಂಟೆಗಳ ಕಾಲ 200 ಯೂನಿಟ್ ಉಚಿತ ವಿದ್ಯುತ್ ಪೂರೈಕೆ ಅನಿಯಮಿತವಾಗಿ ಎಲ್ಲರಿಗೂ ಲಭ್ಯವಾಗಲಿದೆ. ಹೆಚ್ಚೆಚ್ಚು ಭೂಗತ ಕೇಬಲ್ ಬಳಕೆ ಮಾಡಲು ಸರ್ಕಾರ ಮುಂದಾಗಿದೆ.
24 ಗಂಟೆಗಳ ಕಾಲ ಶುದ್ಧ ನೀರನ್ನು ಪೈಪ್ ಮೂಲಕ ಕುಡಿಯುವ ನೀರನ್ನು ಮನೆ ಮನೆಗೂ ಮುಂದಿನ ಐದು ವರ್ಷಗಳಲ್ಲಿ ಪೂರೈಸುವ ಭರವಸೆ ನೀಡಲಾಗಿದೆ. ಈ ಯೋಜನೆ ಪೈಕಿ 20, 000 ಲೀಟರ್ ಉಚಿತವಾಗಿ ನೀಡಲಾಗುತ್ತದೆ. ನೀರು ಬಳಕೆ, ಉಪಯೋಗ, ಸುರಕ್ಷತೆ ವಿಧಾನ ಅನುಸರಿಸುವ ಮಹಿಳೆಯರಿಗೆ ಗ್ಯಾರಂಟಿ ಕಾರ್ಡ್ ಮೂಲಕ ಹೆಚ್ಚಿನ ಅಂಕಗಳನ್ನು ನೀಡುವ ಯೋಜನೆಯೂ ಹೊಂದಿದೆ.
ರಸ್ತೆ, ಜಲ ಪೂರೈಕೆ, ಸಿಸಿಟಿವಿ ಹಾಗೂ ಮೊಹಲ್ಲಾ ಕ್ಲಿನಿಕ್ಸ್ ಗಳನ್ನು ಅನಧಿಕೃತ ಕಾಲೋನಿಗಳಲ್ಲಿ ನೀಡಲು ಯೋಜನೆ ರೂಪಿಸಲಾಗಿದೆ. ನಗರದ ವಾಯುಮಾಲಿನ್ಯ ನಿಯಂತ್ರಣ, ಸ್ಲಂನಲ್ಲಿ ವಾಸಿಸುತ್ತಿರುವವರಿಗೆ ಜಹಾ ಝುಗ್ಗಿ ವಾಹಿ ಮಕಾನ್ ಅಡಿಯಲ್ಲಿ ಪಕ್ಕಾ ಮನೆಗಳನ್ನು ನಿರ್ಮಿಸಲಾಗುವುದು, ಖಾಸಗಿ ಶಾಲೆಗಳು ಶುಲ್ಕ ಏರಿಕೆ ಮಾಡುವುದರ ಮೇಲೆ ನಿಯಂತ್ರಣ ಮುಂತಾದ ಅಂಶಗಳನ್ನು ಈ ಗ್ಯಾರಂಟಿ ಕಾರ್ಡ್ ಹೊಂದಿದೆ.
दिल्ली की जनता को अगले पांच साल के लिए @ArvindKejriwal की दस गारंटी। #KejriwalKiGuarantee pic.twitter.com/6tcjGe9CBJ
— AAP (@AamAadmiParty) January 19, 2020
ಏಪ್ರಿಲ್ 2018ರಲ್ಲಿ ದೆಹಲಿ ಸರ್ಕಾರವು ಅಧಿಸೂಚನೆ ಪ್ರಕಟಿಸಿ, ಸರ್ಕಾರಿ ಸ್ವಾಮ್ಯದ ಜಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಅನುದಾನರಹಿತ ಶಾಲೆಗಳು ಟ್ಯೂಷನ್ ಶುಲ್ಕ ಹೆಚ್ಚಳ ಮಾಡಬೇಕೆಂದರೆ ಶಿಕ್ಷಣ ಇಲಾಖೆ ನಿರ್ದೇಶಕರ ಅನುಮತಿ ಅಗತ್ಯ ಎಂದು ಸೂಚಿಸಲಾಗಿತ್ತು.
ಹೆಚ್ಚುವರಿಯಾಗಿ ಶುಲ್ಕ ವಸೂಲಿ ಮಾಡಿದ 575 ಖಾಸಗಿ ಶಾಲೆಗಳು ಮೊತ್ತವನ್ನು ರೀಫಂಡ್ ಮಾಡುವಂತೆ ಸರ್ಕಾರ ಸೂಚಿಸಿತ್ತು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications