ದೆಹಲಿಯಲ್ಲಿ ನಾಲ್ಕನೇ ದಿನವೂ 1,000ಕ್ಕಿಂತ ಹೆಚ್ಚು ಕೋವಿಡ್ ಪ್ರಕರಣ
ನವದೆಹಲಿ, ಏಪ್ರಿಲ್ 26: ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಮುಂದುವರಿದಿದೆ. ನಿರಂತರ ನಾಲ್ಕನೇ ದಿನವೂ ದೆಹಲಿಯಲ್ಲಿ 1,000ಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿವೆ.
ನವದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 1011 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಪಾಸಿಟಿವಿಟಿ ದರ ಶೇ.6.42ರಷ್ಟಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 4168ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕಳೆದೊಂದು ದಿನದಲ್ಲಿ ಕೋವಿಡ್ ಸೋಂಕಿನಿಂದ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಇದೇ ಅವಧಿಯಲ್ಲಿ 817 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಅಧಿಕೃತ ಮಾಹಿತಿಯ ಪ್ರಕಾರ, ದೆಹಲಿಯಾದ್ಯಂತ ಹೋಮ್ ಕ್ವಾರೆಂಟೇನ್ ಆಗಿರುವವರ ಸಂಖ್ಯೆಯು ಏಪ್ರಿಲ್ 11 ರಿಂದ 24ರ ಅವಧಿಯಲ್ಲಿ ಆರು ಪಟ್ಟು ಹೆಚ್ಚಾಗಿದೆ. ಕೋವಿಡ್-19 ಸುತ್ತಲಿನ ಪ್ರಮುಖ ಬೆಳವಣಿಗೆಗಳ ಪಟ್ಟಿಯನ್ನು ಇಲ್ಲಿ ತಿಳಿಯೋಣ.

ದೇಶದಲ್ಲಿ ಕೋವಿಡ್-19 ಸುತ್ತಮುತ್ತಲಿನ ಬೆಳವಣಿಗೆ:
- ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 1,011 ಹೊಸ ಕೋವಿಡ್ -19 ಪ್ರಕರಣಗಳು, 817 ಚೇತರಿಕೆ ಮತ್ತು 1 ಸಾವಿನ ಪ್ರಕರಣ ವರದಿಯಾಗಿದೆ. ಸಕ್ರಿಯ ಪ್ರಕರಣಗಳು 4,168 ಆದರೆ ಪಾಸಿಟಿವಿಟಿ ದರ ಶೇ.6.42 ರಷ್ಟಿದೆ.
- ಕರ್ನಾಟಕ ಸರ್ಕಾರವು ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ, ಕೆಲಸದ ಸ್ಥಳಗಳಲ್ಲಿ ಮತ್ತು ಸಾರಿಗೆ ಸಮಯದಲ್ಲಿ ಮುಖದ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ದಂಡದ ಜೊತೆಗೆ ಶಿಕ್ಷೆಯಾಗುತ್ತದೆ.
- ಮುಂಬೈನಲ್ಲಿ ಸೋಮವಾರ 45 ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 10,59,331ಕ್ಕೆ ಏರಿಕಯಾಗಿದೆ. ಸಾವಿನ ಸಂಖ್ಯೆ 19,562 ಆಗಿದೆ ಎಂದು ನಾಗರಿಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
- ನಾಲ್ಕು ಪ್ರಕರಣಗಳು ಪತ್ತೆಯಾದ ನಂತರ ಮಧ್ಯಪ್ರದೇಶದಲ್ಲಿ ಸೋಮವಾರ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 10,41,323ಕ್ಕೆ ತಲುಪಿದೆ. ಜಬಲ್ಪುರದಲ್ಲಿ ಕಳೆದ 24 ಗಂಟೆಗಳಲ್ಲಿ ಒಂದು ಸಾವಿನ ಪ್ರಕರಣ ವರದಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 10,735ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
- ಗೌತಮ್ ಬುದ್ಧ ನಗರದಲ್ಲಿ ಸೋಮವಾರ 120 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿವೆ, ಒಂದು ದಿನದಲ್ಲಿ ಉತ್ತರ ಪ್ರದೇಶದಾದ್ಯಂತ ಒಟ್ಟು ಸೋಂಕುಗಳಲ್ಲಿ 55 ಪ್ರತಿಶತದಷ್ಟು ಜಿಲ್ಲೆ ಮಾತ್ರ ದಾಖಲಾಗಿದೆ.
- ಕೋವಿಡ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಚಂಡೀಗಢ ಆಡಳಿತವು ಶಾಲೆಗಳು, ಕಚೇರಿಗಳು ಮತ್ತು ಸಿನಿಮಾ ಹಾಲ್ಗಳಂತಹ ಒಳಾಂಗಣ ಪರಿಸರದಲ್ಲಿ ಫೇಸ್ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಮಾಸ್ಕ್ ಧರಿಸದಿದ್ದಲ್ಲಿ 500 ರೂಪಾಯಿ ದಂಡ ವಿಧಿಸಲಾಗುವುದು ಎಂದು ಕೇಂದ್ರಾಡಳಿತ ಪ್ರದೇಶದ ಆಡಳಿತಾಧಿಕಾರಿಗಳಿಗೆ ಸಲಹೆಗಾರರು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.
- ಅಧಿಕೃತ ಅಂಕಿಅಂಶಗಳ ಪ್ರಕಾರ, ರಾಷ್ಟ್ರೀಯ ರಾಜಧಾನಿಯಲ್ಲಿ ದೆಹಲಿಯಾದ್ಯಂತ ಹೋಮ್ ಕ್ವಾರೆಂಟೇನ್ ಆಗಿರುವವರ ಸಂಖ್ಯೆಯು ಏಪ್ರಿಲ್ 11 ರಿಂದ 24ರ ಅವಧಿಯಲ್ಲಿ ಆರು ಪಟ್ಟು ಹೆಚ್ಚಾಗಿದೆ. ಏಪ್ರಿಲ್ 11ರಂದು 447ರಷ್ಟಿದ್ದ ಹೋಮ್ ಕ್ವಾರೆಂಟೇನ್ ಆಗಿರುವವರ ಸಂಖ್ಯೆ ಏಪ್ರಿಲ್ 24ರ ಹೊತ್ತಿಗೆ 2,812ಕ್ಕೆ ಹೆಚ್ಚಾಗಿದೆ.
- ಹರಿಯಾಣದ ಗುರುಗ್ರಾಮ್ ಜಿಲ್ಲೆಯಲ್ಲಿ ಸೋಮವಾರ 397 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಗುರುಗ್ರಾಮ್ನಲ್ಲಿ ನಾಲ್ಕು ದಿನಗಳಲ್ಲಿ 700ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ.
- ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಾಲ್ಕನೇ ಅಲೆಯನ್ನು ನಿಯಂತ್ರಿಸುವ ದೃಷ್ಟಿಯಲ್ಲಿ ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಬೂಸ್ಟರ್ ಡೋಸ್ ಅನ್ನು ನೀಡುವುದಕ್ಕೆ ಹರಿಯಾಣದ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ 18-59 ವಯೋಮಾನದ ಎಲ್ಲಾ ಅರ್ಹ ಫಲಾನುಭವಿಗಳಿಗೆ ಯಾವುದೇ ಪಾವತಿಯಿಲ್ಲದೇ ಉಚಿತವಾಗಿ ಮೂರನೇ ಡೋಸ್ ಲಸಿಕೆಯನ್ನು ಸರ್ಕಾರದಿಂದ ನೀಡಲಾಗುವುದು ಎಂದು ಸೋಮವಾರ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಸರ್ಕಾರ ಘೋಷಿಸಿದೆ. ಈ ಯೋಜನೆಗಾಗಿ ರಾಜ್ಯ ಸರ್ಕಾರವು ಬರೋಬ್ಬರಿ 300 ಕೋಟಿ ರೂಪಾಯಿ ವೆಚ್ಚ ಮಾಡಲಿದೆ ಎಂದು ತಿಳಿಸಿದೆ.












Click it and Unblock the Notifications