ದೆಹಲಿ ಗಲಭೆ ಪ್ರಕರಣ: ದಿನೇಶ್ ಯಾದವ್‌ಗೆ 5 ವರ್ಷ ಜೈಲು

ನವದೆಹಲಿ, ಜನವರಿ 20: ಈಶಾನ್ಯ ದೆಹಲಿಯಲ್ಲಿ ನಡೆದಿದ್ದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಆರೋಪಿಯೊಬ್ಬರು ತಪ್ಪಿತಸ್ಥ ಎಂದು ಸಾಬೀತಾಗಿದ್ದು, ದೆಹಲಿ ಕೋರ್ಟ್ ಶಿಕ್ಷೆ ಪ್ರಮಾಣ ಪ್ರಕಟಿಸಿದೆ. ಪ್ರಕರಣದಲ್ಲಿ ದೋಷಿಯಾಗಿರುವ ದಿನೇಶ್ ದಿನೇಶ್ ಯಾದವ್‌ಗೆ 5 ವರ್ಷ ಜೈಲು ಶಿಕ್ಷೆ ಘೋಷಿಸಲಾಗಿದೆ.

ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯ ಕಠಿಣ ನಿಬಂಧನೆಗಳ ಅಡಿಯಲ್ಲಿ ಬಂಧನದಲ್ಲಿದ್ದ ಪಿಂಜ್ರಾ ತೋಡ್ ಕಾರ್ಯಕರ್ತೆಯರಾದ ದೇವಾಂಗನಾ ಕಲಿತಾ, ನತಾಶಾ ನರ್ವಾಲ್‌ ಹಾಗೂ ಜಾಮಿಯಾ ವಿದ್ಯಾರ್ಥಿ ಆಸಿಫ್‌ ಇಕ್ಬಾಲ್ ತನ್ಹಾಗೆ ದೆಹಲಿ ಹೈಕೋರ್ಟ್ ಈಗಾಗಲೇ ಜಾಮೀನು ನೀಡಿದೆ.

ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆ (ಯುಎಪಿಎ) ಕಠಿಣ ನಿಬಂಧನೆಗಳ ಅಡಿಯಲ್ಲಿ ವಿದ್ಯಾರ್ಥಿ ಸಂಘಟನೆ ಮುಖ್ಯಸ್ಥರು, ಸಾಮಾಜಿಕ ಕಾರ್ಯಕರರು ಸೇರಿದಂತೆ ಅನೇಕರನ್ನು ಬಂಧಿಸಲಾಗಿತ್ತು.

Delhi Riots Case: Delhi Court sentenced First conviction Dinesh Yadav for 5 years jail term

ಫೆಬ್ರವರಿಯಲ್ಲಿ ನಡೆದಿದ್ದ ಸಿಎಎ/ಎನ್‌ಎಸಿ ವಿರೋಧಿ ಪ್ರತಿಭಟನೆಯ ವೇಳೆ ಪೂರ್ವ ದೆಹಲಿಯಲ್ಲಿ ವ್ಯಾಪಕ ಹಿಂಸಾಚಾರ ನಡೆದಿತ್ತು. ಈ ಸಂಬಂಧ ಪೊಲೀಸರು 17,500 ಪುಟಗಳ ವರದಿ ಸಲ್ಲಿಸಿದ್ದು, ಅದರಲ್ಲಿ 15 ಆರೋಪಿಗಳನ್ನು ಮತ್ತು ಏಳು ವಾಟ್ಸಾಪ್ ಚಾಟ್ ಗುಂಪುಗಳನ್ನು ಹೆಸರಿಸಲಾಗಿದೆ.

ಈ ಆರೋಪಪಟ್ಟಿಯಲ್ಲಿ ಎಎಪಿಯ ಮಾಜಿ ಕೌನ್ಸಿಲರ್ ತಾಹೀರ್ ಹುಸೇನ್, ಪಿಂಜ್ರಾ ಟೋಡ್‌ನ ದೇವಾಂಗನಾ ಕಲಿತಾ ಮತ್ತು ನತಾಶಾ ನರ್ವಾಲ್, ದೆಹಲಿ ಯುನಿವರ್ಸಿಟಿಯ ಮಾಜಿ ವಿದ್ಯಾರ್ಥಿ ಗುಲ್ಫಿಶಾ, ಜಾಮಿಯಾ ಮಿಲಿಯಾ ಇಸ್ಲಾಮಿಯಾದ ಪಿಎಚ್‌ಡಿ ವಿದ್ಯಾರ್ಥಿ ಮೀರನ್ ಹೈದರ್ ಮತ್ತು ಜಾಮಿಯಾ ಸಮನ್ವಯ ಸಮಿತಿ ಮಾಧ್ಯಮ ಸಂಯೋಜಕ ಸಫೂರಾ ಹಾಗೂ ಇತರರು ಇದ್ದಾರೆ.

50ಕ್ಕೂ ಹೆಚ್ಚು ಜನರ ಸಾವು ಹಾಗೂ 500ಕ್ಕೂ ಅಧಿಕ ಸಾರ್ವಜನಿಕರಿಗೆ ಗಾಯವಾಗಲು ಕಾರಣವಾಗಿರುವುದರ ಜತೆಗೆ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳಿಗೆ ಬೆಂಕಿ ಇಡುವ ಹಾಗೂ ಇತರೆ ಮಾರ್ಗಗಳಿಂದ ಭಾರಿ ಪ್ರಮಾಣದಲ್ಲಿ ಹಾನಿ ಮಾಡಿರುವುದು ಸಹ ಸ್ಪಷ್ಟವಾಗಿ ಭಯೋತ್ಪಾದನಾ ಕೃತ್ಯದ ವ್ಯಾಖ್ಯಾನದಡಿ ಬರುತ್ತದೆ. ಸಮುದಾಯದ ಜೀವನಕ್ಕೆ ಅತ್ಯಗತ್ಯವಾದ ಸರಕು ಹಾಗೂ ಸೇವೆಗಳ ಪೂರೈಕೆಗೆ ಅಡ್ಡಿಯುಂಟು ಮಾಡಿರುವುದು ಭಯೋತ್ಪಾದನಾ ಕೃತ್ಯದ ವ್ಯಾಪ್ತಿಗೆ ಒಳಪಡುತ್ತದೆ

ಭಯೋತ್ಪಾದನಾ ಕೃತ್ಯ ಹೇಗಾಗುತ್ತದೆ?

ಭಾರತದ ಸನ್ನಿವೇಶದಲ್ಲಿ ಯುಎಪಿಎ ಸೆಕ್ಷನ್ 15ರ ಅಡಿ ಇದು ಹೇಗೆ 'ಭಯೋತ್ಪಾದನಾ ಕೃತ್ಯ' ಆಗುತ್ತದೆ ಎಂಬುದನ್ನು ವರದಿಯಲ್ಲಿ ವಿವರಿಸಲಾಗಿದೆ. 'ಈ ಪ್ರಕರಣದಲ್ಲಿ ಅವರು ಬಂದೂಕುಗಳು, ಪೆಟ್ರೋಲ್ ಬಾಂಬ್‌ಗಳನ್ನು ಬಳಸಿದ್ದಾರೆ. ಇವು ಪೊಲೀಸರ ಸಾವು ಹಾಗೂ ತೀವ್ರತರದ ಗಾಯಗಳಿಗೆ ಕಾರಣವಾಗಿವೆ. ಸಿಎಎ ಮತ್ತು ಎನ್‌ಆರ್‌ಸಿಯನ್ನು ಹಿಂದಕ್ಕೆ ಪಡೆದುಕೊಳ್ಳುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಮತ್ತು ಜನರನ್ನು ಬೆದರಿಸುವ ಉದ್ದೇಶವು ಭಯೋತ್ಪಾದನಾ ಚಟುವಟಿಕೆಗಳ ವ್ಯಾಖ್ಯಾನದಡಿ ಬರುತ್ತದೆ' ಎಂದು ವಿಶೇಷ ಘಟಕದ ಡಿಸಿಪಿ ಪಿ.ಎಸ್. ಕುಶ್ವಾಹ ಮತ್ತು ಎಸಿಪಿ ಅಲೋಕ್ ಕುಮಾರ್ ಸಹಿ ಇರುವ ವರದಿ ಹೇಳಿದೆ.

'ಈ ಸಂಚು ಅತ್ಯಂತ ವ್ಯವಸ್ಥಿತವಾಗಿ ರೂಪುಗೊಂಡಿದ್ದು, ಎಂಎಸ್‌ಜೆ (ಮುಸ್ಲಿಮ್ ಸ್ಟುಡೆಂಟ್ಸ್ ಆಫ್ ಜೆಎನ್‌ಯು) ಎಂಬ ಗುಂಪನ್ನು ಸೃಷ್ಟಿಸಲಾಗಿತ್ತು. ಇದು ಪೌರತ್ವ ತಿದ್ದುಪಡಿ ಮಸೂದೆ (ಸಿಎಬಿ) ಮಂಡನೆಯಾದ ಬಳಿಕ ಬಿತ್ತನೆಯಾದ ಕೋಮು ಬೀಜ. ಇದರಿಂದ ನಂತರ ಜೆಸಿಸಿ ಹಾಗೂ ಅಂತಿಮವಾಗಿ ಡಿಪಿಎಸ್‌ಜಿ ಸೃಷ್ಟಿಯಾದವು. ಇದು ಜಾತ್ಯತೀತ ಮುಖವಾಡ ಮತ್ತು ಹಿಂಸಾತ್ಮಕ ಪ್ರತಿರೋದದ ನಕ್ಸಲ್ ಜೀನ್‌ಗಳನ್ನು ಒದಗಿಸುವ ಮೂಲಕ ತೀವ್ರಗಾಮಿ ಕೋಮು ಸಂಚನ್ನು ರೂಪಿಸಿತ್ತು' ಎಂದು ಪೊಲೀಸರು ಹೇಳಿದ್ದಾರೆ.

ಈಶಾನ್ಯ ದೆಹಲಿ ಗಲಭೆಯ ವಿಚಾರವಾಗಿ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರನ್ನು ದೆಹಲಿ ವಿಶೇಷ ಘಟಕದ ಪೊಲೀಸರು ಜುಲೈ ಕೊನೆಯ ವಾರ ವಿಚಾರಣೆಗೆ ಒಳಪಡಿಸಿದ್ದರು. ಪರಿಸ್ಥಿತಿಯನ್ನು ತಿಳಿಗೊಳಿಸಲು ಅಲ್ಲಿಗೆ ತೆರಳಿದ್ದೆ. ಅಲ್ಲಿ ಯಾವುದೇ ಭಾಷಣ ಮಾಡಿರಲಿಲ್ಲ. ತಮ್ಮ ಪಕ್ಕದಲ್ಲಿದ್ದ ಡಿಸಿಪಿಗೆ ಹೇಳಿದ ಮಾತುಗಳು ಸಿಎಎ ವಿರೋಧಿ ಪ್ರತಿಭಟನಾಕಾರರಿಗೆ ಪ್ರತಿಯಾಗಿ ಧರಣಿ ಆಯೋಜಿಸುವ ತಮ್ಮ ಉದ್ದೇಶವನ್ನು ತಿಳಿಸುವುದಷ್ಟೇ ಆಗಿತ್ತು ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+