ದೆಹಲಿ ಗಲಭೆ: ಮೂವರು ವಿದ್ಯಾರ್ಥಿಗಳಿಗೆ ಜಾಮೀನು ಆದೇಶ ಎತ್ತಿಹಿಡಿದ ಸುಪ್ರೀಂ
ನವದೆಹಲಿ, ಜೂ. 18: ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆ (ಯುಎಪಿಎ) ಕಠಿಣ ನಿಬಂಧನೆಗಳ ಅಡಿಯಲ್ಲಿ ಬಂಧನದಲ್ಲಿದ್ದ ಪಿಂಜ್ರಾ ತೋಡ್ ಕಾರ್ಯಕರ್ತೆಯರಾದ ದೇವಾಂಗನಾ ಕಲಿತಾ, ನತಾಶಾ ನರ್ವಾಲ್ ಹಾಗೂ ಜಾಮಿಯಾ ವಿದ್ಯಾರ್ಥಿ ಆಸಿಫ್ ಇಕ್ಬಾಲ್ ತನ್ಹಾ ಜಾಮೀನು ಲಭಿಸಿದ ಹಿನ್ನೆಲೆ ಜೈಲಿನಿಂದ ಹೊರಗಿರಲಿದ್ದಾರೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳುವ ಮೂಲಕ ದೆಹಲಿ ಹೈಕೋರ್ಟ್ ಹಾಗೂ ಕಡಕಡ್ಡೂಮಾ ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ.
ಆದಾಗ್ಯೂ, ''ಭಯೋತ್ಪಾದನಾ-ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪಿತೂರಿ ಆರೋಪ ಹೊತ್ತಿರುವ ಮೂವರು ವಿದ್ಯಾರ್ಥಿಗಳಿಗೆ ಜಾಮೀನು ನೀಡುವ ಹೈಕೋರ್ಟ್ ತೀರ್ಪನ್ನು ಮುಂದಿನ ಯಾವುದೇ ಪ್ರಕರಣಗಳಿಗೆ ಪೂರ್ವನಿದರ್ಶನವಾಗಿ ಬಳಸಲಾಗದು,'' ಎಂದು ಕೂಡಾ ಸುಪ್ರೀಂ ಕೋರ್ಟ್ ಹೇಳಿದೆ.
ಕಳೆದ ವರ್ಷ (2020) ಮೇ ತಿಂಗಳಲ್ಲಿ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆ (ಯುಎಪಿಎ) ಕಠಿಣ ನಿಬಂಧನೆಗಳ ಅಡಿಯಲ್ಲಿ ಈ ಮೂವರು ಬಂಧನಕ್ಕೆ ಒಳಗಾಗಿದ್ದು ದೆಹಲಿ ಹೈಕೋರ್ಟ್ ಮೂವರಿಗೂ 2021ರ ಜೂನ್ 15ರಂದು ಜಾಮೀನು ನೀಡಿದೆ.

ಆದರೆ ದೆಹಲಿ ಹೈಕೋರ್ಟ್ನ ಈ ಆದೇಶವನ್ನು ಪ್ರಶ್ನಿಸಿ ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ''ಮೂವರು ಆರೋಪಿಗಳಾದ ದೇವಾಂಗನಾ ಕಲಿತಾ, ನತಾಶಾ ನರ್ವಾಲ್ ಹಾಗೂ ಆಸಿಫ್ ಇಕ್ಬಾಲ್ ತನ್ಹಾ ಜೈಲಿನಿಂದ ಹೊರಗುಳಿಯಲಿದ್ದಾರೆ,'' ಎಂದು ಹೇಳಿದೆ. ಹಾಗೆಯೇ ದೆಹಲಿ ಹೈಕೋರ್ಟ್ ತೀರ್ಪಿನ ಕಾನೂನು ಅಂಶಗಳನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದ್ದು, ಮುಂದಿನ ತಿಂಗಳು ಈ ಪ್ರಕರಣವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದೆ.
ಇನ್ನು ದೆಹಲಿ ಹೈಕೋರ್ಟ್ ಮೂವರ ಬಿಡುಗಡೆಗೆ ಆದೇಶಿಸಿದ್ದರೂ ಮೂವರ ಬಿಡುಗಡೆಯಾಗಿರಲಿಲ್ಲ. ಪೊಲೀಸರು ವಿಳಾಸ ಮತ್ತು ಶ್ಯೂರಿಟಿ ಪರಿಶೀಲನೆ ಮಾಡಬೇಕಾದ ಹಿನ್ನೆಲೆ ಮೂವರನ್ನು ತಕ್ಷಣ ಬಿಡುಗಡೆ ಮಾಡಲು ಕಡಕಡ್ಡೂಮಾ ಸೆಷನ್ಸ್ ನ್ಯಾಯಾಲಯ ನಿರಾಕರಿಸಿತ್ತು. ತನಿಖಾಧಿಕಾರಿ ಬುಧವಾರ ಹೆಚ್ಚಿನ ಸಮಯಾವಕಾಶ ಕೋರಿದ್ದರು. ಈ ಕಾರಣದಿಂದಾಗಿ ಬುಧವಾರವೂ ಈ ಮೂವರು ಬಿಡುಗಡೆಯಾಗಿರಲಿಲ್ಲ.
ಈ ಹಿನ್ನೆಲೆ ''ಹೈಕೋರ್ಟ್ ಜಾಮೀನು ನೀಡಿದ ನಂತರವೂ ಸರ್ಕಾರವು ಬಿಡುಗಡೆಯನ್ನು ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿದೆ,'' ಎಂದು ಆರೋಪಿಸಿ ಶೀಘ್ರ ಬಿಡುಗಡೆಗೆ ಒತ್ತಾಯಿಸಿ ಮೇಲ್ಮನವಿ ಸಲ್ಲಿಸಿದ್ದರು. ಇದನ್ನು ಆಲಿಸಿದ ಹೈಕೋರ್ಟ್, ''ಗುರುವಾರ ಮಧ್ಯಾಹ್ನ 12 ಗಂಟೆಗೆ ವಿಚಾರಣಾ ನ್ಯಾಯಾಲಯ ವಿಚಾರಣೆ ನಡೆಸಬೇಕು,'' ಎಂದು ಹೇಳಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ತನ್ಹಾ, ಕಲಿತಾ, ನತಾಶಾ ಬಿಡುಗಡೆಗೊಳಿಸಿ ಕಡ್ಕಡ್ಡೂಮಾ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಆದೇಶದಂತೆ ಗುರುವಾರ ಸಂಜೆ ವೇಳೆಗೆ ಮೂವರು 50,000 ರೂ. ವೈಯಕ್ತಿಕ ಬಾಂಡ್ಗಳ ಜಾಮೀನು ಮೇರೆಗೆ ಬಿಡುಗಡೆಯಾಗಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications