Breaking: ಸುನಂದಾ ಪುಷ್ಕರ್ ಸಾವಿನ ಪ್ರಕರಣ; ಶಶಿ ತರೂರ್ ಆರೋಪಮುಕ್ತಗೊಳಿಸಿ ಆದೇಶ
ನವದೆಹಲಿ, ಆಗಸ್ಟ್ 18: ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರನ್ನು ಆರೋಪಮುಕ್ತಗೊಳಿಸಿ ದೆಹಲಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ದೆಹಲಿಯ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಶಶಿ ತರೂರ್ ಅವರನ್ನು ಆರೋಪಮುಕ್ತಗೊಳಿಸಿದೆ.

ಸತತ ಐದನೇ ಬಾರಿ ತೀರ್ಪು ಮುಂದೂಡಿದ್ದ ದೆಹಲಿಯಲ್ಲಿರುವ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ವಿಶೇಷ ನ್ಯಾಯಾಲಯ ಬುಧವಾರ ಅಂತಿಮ ತೀರ್ಪು ಪ್ರಕಟಿಸಿದೆ.
— Shashi Tharoor (@ShashiTharoor) August 18, 2021
ನ್ಯಾಯಾಧೀಶರಿಗೆ ಧನ್ಯವಾದ; ಶಶಿ ತರೂರ್ ಟ್ವೀಟ್
ನ್ಯಾಯಾಲಯದ ಈ ಆದೇಶಕ್ಕೆ ಶಶಿ ತರೂರ್ ಪ್ರತಿಕ್ರಿಯಿಸಿದ್ದಾರೆ. "ದೆಹಲಿ ಪೊಲೀಸರ ಆರೋಪದಿಂದ ನನ್ನನ್ನು ಮುಕ್ತಗೊಳಿಸಿದ ನ್ಯಾಯಾಧೀಶರಾದ ಗೀತಾಂಜಲಿ ಗೋಯೆಲ್ ಅವರಿಗೆ ನನ್ನ ಧನ್ಯವಾದಗಳು. ನನ್ನ ಪತ್ನಿ ಸುನಂದಾ ಪುಷ್ಕರ್ ಸಾವಿನ ಕುರಿತು ದೀರ್ಘಕಾಲದಿಂದ ನಡೆಯುತ್ತಿದ್ದ ಪ್ರಕರಣದಲ್ಲಿ ನಾನು ಆರೋಪ ಮುಕ್ತ ಎಂದು ಅಂತಿಮ ತೀರ್ಪು ದೊರೆತಿದೆ. ಎಲ್ಲಾ ರೀತಿಯ ವಿಚಾರಣೆಗೂ ನಾನು ತಾಳ್ಮೆಯಿಂದ ಸಹಕರಿಸಿದ್ದೇನೆ. ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ನನ್ನ ನಂಬಿಕೆ ಸುಳ್ಳಾಗಲಿಲ್ಲ. ಕೊನೆಗೆ ನನಗೆ ನ್ಯಾಯ ದೊರೆತಿದೆ. ಸುನಂದಾ ಪುಷ್ಕರ್ ಆತ್ಮಕ್ಕೆ ಶಾಂತಿ ಕೋರಲು ನಮ್ಮ ಕುಟುಂಬಕ್ಕೆ ನಮಗೆ ಅವಕಾಶ ಕೊಟ್ಟಿದೆ. ನನ್ನ ಪರ ವಾದಿಸಿದ ವಕೀಲರಿಗೆ, ವಿಶೇಷವಾಗಿ ವಿಕಾಸ್ ಪಾಹ್ವ ಮತ್ತು ಗೌರವ್ ಗುಪ್ತಾ ಅವರಿಗೆ ಧನ್ಯವಾದಗಳು" ಎಂದು ಪತ್ರವನ್ನು ಟ್ವೀಟ್ ಮಾಡಿದ್ದಾರೆ.
ಪ್ರಕರಣದ ಹಿನ್ನೆಲೆ: 2014ರ ಜನವರಿಯಲ್ಲಿ ನವದೆಹಲಿಯ ಪಂಚತಾರಾ ಹೋಟೆಲ್ನ ಕೋಣೆಯೊಂದರಲ್ಲಿ ಸುನಂದಾ ಶವವಾಗಿ ಪತ್ತೆಯಾಗಿದ್ದರು. ಶಶಿ ತರೂರ್ ಅವರ ಅಧಿಕೃತ ಬಂಗಲೆ ನವೀಕರಣ ನಡೆಯುತ್ತಿದ್ದುದರಿಂದ ದಂಪತಿ ಹೋಟೆಲ್ನಲ್ಲಿ ತಂಗಿದ್ದರು. ಇದನ್ನು ಆಧರಿಸಿ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡ ಹಿನ್ನೆಲೆಯಲ್ಲಿ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು.
ದೆಹಲಿ ಪೊಲೀಸರು ಸೆಕ್ಷನ್ 498 ಎ (ಕ್ರೌರ್ಯ) ಮತ್ತು 306 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಅಥವಾ ಪರ್ಯಾಯವಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಆರೋಪಗಳನ್ನು ನಿಗದಿಪಡಿಸುವಂತೆ ನ್ಯಾಯಾಲಯವನ್ನು ಕೋರಿದ್ದರು.
ವಿಷದಿಂದ ಹಾಗೂ ಅಲ್ಪ್ರಾಕ್ಸ್ ಸೇವನೆಯಿಂದಾಗಿ ಆಕೆ ಸಾವನ್ನಪ್ಪಿದ್ದಾರೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅತುಲ್ ಶ್ರೀವಾಸ್ತವ ವಾದಿಸಿದ್ದರು. ಆದರೆ ಆಕ್ಷೇಪಿಸಲಾದ ಔಷಧ ಸುನಂದಾ ದೇಹದಲ್ಲಿ ಪತ್ತೆಯಾಗಿಲ್ಲ ಎಂದು ವಿಧಿ ವಿಜ್ಞಾನ ವರದಿಗಳು ಹೇಳುತ್ತಿರುವುದಾಗಿ ಹಿರಿಯ ವಕೀಲ ವಿಕಾಸ್ ಪಹ್ವಾ ತಿಳಿಸಿದ್ದರು.
ಸುನಂದಾ ಪುಷ್ಕರ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರಿಗೆ 2018ರ ಜುಲೈ 5 ರಂದು ಜಾಮೀನು ಮಂಜೂರಾಗಿತ್ತು. ತಮ್ಮ ವಿರುದ್ಧದ ಆರೋಪ ಕೈಬಿಡುವಂತೆ ಶಶಿ ತರೂರ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ಸುನಂದಾ ಪುಷ್ಕರ್ ಸಾವು ಆತ್ಮಹತ್ಯೆಯೂ ಅಲ್ಲ, ಹತ್ಯೆಯೂ ಅಲ್ಲ ಎಂದು ಪುರಾವೆಗಳು ಖಚಿತಪಡಿಸಿವೆ. ಹಾಗಾಗಿ ತಮ್ಮ ವಿರುದ್ಧವಿರುವ ಆರೋಪ ಕೈಬಿಡುವಂತೆ ಕಾಂಗ್ರೆಸ್ ಮುಖಂಡ ಶಶಿ ತರೂರ್ ಮನವಿ ಮಾಡಿದ್ದರು. ತರೂರ್ ವಿರುದ್ಧ ಐಪಿಸಿ ಸೆಕ್ಷನ್ 498ಎ ಹಾಗೂ ಐಪಿಸಿ 306 ಸಾಬೀತಾಗಲು ಯಾವುದೇ ಸಾಕ್ಷಿಗಳಿಲ್ಲ. ಸುನಂದಾ ಸಾವನ್ನು ಆಕಸ್ಮಿಕವೆಂದು ಪರಿಗಣಿಸಬೇಕು ಎಂದು ವಕೀಲರು ವಾದಿಸಿದ್ದರು.
ಇದೀಗ ಶಶಿ ತರೂರ್ ಅವರನ್ನು ದೆಹಲಿಯ ವಿಶೇಷ ನ್ಯಾಯಾಲಯ ಆರೋಪಮುಕ್ತಗೊಳಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications