ಮೊಟಾರ್ ವಾಹನ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಮುಷ್ಕರ
ನವದೆಹಲಿ, ಸೆಪ್ಟೆಂಬರ್ 19: ಭಾರೀ ವಿವಾದ ಸೃಷ್ಟಿಸಿರುವ ಮೋಟಾರ್ ವಾಹನ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ದೆಹಲಿಯಲ್ಲಿ ಇಂದು ಮುಷ್ಕರ ನಡದೆಯಲಿದೆ.
ಇತ್ತೀಚೆಗೆ ಕೇಂದ್ರ ಸರ್ಕಾರ ಮಂಡಿಸಿದ ಮೋಟಾರ್ ವಾಹನ ತಿದ್ದುಪಡಿ ಕಾಯ್ದೆಯಲ್ಲಿ ಮಾಡಲಾದ ಕೆಲವು ಬದಲಾವಣೆಗಳನ್ನು ವಿರೋಧಿಸಿ ಈ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ವಿಧಿಸುವ ದುಬಾರಿ ಮೊತ್ತದ ದಂಡವನ್ನೂ ಈ ಮುಷ್ಕರದಲ್ಲಿ ವಿರೋಧಿಸಲಾಗುತ್ತಿದೆ.
ಮುಷ್ಕರದ ಹಿನ್ನಲೆಯಲ್ಲಿ ದೆಹಲಿಯ ಬಹುತೇಕ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಸಂಚಾರಿ ನಿಯಮ ಉಲ್ಲಂಘನೆಗೆ ಭಾರೀ ದಂಡ: ಬೆಂಬಲಿಸಿದ ಕೇಜ್ರಿವಾಲ್
ಯುನೈಟೆಡ್ ಫ್ರಂಟ್ ಆಫ್ ಟ್ರಾನ್ಸ್ ಪೋರ್ಟ್ ಅಸೋಸಿಯೇಶನ್ಸ್ ಈ ಮುಷ್ಕರವನ್ನು ಕರೆದಿದ್ದು, ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರದ ನಡೆಯೇ ನಮಗೆ ಈ ಮುಷ್ಕರ ನಡೆಸಲು ಪ್ರಚೋದನೆ ನೀಡಿದೆ ಎಂದು ಆರೋಪಿಸಿದೆ.
ಸಂಚಾರಿ ನಿಯಮ ಉಲ್ಲಂಘನೆ; ದಂಡ ಎಷ್ಟು ಕಡಿತವಾಗಲಿದೆ?
"ದುಬಾರಿ ದಂಡದಿಂದ ಸಂಚಾರಿ ನಿಯಮ ಉಲ್ಲಂಘಿಸುವ ಪ್ರಕರಣಗಳು ಕಡಿಮೆಯಾಗುತ್ತವೆ" ಎಂದು ಕೇಂದ್ರ ಸರ್ಕಾರದ ನಡೆಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೂ ಬೆಂಬಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.