ಈಶಾನ್ಯ ದೆಹಲಿ ಹೊತ್ತಿ ಉರಿದರೂ ಜನ ಮಾನವೀಯತೆ ಮರೆತಿಲ್ಲ
ನವದೆಹಲಿ, ಫೆಬ್ರವರಿ 27 : ಪೌರತ್ವ ತಿದ್ದುಪಡಿ ಪರ-ವಿರೋಧ ಹೋರಾಟದಲ್ಲಿ ಈಶಾನ್ಯ ದೆಹಲಿ ಹೊತ್ತಿ ಉರಿದಿದೆ. ಇದುವರೆಗೂ 38 ಜನರು ಮೃತಪಟ್ಟಿದ್ದಾರೆ. ಹೋರಾಟ ಕೋಮು ಗಲಭೆ ರೂಪ ಪಡೆದುಕೊಂಡು ಜನರಲ್ಲಿ ಆತಂಕ ಮೂಡಿಸಿತ್ತು.
Recommended Video
ದೆಹಲಿ ಹೊತ್ತಿ ಉರಿದರೂ ಜನರು ಮಾನವೀಯತೆಯನ್ನು ಮರೆತಿಲ್ಲ. ರಾಜಕೀಯ ಪಕ್ಷಗಳು ಘರ್ಷಣೆಯ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದರು ಜನರು ತಮ್ಮ ಅಕ್ಕ-ಪಕ್ಕದ ಜನರ ಸಹಾಯಕ್ಕೆ ನಿಂತಿದ್ದಾರೆ. ಈ ಮೂಲಕ ಮಾನವೀಯತೆ ಮೆರೆದಿದ್ದಾರೆ.
ದೆಹಲಿಯಲ್ಲಿ ಭಾನುವಾರದಿಂದ ನಡೆದ ಹಿಂಸಾಚಾರದಿಂದ ಇದುವರೆಗೂ 200 ಜನರು ಗಾಯಗೊಂಡಿದ್ದಾರೆ. ಗುರುತೇಜ್ ಬಹದ್ದೂರ್ ಸೇರಿದಂತೆ ವಿವಿಧ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸಂಬಂಧಿಕರು ಆಸ್ಪತ್ರೆಗೆ ಬರುತ್ತಿದ್ದಾರೆ.

ಗಲಭೆಯ ಕಾರಣ ದೆಹಲಿಯ ಹಲವು ಪ್ರದೇಶಗಳಲ್ಲಿ ಅಂಗಡಿ, ಹೋಟಲ್ ಮುಚ್ಚಲಾಗಿದೆ. ಸಂಬಂಧಿಕರನ್ನು ನೋಡಲು ಬರುವ ಜನರು ಉಟಕ್ಕಾಗಿ ಪರದಾಡುತ್ತಿದ್ದಾರೆ. ಗುರುತೇಜ್ ಬಹದ್ದೂರ್ ಆಸ್ಪತ್ರೆ ಬಳಿ ಸ್ಥಳೀಯರು ಗಾಯಗೊಂಡವರ ಸಂಬಂಧಿಕರಿಗೆ ಊಟವನ್ನು ನೀಡುತ್ತಿದ್ದಾರೆ.
ಜಾತಿ, ಮತ, ಪಂಥ, ರಾಜಕೀಯ ಪಕ್ಷಗಳು ಇಲ್ಲಿ ಲೆಕ್ಕಕ್ಕೆ ಇಲ್ಲ. ಸ್ಥಳೀಯ ಜನರ ಮಾನವೀಯತೆ, ತುತ್ತು ಅನ್ನಕಾಗಿ ಪರದಾಡುತ್ತಿರುವ ಜನರ ಹಸಿವು ಮಾತ್ರ ಇಲ್ಲಿ ಲೆಕ್ಕಕ್ಕೆ ಸೇರುತ್ತದೆ. ಈ ಸೇವೆಯನ್ನು ಯಾರೂ ಹೇಳಿ ಮಾಡಿಸುತ್ತಿಲ್ಲ. ಇಲ್ಲಿ ರಾಜಕೀಯ ಪಕ್ಷದವರ ಕೈವಾಡವಿಲ್ಲ.
ಆಸ್ಪತ್ರೆ ಸಮೀಪ ಆಹಾರ ವಿತರಣೆ ಮಾಡುತ್ತಿರುವ ಜನರು "ಇದು ಯಾವುದೇ ರಾಜಕೀಯ ಪಕ್ಷದ ಕೆಲಸವಲ್ಲ. ನಮ್ಮ ಸ್ವ ಪ್ರೇರಣೆಯಿಂದ ಇದನ್ನು ಮಾಡುತ್ತಿದ್ದೇವೆ" ಎಂದು ಹೇಳಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬುಧವಾರ ವಿಧಾನಸಭೆಯಲ್ಲಿ, "ದೆಹಲಿ ಜನರು ಶಾಂತಿ ಪ್ರಿಯರು. ತಮ್ಮ ಮುಂದಿನ ಭವಿಷ್ಯಕ್ಕಾಗಿ ಅವರು ದುಡಿಯುತ್ತಿದ್ದಾರೆ. ಗಲಭೆ, ಹಿಂಸಾಚಾರದ ಹಿಂದೆ ಯಾರಿದ್ದಾರೆ? ಎಂದು ತಿಳಿಯುತ್ತಿಲ್ಲ. ದೆಹಲಿ ಜನರು ಇದನ್ನು ಮಾಡುತ್ತಿಲ್ಲ" ಎಂದು ಹೇಳಿದ್ದರು.
ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಕ್ಕೆ ದೆಹಲಿ ಸರ್ಕಾರ 10 ಲಕ್ಷ ರೂ. ಪರಿಹಾರವನ್ನು ಘೋಷಣೆ ಮಾಡಿದೆ. ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಲಾಗಿದೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications