ದೆಹಲಿ ಹಿಂಸಾಚಾರ: ಫೋಟೋ, ವಿಡಿಯೋ ನೀಡುವಂತೆ ಸಾರ್ವಜನಿಕರಿಗೆ ಮನವಿ
ನವದೆಹಲಿ, ಫೆಬ್ರವರಿ.28: ನಾಲ್ಕು ದಿನಗಳಿಂದ ಹಿಂಸಾಚಾರದಿಂದ ಹೊತ್ತಿ ಉರಿದ ರಾಷ್ಟ್ರ ರಾಜಧಾನಿಯಲ್ಲಿ ಕಳೆದ 24 ಗಂಟೆಗಳಲ್ಲಿ ವಾತಾವರಣ ತಿಳಿಗೊಂಡಿದೆ. ಈಶಾನ್ಯ ಭಾಗದ ಹಿಂಸಾಚಾರ ಪೀಡಿತ ಪ್ರದೇಶದಲ್ಲಿ ಪರಿಸ್ಥಿತಿ ಹತೋಟಿಗೆ ಬಂದಿದೆ.
Recommended Video
ಸಾರ್ವಜನಿಕರು ಸುಳ್ಳು ಸುದ್ದಿ, ವಿಡಿಯೋ ಮತ್ತು ಫೋಟೋ ಹಾಗೂ ವದಂತಿಗಳಿಗೆ ಕಿವಿಗೊಡದಂತೆ ದೆಹಲಿ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ. ಇದರ ಜೊತೆಗೆ ಕಳೆದ ನಾಲ್ಕು ದಿನಗಳಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದ ಫೋಟೋ ಮತ್ತು ವಿಡಿಯೋಗಳಿದ್ದರೆ ನೇರವಾಗಿ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
ದೆಹಲಿಯಲ್ಲಿ ಹಿಂಸಾಚಾರ ನಡೆಸಿದವರ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರು ಎರಡು ಸಹಾಯವಾಣಿ ಸಂಖ್ಯೆಗಳನ್ನು ನೀಡಿದ್ದು, ಈ ನಂಬರ್ ಗೆ ಸಾರ್ವಜನಿಕರು ಕರೆ ಮಾಡಿ ಮಾಹಿತಿಯನ್ನು ನೀಡಬಹುದು. ಹೀಗೆ ಮಾಹಿತಿ ನೀಡಿದವರು ಹೆಸರನ್ನು ಗೌಪ್ಯವಾಗಿ ಇಡಲಾಗುತ್ತದೆ ಎಂದು ಪೊಲೀಸರು ಭರವಸೆ ನೀಡಿದ್ದಾರೆ.

ದೆಹಲಿಯ ಈಶಾನ್ಯ ಭಾಗದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ಪರ ಮತ್ತು ವಿರೋಧಿ ಪ್ರತಿಭಟನಾನಿರತರ ಗುಂಪಿನ ನಡುವೆ ಘರ್ಷಣೆ ಉಂಟಾಗಿತ್ತು. ಇದರಿಂದ ಕಳೆದ ಫೆಬ್ರವರಿ.23 ರಿಂದ ಫೆಬ್ರವರಿ.26ರವರೆಗೂ ರಾಷ್ಟ್ರ ರಾಜಧಾನಿ ಬೂದಿ ಮುಚ್ಚಿದ ಕೆಂಡದಂತೆ ಆಗಿತ್ತು.
ಇನ್ನು, ದೆಹಲಿ ಹಿಂಸಾಚಾರದಲ್ಲಿ ಈವರೆಗೂ 38 ಮಂದಿ ಪ್ರಾಣ ಬಿಟ್ಟಿರುವ ಬಗ್ಗೆ ವರದಿಯಾಗಿದೆ. ಗುರು ತೇಜ್ ಬಹದೂರ್ ಆಸ್ಪತ್ರೆಯಲ್ಲಿ 34, ಲೋಕನಾಯಕ ಜಯಪ್ರಕಾಶ್ ನಾರಾಯಣ್ ಆಸ್ಪತ್ರೆಯಲ್ಲಿ 3 ಮತ್ತು ಜಗ ಪರ್ವೇಶ್ ಚಂದೇರ್ ಆಸ್ಪತ್ರೆಯಲ್ಲಿ ಒಬ್ಬರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಕಳೆದ ನಾಲ್ಕು ದಿನಗಳ ಕಾಲ ರಾಷ್ಟ್ರ ರಾಜಧಾನಿಯಲ್ಲಿ ನಡೆದ ಹಿಂಸಾಚಾರದ ಪ್ರಕರಣದ ವಿಚಾರಣೆ ನಡೆಸಲು ಎರಡು ವಿಶೇಷ ತನಿಖಾ ತಂಡ(SIT)ವನ್ನು ರಚನೆ ಮಾಡಲಾಗಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications