ದೆಹಲಿ ವಿವಿ ವಿದ್ಯಾರ್ಥಿ ಸಂಘದ ಚುನಾವಣೆ: ಎಬಿವಿಪಿ ಜಯಭೇರಿ
ನವದೆಹಲಿ, ಸೆ 10: ಭಾರೀ ಕುತೂಹಲ ಹುಟ್ಟು ಹಾಕಿದ್ದ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ವಿದ್ಯಾರ್ಥಿ ಸಂಘಟನೆಯಾಗಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಜಯಭೇರಿ ಭಾರಿಸಿದೆ.
ಎಬಿವಿಪಿ ಮೂರು ಸ್ಥಾನವನ್ನು ಗೆದ್ದರೆ, ಕಾಂಗ್ರೆಸ್ಸಿನ ವಿದ್ಯಾರ್ಥಿ ಸಂಘಟನೆಯಾಗಿರುವ NSUI ಒಂದು ಸ್ಥಾನವನ್ನು ಗೆದ್ದಿದೆ.
ಎಬಿವಿಪಿ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಕಾರ್ಯದರ್ಶಿ ಸ್ಥಾನವನ್ನು ಗೆದ್ದಿದ್ದರೆ, NSUI ಜಂಟಿ ಕಾರ್ಯದರ್ಶಿ ಸ್ಥಾನದಲ್ಲಿ ಗೆಲುವು ಸಾಧಿಸಿದೆ. ವಿದ್ಯಾರ್ಥಿ ಸಂಘದ ವಿವಿಧ ಹುದ್ದೆಗೆ ಶುಕ್ರವಾರ (ಸೆ 9) ಚುನಾವಣೆ ನಡೆದಿತ್ತು.
ದೆಹಲಿ ವಿವಿ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಅಮಿತ್ ತನ್ವರ್, ಉಪಾಧ್ಯಕ್ಷರಾಗಿ ಪ್ರಿಯಾಂಕ ಛಬ್ರಿ, ಅಂಕಿತ್ ಸಂಘ್ವಾನ್ ಕಾರ್ಯದರ್ಶಿಯಾಗಿ ಮತ್ತು ಮೋಹಿತ್ ಗರಿದ್ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
ದೆಹಲಿ ವಿವಿ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿರುವ ಅಮಿತ್ ತನ್ವರ್ 16,357, ಪ್ರಿಯಾಂಕಾ ಛಬ್ರಿ 15,592, ಅಂಕಿತ್ 15,516 ಮತ್ತು ಮೋಹಿತ್ ಗರಿದ್ 16,526 ಮತಗಳನ್ನು ಪಡೆದಿದ್ದಾರೆ.
ವೆಂಕಯ್ಯ ನಾಯ್ಡು ಸೇರಿ, ಎಬಿವಿಪಿ ವಿದ್ಯಾರ್ಥಿ ಮುಖಂಡರಿಗೆ ಅಭಿನಂದನೆಯ ಮಹಾಪೂರ, ಸ್ಲೈಡಿನಲ್ಲಿ ಮುಂದುವರಿಸಲಾಗಿದೆ.
|
ಎಬಿವಿಪಿ ಕಾರ್ಯಕರ್ತರು
ಸಂಘಟನೆಯ ಮುಖಂಡರ ಜಯಕ್ಕೆ ಕಾರ್ಯಕರ್ತರಿಂದ ವಿಜಯೋತ್ಸವ.
|
ಬಿಜೆಪಿ ಮುಖಂಡರ ಅಭಿನಂದನೆ
ಎಬಿವಿಪಿ ಸಂಘಟನೆಯ ಮೇಲೆ ನಂಬಿಕೆಯಿಟ್ಟಿದ್ದಕ್ಕೆ ಅಭಿನಂದನೆ ಎಂದು ಬಿಜೆಪಿ ಮುಖಂಡ ಶಾನವಾಜ್ ಹುಸೇನ್ ಟ್ವೀಟ್ ಮಾಡಿದ್ದಾರೆ.
|
ನಾಯಕರಿಂದ ಅಭಿನಂದನೆ
ದೆಹಲಿ ವಿವಿ ಚುನಾವಣೆ ಗೆದ್ದ ಎಲ್ಲಾ ಅಭ್ಯರ್ಥಿಗಳಿಗೆ ಅಭಿನಂದನೆಗಳು ಎಂದು ಬಿಜೆಪಿಯ ಮತ್ತೋರ್ವ ನಾಯಕಿ ಮೀನಾಕ್ಷಿ ಲೇಖಿ ಟ್ವೀಟ್ ಮಾಡಿದ್ದಾರೆ.
|
ಎಬಿವಿಪಿ ರಾಷ್ಟ್ರೀಯತೆ
ಎಬಿವಿಪಿ ದೇಶದ ಸಂಸ್ಕೃತಿ ಮತ್ತು ರಾಷ್ಟ್ರೀಯತೆಗೆ ಬದ್ದವಾಗಿದೆ ಎಂದು ಪ್ರೊ. ರಾಕೇಶ್ ಸಿನ್ಹಾ ಟ್ವೀಟ್
|
ವೆಂಕಯ್ಯ ನಾಯ್ಡು ಅಭಿನಂದನೆ
ಎಬಿವಿಪಿ ಎಲ್ಲಾ ಮುಖಂಡರಿಗೆ ಅಭಿನಂದನೆ. ಯುವ ಸಮುದಾಯದ ಹೊಸ ಚಿಂತನೆ ಚುನಾವಣೆಯ ಫಲಿತಾಂಶ ತೋರಿಸುತ್ತಿದೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ












Click it and Unblock the Notifications